ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಶುಕ್ರವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಿರಿಧಾನ್ಯ ಮತ್ತು ಸಾವಯವ ಅಂತರರಾಷ್ಟ್ರೀಯ ವ್ಯಾಪಾರ ಮೇಳ 2024 ಅನ್ನು ಉದ್ಘಾಟಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಶುಕ್ರವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಿರಿಧಾನ್ಯ ಮತ್ತು ಸಾವಯವ ಅಂತರರಾಷ್ಟ್ರೀಯ ವ್ಯಾಪಾರ ಮೇಳ 2024 ಅನ್ನು ಉದ್ಘಾಟಿಸಿದರು.

ಬಸವನಗುಡಿಯಲ್ಲಿ ಅವರೆಬೇಳೆ ಮೇಳ ಆರಂಭ: ಜನರ ಮನಸೆಳೆದ ವಿವಿಧ ಖಾದ್ಯಗಳು

ಶ್ರೀ ವಾಸವಿ ಕಾಂಡಿಮೆಂಟ್ಸ್ ಆಯೋಜಿಸಿರುವ ವಾರ್ಷಿಕ ಅವರೆಬೇಳೆ ಮೇಳ ಶುಕ್ರವಾರ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಆರಂಭಗೊಂಡಿದ್ದು, ವಿವಿಧ ಖಾದ್ಯಗಳು ಜನ ಮನಸೆಳೆದವು.
Published on

ಬೆಂಗಳೂರು: ಶ್ರೀ ವಾಸವಿ ಕಾಂಡಿಮೆಂಟ್ಸ್ ಆಯೋಜಿಸಿರುವ ವಾರ್ಷಿಕ ಅವರೆಬೇಳೆ ಮೇಳ ಶುಕ್ರವಾರ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಆರಂಭಗೊಂಡಿದ್ದು, ವಿವಿಧ ಖಾದ್ಯಗಳು ಜನ ಮನಸೆಳೆದವು.

24ನೇ ಆವೃತಿಯ ಅವರೆಬೇಳೆ ಮೇಳ ಇದಾಗಿದ್ದು, ಮೇಳದಲ್ಲಿ ವಿವಿಧ ಖಾದ್ಯಗಳನ್ನು ಸವಿಯುವ ಅವಕಾಶ ನಾಗರಿಕರಿಗೆ ಲಭಿಸುತ್ತಿದೆ. ಅವರೆ ದೋಸೆ, ಪಾಯಸ, ಮಂಚೂರಿಯನ್, ವಡೆ, ಕೋಡುಬಳೆ, ಐಸ್‌ಕ್ರೀಂ, ಹಲ್ವಾ ಸೇರಿದಂತೆ ನೂರಕ್ಕೂ ಹೆಚ್ಚು ತಿನಿಸುಗಳು ಈ ಮೇಳದಲ್ಲಿ ಲಭ್ಯವಿದೆ.

ಈ ವರ್ಷ ಸುಮಾರು 80 ಸ್ಟಾಲ್‌ಗಳಿವೆ. ದೋಸೆಯಂತಹ ಹೆಚ್ಚು ಬೇಡಿಕೆಯಿರುವ ತಿನಿಸುಗಳಿಗೆ ಸುಮಾರು ಐದು ಕೌಂಟರ್‌ಗಳನ್ನು ಇರಿಸಲಾಗಿದೆ. ಹಿರಿಯ ನಾಗರೀಕರಿಗೆ ವಿಶೇಷ ಕೌಂಟರ್ ಜತೆಗೆ ಪ್ರತ್ಯೇಕ ಆಸನ ವ್ಯವಸ್ಥೆ ಮಾಡಲಾಗಿದೆ.

ಮೇಳದಲ್ಲಿ ಕೇವಲ ತಿಂಡಿ ತಿನಿಸು ಅಷ್ಟೇ ಅಲ್ಲದೆ, ಬಟ್ಟೆ, ಸೌಂದರ್ಯವರ್ಧಕಗಳ ಮಳಿಗೆಗಳು, ಮಕ್ಕಳಿಗೆ ಆಟದ ವಲಯಗಳನ್ನೂ ಸ್ಥಾಪಿಸಲಾಗಿದೆ.

ವಾಸವಿ ಕಾಂಡಿಮೆಂಟ್ಸ್‌ನ ಕೆ.ಎಸ್.ಸ್ವಾತಿ ಮಾತನಾಡಿ, ಕೋವಿಡ್ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಸ್ಯಾನಿಟೈಸರ್ ವ್ಯವಸ್ಥೆಗಳನ್ನು ಮಾಡಲಾಗಿದೆ. ಹಿರಿಯ ನಾಗರಿಕರು ಮತ್ತು ಗರ್ಭಿಣಿಯರಿಗೆ ಪ್ರತ್ಯೇಕ ಆಸನ ವ್ಯವಸ್ಥೆಗಳಿವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com