ಬೆಳಗಾವಿ: ಹೆಚ್ಚುವರಿ ವರದಕ್ಷಿಣೆ ಕೇಳಿ ಮದುವೆಯಾಗಲು ನಿರಾಕರಿಸಿದ ವರ ಇದೀಗ ಹಿಂಡಲಗಾ ಜೈಲು ಪಾಲು

ಬೆಳಗಾವಿ ಜಿಲ್ಲೆಯಲ್ಲಿ ವರದಕ್ಷಿಣೆಗಾಗಿ ಬೇಡಿಕೆ ಇಟ್ಟಿದ್ದಕ್ಕಾಗಿ ವರನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಖಾನಾಪುರ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ವ್ಯಕ್ತಿಯನ್ನು ಹಿಂಡಲಗಾ ಕಾರಾಗೃಹಕ್ಕೆ ಕಳುಹಿಸಲಾಗಿದೆ. 
ಹಿಂಡಲಗಾ ಕೇಂದ್ರ ಕಾರಾಗೃಹ
ಹಿಂಡಲಗಾ ಕೇಂದ್ರ ಕಾರಾಗೃಹ
Updated on

ಬೆಳಗಾವಿ: ಜಿಲ್ಲೆಯಲ್ಲಿ ವರದಕ್ಷಿಣೆಗಾಗಿ ಬೇಡಿಕೆ ಇಟ್ಟಿದ್ದಕ್ಕಾಗಿ ವರನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಖಾನಾಪುರ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ವ್ಯಕ್ತಿಯನ್ನು ಹಿಂಡಲಗಾ ಕಾರಾಗೃಹಕ್ಕೆ ಕಳುಹಿಸಲಾಗಿದೆ. ಜೈಲು ಪಾಲಾದ ವರನನ್ನು ಸಚಿನ್ ಪಾಟೀಲ್ ಎಂದು ಗುರುತಿಸಲಾಗಿದೆ.

ವರನಿಗೆ 50 ಗ್ರಾಂ ಚಿನ್ನ ಮತ್ತು 1 ಲಕ್ಷ ನಗದು ನೀಡಲು ವಧುವಿನ ಮನೆಯವರು ಒಪ್ಪಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. 

ಲೋಕಮಾನ್ಯ ಚೌಲ್ಟ್ರಿಯಲ್ಲಿ ಮದುವೆ ನಿಶ್ಚಯವಾಗಿತ್ತು. ಆದರೆ, ಮದುವೆ ದಿನಾಂಕ ಹತ್ತಿರ ಬರುತ್ತಿದ್ದಂತೆ ವರನ ಮನೆಯವರು 100 ಗ್ರಾಂ ಚಿನ್ನಾಭರಣ ಹಾಗೂ 10 ಲಕ್ಷ ರೂ. ವರದಕ್ಷಿಣೆ ನೀಡುವಂತೆ ಬೇಡಿಕೆ ಇಟ್ಟಿದ್ದರು.

ವಧುವಿನ ಕುಟುಂಬವು ಅವರ ಹೊಸ ಬೇಡಿಕೆಯನ್ನು ಪೂರೈಸಲು ನಿರಾಕರಿಸಿದಾಗ, ಆರೋಪಿ ಸಚಿನ್ ಪಾಟೀಲ್ ಮದುವೆಯನ್ನು ನಿರಾಕರಿಸಿದ್ದರು.

ಮದುವೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದ ವಧುವಿನ ಮನೆಯವರು ವರನ ವಿರುದ್ಧ ಖಾನಾಪುರ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಮದುಮಗನನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com