ಅಸಂಸದೀಯ ಪದಗಳಿಂದ ಅಧೋಗತಿಗೆ ಇಳಿದ ಅಧಿವೇಶನ: ಸದನದ ಮರ್ಯಾದೆ ರೇಖೆಯ ಗಡಿ ದಾಟಿದ ಶಾಸಕರು!

ಆಡಳಿತ ಮತ್ತು ವಿರೋಧ ಪಕ್ಷಗಳ ಸದಸ್ಯರು ಹಾಗೂ ಸ್ಪೀಕರ್ ಯುಟಿ ಖಾದರ್ ಅವರು ಸದನದಲ್ಲಿ ಅಸಂಸದೀಯ ಪದಗಳನ್ನು ಬಳಸುವುದರೊಂದಿಗೆ ಕರ್ನಾಟಕ ವಿಧಾನಸಭೆಯಲ್ಲಿ ಕಲಾಪಗಳು ಹೊಸ ಮಟ್ಟಕ್ಕೆ ತಲುಪಿದವು.
ವಿಧಾನಸಭೆ ಅಧಿವೇಶನ
ವಿಧಾನಸಭೆ ಅಧಿವೇಶನ

ಬೆಂಗಳೂರು: ವಿಧಾನಸೌಧದಲ್ಲಿ ಕಿಡಿಗೇಡಿಯೊಬ್ಬ ‘ಪಾಕಿಸ್ತಾನ್‌ ಜಿಂದಾಬಾದ್‌’ ಎಂದು ಘೋಷಣೆ ಕೂಗಿದ್ದಾನೆ ಎಂದು ಆರೋಪಿಸಿ ವಿಧಾನಮಂಡಲದ ಉಭಯ ಸದನಗಳಲ್ಲಿ ಬಿಜೆಪಿ ಗದ್ದಲ ಎಬ್ಬಿಸಿದ್ದರಿಂದಾಗಿ ಬುಧವಾರದ ಕಲಾಪ ಸುಗಮವಾಗಿ ನಡೆಯಲಿಲ್ಲ. ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯರು ಗದ್ದಲ ಎಬ್ಬಿಸಿ, ಧರಣಿ ನಡೆಸಿದಾಗ ಸಭಾಧ್ಯಕ್ಷ ಯು.ಟಿ.ಖಾದರ್‌ ಅವರು ಕಲಾಪವನ್ನು ಗುರುವಾರಕ್ಕೆ ಮುಂದೂಡಿದರು.

ವಿಧಾನಪರಿಷತ್ತಿನಲ್ಲಿ ಇದೇ ವಿಷಯದ ಚರ್ಚೆಯ ವೇಳೆ, ಏಕವಚನ ಬಳಸಿದ್ದಾರೆಂದು ಸಿಟ್ಟಿಗೆದ್ದ ಬಿಜೆಪಿ ಸದಸ್ಯರು ಕಾಂಗ್ರೆಸ್‌ ಸದಸ್ಯರತ್ತ ಮುನ್ನುಗ್ಗಿದ ಘಟನೆಯೂ ನಡೆಯಿತು.

ಇದೇ ವೇಳೆ ಆಡಳಿತ ಮತ್ತು ವಿರೋಧ ಪಕ್ಷಗಳ ಸದಸ್ಯರು ಹಾಗೂ ಸ್ಪೀಕರ್ ಯುಟಿ ಖಾದರ್ ಅವರು ಸದನದಲ್ಲಿ ಅಸಂಸದೀಯ ಪದಗಳನ್ನು ಬಳಸುವುದರೊಂದಿಗೆ ಕರ್ನಾಟಕ ವಿಧಾನಸಭೆಯಲ್ಲಿ ಕಲಾಪಗಳು ಹೊಸ ಮಟ್ಟಕ್ಕೆ ತಲುಪಿದವು.

ನೂತನವಾಗಿ ಆಯ್ಕೆಯಾಗಿರುವ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಅವರ ಅನುಯಾಯಿಗಳು ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗುತ್ತಿದ್ದಾರೆ ಎಂದು ಆರೋಪಿಸಿದ ಬಿಜೆಪಿ ಶಾಸಕ ಮತ್ತು ಹಿರಿಯ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್, ಸರ್ಕಾರವು ವ್ಯವಸ್ಥಿತವಾಗಿ ವಿಷಯವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದೆ ಎಂದು ಹೇಳಿದರು. ಕಾಂಗ್ರೆಸ್ ಅಥವಾ ಬಿಜೆಪಿ ಮಾತ್ರವಲ್ಲ, ಯಾವುದೇ ಪಕ್ಷವೂ ಇದನ್ನು ಮಾಡಲು ಸಾಧ್ಯವಿಲ್ಲ. ಸಾಕಷ್ಟು ಹೋರಾಟದ ನಂತರ ನಮಗೆ ಸ್ವಾತಂತ್ರ್ಯ ಸಿಕ್ಕಿತು. ನಾವು ಅಖಂಡ ಭಾರತದ ಕನಸು ಕಂಡಿದ್ದೇವೆ ಎಂದರು.

ವಿಧಾನಸಭೆ ಅಧಿವೇಶನ
ಮುಸ್ಲಿಮರ ಕೆಲಸ ಮಾಡಲ್ಲ ಎಂದ ಯತ್ನಾಳ್ ಗೆ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಅನುದಾನ ಏಕೆ ಬೇಕು?: ಸಚಿವ ಜಮೀರ್ ಅಹಮದ್

ಡಾ.ಬಿ.ಆರ್.ಅಂಬೇಡ್ಕರ್ ಅವರ ದಿ ಪಾರ್ಟಿಷನ್ ಆಫ್ ಇಂಡಿಯಾ ಪುಸ್ತಕವನ್ನು ಉಲ್ಲೇಖಿಸಿದ ಯತ್ನಾಳ್, ಸಂವಿಧಾನದ ಪಿತಾಮಹ ಎಂದಿಗೂ ವಿಭಜಿತ ಭಾರತವನ್ನು ಬಯಸಲಿಲ್ಲ ಎಂದು ಹೇಳಿದರು. ಈ ರೀತಿಯ ಘಟನೆಗಳು ಸಮಸ್ಯೆಗೆ ಕಾರಣವಾಗುತ್ತವೆ ಎಂದು ಅವರು ಭವಿಷ್ಯ ನುಡಿದಿದ್ದರು. ನಿಖರವಾಗಿ, ಅವರು ಭವಿಷ್ಯ ನುಡಿದ ರೀತಿಯಲ್ಲಿ, ಜನರು ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗುತ್ತಿದ್ದಾರೆ ಮತ್ತು ಪಾಕಿಸ್ತಾನದ ಧ್ವಜವನ್ನು ಹಾರಿಸುತ್ತಿದ್ದಾರೆ. ಈ ಜನರು ಈ ನೆಲದಿಂದ ತಿನ್ನುತ್ತಾರೆ ಮತ್ತು ಈ ದೇಶದಿಂದ ಕುಡಿಯುತ್ತಾರೆ ಮತ್ತು ಅವರು ಈ ರಾಷ್ಟ್ರಕ್ಕೆ ಬದ್ಧರಾಗಿ ಮತ್ತು ಪ್ರಾಮಾಣಿಕವಾಗಿರಬೇಕು. ಆದರೆ ಈ ಟಿ**** ಜಿ***** (ತಾಯ್ಗಂಡರು), ಎಲ್ಲಾ ಲಾಭಗಳನ್ನು ಪಡೆದರೂ ಪಾಕಿಸ್ತಾನದ ಪರ ಘೋಷಣೆಗಳನ್ನು ಎತ್ತುತ್ತಿದ್ದಾರೆ ಯಾರಾದರೂ ಹಿಂದೂ, ಮುಸ್ಲಿಂ ಅಥವಾ ಕ್ರಿಶ್ಚಿಯನ್ ಪಾಕಿಸ್ತಾನದ ಪರವಾಗಿದ್ದರೆ, ಅವರು ಟಿ**** ಜಿ**** ಮತ್ತು ಅವರನ್ನು ಶಿಕ್ಷಿಸಬೇಕು. ಅವರು ನಮಕ್ ಹರಾಮ್ ಆಗಿದ್ದಾರೆ ಎಂದು ಅವರು ಹೇಳಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್‌ನ ಹಿರಿಯ ಶಾಸಕ, ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಅವರು, ಸದನದೊಳಗೆ ಇಂತಹ ಪದಗಳನ್ನು ಬಳಸುವಂತಿಲ್ಲ, ಏಕೆಂದರೆ ಅವು ಅಸಂಸದೀಯ. ಆದರೆ ಈ ಹಿಂದೆ ಸದನದಲ್ಲಿ ಇಂತಹ ಪದಗಳನ್ನು ಬಳಸಲಾಗಿತ್ತು, ಯತ್ನಾಳ್ ಅವರು ಪಾಕಿಸ್ತಾನದ ಪರ ಜನರಿಗಾಗಿ ಇಂತಹ ಪದಗಳನ್ನು ಬಳಸುತ್ತಿದ್ದಾರೆ ಎಂದು ಸ್ಪೀಕರ್ ಖಾದರ್ ಹೇಳಿದ್ದಾರೆ ಎಂದು ರಾಯರೆಡ್ಡಿ ಕೇಳಿದರು, ಅಂದರೆ ನಾವು ಬೋ...ಮ..ಅಥವಾ ಸೂ..ಮ...ಪದಗಳನ್ನು ಬಳಸಬಹುದೇ? ಎಂದು ಪ್ರಶ್ನಿಸಿದರು.

ನೀವು ಮಾತನಾಡುವಾಗ, ನೀವು ಬೋ...ಮ.. ಎಂದು ಹೇಳಬಹುದು. ಈಗ ಕುಳಿತುಕೊಳ್ಳಿ ಎಂದು ರಾಯರೆಡ್ಡಿಗೆ ಖಾದರ್ ಹೇಳಿದರು. ಯತ್ನಾಳ್ ಮಾತು ಮುಂದುವರಿಸುವ ಮುನ್ನವೇ ಖಾದರ್ ಅವರು, ಪಾಕಿಸ್ತಾನವನ್ನು ಗುರಿಯಾಗಿಸಿಕೊಂಡರೆ ಅಂತಹ ಪದಗಳನ್ನು ಬಳಸಲು ಶಾಸಕರಿಗೆ ಸಂಪೂರ್ಣ ಅನುಮತಿ ನೀಡುತ್ತಿರುವುದಾಗಿ ಸ್ವಯಂಪ್ರೇರಣೆಯಿಂದ ಹೇಳಿದರು.

ಈ ವೇಳೆ ಬಸನಗೌಡ ಪಾಟೀಲ್ ಯತ್ನಾಳ್, ನಿಮ್ಮಂತ ದೇಶ ಭಕ್ತರು ಅಭಿನಾಂದನಾರ್ಹ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಸಭಾಧ್ಯಕ್ಷರು ನಾವೆಲ್ಲಾ ಭಾರತೀಯರು ಎಂದು ಸಮರ್ಥಿಸಿಕೊಂಡರು. ಚರ್ಚೆಯಲ್ಲಿ ಭಾಗವಹಿಸಿದ ಎಲ್ಲಾ ಶಾಸಕರು ಪಕ್ಷಬೇಧ ಮರೆತು ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಂಡು ಗಲ್ಲು ಶಿಕ್ಷೆಗೆ ಒಳಪಡಿಸಿ ಎಂದು ಒತ್ತಾಯಿಸಿದರು. ಬಿಜೆಪಿಯವರು ಈ ವಿಚಾರವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುವುದು ಸರಿಯಲ್ಲ ಎಂದು ಕಾಂಗ್ರೆಸ್ಸಿಗರು ಆಕ್ಷೇಪಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com