ಪರಿಷತ್ತಿನಲ್ಲಿ ಸೋಲಾಗಿದ್ದ ಹಿಂದೂ ಧಾರ್ಮಿಕ ದತ್ತಿ ಮಸೂದೆಗೆ ವಿಧಾನಸಭೆಯಲ್ಲಿ ಮತ್ತೆ ಅಂಗೀಕಾರ!

ಕಳೆದ ವಾರ ವಿಧಾನ ಪರಿಷತ್ತಿನಲ್ಲಿ ಪ್ರತಿಪಕ್ಷ ಬಿಜೆಪಿ-ಜೆಡಿ(ಎಸ್) ಮೈತ್ರಿಯಿಂದ ಪರಾಭವಗೊಂಡಿದ್ದ 10 ಲಕ್ಷ ರೂ.ಗೂ ಅಧಿಕ ವಾರ್ಷಿಕ ಆದಾಯವಿರುವ ದೇವಸ್ಥಾನಗಳಿಂದ ನಿಧಿ ಸಂಗ್ರಹಿಸುವ ಮಸೂದೆಯನ್ನು ಮರುಪರಿಶೀಲನೆಗೆ ಗುರುವಾರ ಮತ್ತೊಮ್ಮೆ ಕೈಗೆತ್ತಿಕೊಂಡು ವಿಧಾನಸಭೆ ಅಂಗೀಕರಿಸಿದೆ.
ವಿಧಾನಸಭೆ
ವಿಧಾನಸಭೆ
Updated on

ಬೆಂಗಳೂರು: ಕಳೆದ ವಾರ ವಿಧಾನ ಪರಿಷತ್ತಿನಲ್ಲಿ ಪ್ರತಿಪಕ್ಷ ಬಿಜೆಪಿ-ಜೆಡಿ(ಎಸ್) ಮೈತ್ರಿಯಿಂದ ಪರಾಭವಗೊಂಡಿದ್ದ 10 ಲಕ್ಷ ರೂ.ಗೂ ಅಧಿಕ ವಾರ್ಷಿಕ ಆದಾಯವಿರುವ ದೇವಸ್ಥಾನಗಳಿಂದ ನಿಧಿ ಸಂಗ್ರಹಿಸುವ ಮಸೂದೆಯನ್ನು ಮರುಪರಿಶೀಲನೆಗೆ ಗುರುವಾರ ಮತ್ತೊಮ್ಮೆ ಕೈಗೆತ್ತಿಕೊಂಡು ವಿಧಾನಸಭೆ ಅಂಗೀಕರಿಸಿದೆ. ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿಗಳ (ತಿದ್ದುಪಡಿ) ಮಸೂದೆ, 2024ನ್ನು ಈಗ ನೇರವಾಗಿ ರಾಜ್ಯಪಾಲರ ಒಪ್ಪಿಗೆಗಾಗಿ ಕಳುಹಿಸಲಾಗುವುದು ನಂತರ ಅದು ಕಾನೂನಾಗಿ ಪರಿಣಮಿಸುತ್ತದೆ.

ಫೆಬ್ರವರಿ 21 ರಂದು ವಿಧಾನಸಭೆಯಲ್ಲಿ ಅಂಗೀಕರಿಸಲ್ಪಟ್ಟ ನಂತರ ಫೆಬ್ರವರಿ 23 ರಂದು ಪ್ರತಿಪಕ್ಷಗಳು ಬಹುಮತ ಹೊಂದಿರುವ ಮೇಲ್ಮನೆಯಲ್ಲಿ ಧ್ವನಿ ಮತದಿಂದ ಮಸೂದೆಗೆ ಸೋಲಾಗಿತ್ತು.

ಗುರುವಾರ ವಿಧಾನಸಭೆಯಲ್ಲಿ ವಿಧೇಯಕವನ್ನು ಪ್ರಾಯೋಗಿಕವಾಗಿ ಮಂಡಿಸಿ ಮಾತನಾಡಿದ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ, ಈ ಮಸೂದೆಯನ್ನು ವಿಧಾನಸಭೆಯಲ್ಲಿ ಈ ಹಿಂದೆಯೇ ಅಂಗೀಕರಿಸಲಾಗಿತ್ತು, ಆದರೆ ಮೇಲ್ಮನೆಯಲ್ಲಿ ಸೋಲಾಗಿತ್ತು. ಮತ್ತೊಮ್ಮೆ ಮಸೂದೆಯನ್ನು ಅಂಗೀಕರಿಸುವಂತೆ ವಿಧಾನಸಭೆಯಲ್ಲಿ ವಿನಂತಿಸುವುದಾಗಿ ಹೇಳಿದರು.

ವಿಧಾನಸಭೆ
ಮೂರು ತಿಂಗಳ ನಂತರ ಮೇಲ್ಮನೆಯಲ್ಲಿ ಹಿಂದೂ ಧಾರ್ಮಿಕ ದತ್ತಿ ಕಾಯ್ದೆಗೆ ಅನುಮೋದನೆ- ಡಿಕೆ ಶಿವಕುಮಾರ್

ನಂತರ ಸ್ಪೀಕರ್ ಯು ಟಿ ಖಾದರ್ ಮಸೂದೆಯನ್ನು ಮತಕ್ಕೆ ಹಾಕಿದರು ಮತ್ತು ಅದನ್ನು ಧ್ವನಿ ಮತದಿಂದ ಅಂಗೀಕರಿಸಲಾಯಿತು.'ಕರ್ನಾಟಕ ಸರ್ಕಾರದ ಗೆಜೆಟರ್ ಪ್ರಕಾರ ಮುಜರಾಯಿ' ಎಂಬುದು ಧಾರ್ಮಿಕ, ದತ್ತಿ ಉದ್ದೇಶಗಳಿಗಾಗಿ ಮತ್ತು ಧಾರ್ಮಿಕ, ದತ್ತಿ ಸಂಸ್ಥೆಗಳ ನಿರ್ವಹಣೆಗಾಗಿ ಸರ್ಕಾರದಿಂದ ಮಾಡಿದ ಅನುದಾನವನ್ನು ಸೂಚಿಸುತ್ತದೆ. ಧಾರ್ಮಿಕ ಮತ್ತು ದತ್ತಿ ಇಲಾಖೆಯು ಮುಜರಾಯಿ ಇಲಾಖೆ ಎಂದು ಜನಪ್ರಿಯವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com