ಬೆಳಗಾವಿ: ಮಕ್ಕಳು ಹೂ ಕಿತ್ತಿದ್ದಕ್ಕೆ ಅಂಗನವಾಡಿ ಕಾರ್ಯಕರ್ತೆಯ ಮೂಗು ಕತ್ತರಿಸಿದ್ದ ಆರೋಪಿ ಬಂಧನ

ಕೋಪದ ಭರದಲ್ಲಿ ಅಂಗನವಾಡಿ ಕಾರ್ಯಕರ್ತೆಯ ಮೂಗನ್ನು ಕತ್ತರಿಸಿದ ವ್ಯಕ್ತಿಯನ್ನು ಗುರುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಕಲ್ಯಾಣಿ ಜ್ಯೋತಿಬಾ ಮೋರೆ (44) ಅವರನ್ನು ಕಾಕತಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಳಗಾವಿ: ಕೋಪದ ಭರದಲ್ಲಿ ಅಂಗನವಾಡಿ ಕಾರ್ಯಕರ್ತೆಯ ಮೂಗನ್ನು ಕತ್ತರಿಸಿದ ವ್ಯಕ್ತಿಯನ್ನು ಗುರುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಕಲ್ಯಾಣಿ ಜ್ಯೋತಿಬಾ ಮೋರೆ (44) ಅವರನ್ನು ಕಾಕತಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಪೊಲೀಸರ ಪ್ರಕಾರ, ಮಂಗಳವಾರದಂದು ಬೆಳಗಾವಿ ಜಿಲ್ಲೆಯ ಬಸುರ್ಟೆ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ಸಂತ್ರಸ್ತೆಯ ಮಕ್ಕಳು ಹಿಂದಿನ ದಿನ ಆರೋಪಿಯ ತೋಟದಿಂದ ಹೂವುಗಳನ್ನು ಕಿತ್ತಿದ್ದರು ಎಂಬ ನೆಪದಲ್ಲಿ ಆಕೆಯ ಮೂಗು ಕತ್ತರಿಸಿದ್ದಾನೆ.

ಸಂತ್ರಸ್ತೆಯನ್ನು ಸುಗಂಧಾ ಮೋರೆ (50) ಎಂದು ಗುರುತಿಸಲಾಗಿದ್ದು, ಆರೋಪಿಯು ಆಕೆಯೊಂದಿಗೆ ಜಗಳವಾಡಿ ಆಕೆಯ ಮೂಗು ಕತ್ತರಿಸಿದ್ದಾನೆ. ತೀವ್ರ ರಕ್ತಸ್ರಾವಗೊಂಡಿದ್ದ ಸುಗಂಧಾರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.

ಘಟನೆ ಬಳಿಕ ಸ್ಥಳದಿಂದ ಪರಾರಿಯಾಗಿದ್ದ ಆರೋಪಿಯನ್ನು ಇದೀಗ ಬಂಧಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com