ಬೆಂಗಳೂರು: ಜನವರಿ 22 ರಂದು ಅಯೋಧ್ಯೆಯಲ್ಲಿ ನೂತನ ಶ್ರೀರಾಮನ ವಿಗ್ರಹ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಅಂದು ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ನಡೆಸುವ ಬಗ್ಗೆ ಕಾಂಗ್ರೆಸ್ ಸರ್ಕಾರ ಸುತ್ತೋಲೆ ಹೊರಡಿಸಿದೆ.
ಈ ಸುತ್ತೋಲೆಯನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿರುವ ವಿರೋಧ ಪಕ್ಷದ ನಾಯಕ ಆರ್.ಅಶೋಕ್,ಕಡೆಗೂ ರಾಮಭಕ್ತಿಗೆ ಶರಣಾದ ಕಾಂಗ್ರೆಸ್ ಸರ್ಕಾರ, ಜನವರಿ 22ರಂದು ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಆಯೋಜಿಸಲು ರಾಜ್ಯ ಸರ್ಕಾರ ಆದೇಶಿಸಿದೆ.
ಇದು ರಾಮಭಕ್ತರ, ಹಿಂದೂ ಕಾರ್ಯಕರ್ತರ ಹೋರಾಟಕ್ಕೆ ಸಿಕ್ಕ ಜಯ. ತುಷ್ಟೀಕರಣದ ವಿರುದ್ಧ ಹಿಂದುತ್ವದ ದಿಗ್ವಿಜಯ ಎಂದು ಬಣ್ಣಿಸಿದ್ದಾರೆ.
Advertisement