ತುಮಕೂರು: ಕಾರು-ಸ್ಕೂಟರ್ ನಡುವೆ ಭೀಕರ ಅಪಘಾತ; ಮೂವರ ದುರ್ಮರಣ!

ಆದಿಚುಂಚನಗಿರಿ ಮಠಕ್ಕೆ ಬೈಕ್‌ನಲ್ಲಿ ತೆರಳಿ ವಾಪಸ್ಸಾಗುತ್ತಿದ್ದಾಗ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ದುರ್ಮರಣ ಹೊಂದಿದ್ದಾರೆ.
ತುಮಕೂರು: ಕಾರು-ಸ್ಕೂಟರ್ ನಡುವೆ ಭೀಕರ ಅಪಘಾತ; ಮೂವರ ದುರ್ಮರಣ!

ತುಮಕೂರು: ಆದಿಚುಂಚನಗಿರಿ ಮಠಕ್ಕೆ ಬೈಕ್‌ನಲ್ಲಿ ತೆರಳಿ ವಾಪಸ್ಸಾಗುತ್ತಿದ್ದಾಗ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ದುರ್ಮರಣ ಹೊಂದಿದ್ದಾರೆ.

ತುಮಕೂರಿನ ತುರುವೇಕೆರೆ ತಾಲೂಕಿನ ಜೋಡಗಟ್ಟೆ ಬಳಿ ಈ ಅಪಘಾತ ಸಂಭವಿಸಿದೆ. ಮೃತರನ್ನು ತಿಪಟೂರು ಮೂಲದ 21 ವರ್ಷದ ನರಸಿಂಹ ಮೂರ್ತಿ, 21 ವರ್ಷದ ಅನಿಲ್ ಕುಮಾರ್ ಮತ್ತು 19 ವರ್ಷದ ಕಾವ್ಯ ಎಂದು ಗುರುತಿಸಲಾಗಿದೆ.

ಆದಿಚುಂಚನಗಿರಿ ಮಠಕ್ಕೆ ಸ್ಕೂಟರ್‌ನಲ್ಲಿ ತೆರಳಿದ್ದ ಮೂವರು ಸ್ನೇಹಿತರು ವಾಪಸ್ಸಾಗುತ್ತಿದ್ದಾಗ ಜೋಡಗಟ್ಟೆ ಬಳಿ ಸ್ಕೂಟರ್‌-ಕಾರು ಮುಖಾಮುಖಿ ಡಿಕ್ಕಿಯಾಗಿವೆ. ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದು, ಯುವತಿ ಅಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾಳೆ.

ಅಪಘಾತದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com