ಕಾಡುಗೊಲ್ಲ ಸಮುದಾಯ ಎಸ್ ಟಿ ವರ್ಗಕ್ಕೆ ಸೇರ್ಪಡೆ: ಕೇಂದ್ರ ಸಚಿವರೊಂದಿಗೆ ಕುಮಾರಸ್ವಾಮಿ ಮಾತುಕತೆ

ಕೇಂದ್ರ ಬುಡಕಟ್ಟು ವ್ಯವಹಾರ ಹಾಗೂ ಕೃಷಿ- ರೈತ ಕಲ್ಯಾಣ ಖಾತೆ ರಾಜ್ಯ ಸಚಿವ ಅರ್ಜುನ್ ಮುಂಡಾ ಭಾನುವಾರ ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದರು.
ಅರ್ಜುನ್ ಮುಂಡಾ ಅವರೊಂದಿಗೆ ಕುಮಾರಸ್ವಾಮಿ ಮಾತುಕತೆ
ಅರ್ಜುನ್ ಮುಂಡಾ ಅವರೊಂದಿಗೆ ಕುಮಾರಸ್ವಾಮಿ ಮಾತುಕತೆ
Updated on

ಬೆಂಗಳೂರು: ಕೇಂದ್ರ ಬುಡಕಟ್ಟು ವ್ಯವಹಾರ ಹಾಗೂ ಕೃಷಿ- ರೈತ ಕಲ್ಯಾಣ ಖಾತೆ ರಾಜ್ಯ ಸಚಿವ ಅರ್ಜುನ್ ಮುಂಡಾ ಭಾನುವಾರ ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದರು.

 ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ಸಚಿವರೊಂದಿಗೆ ಹಲವು ವಿಚಾರಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಕುಮಾರಸ್ವಾಮಿ, ಕಾಡುಗೊಲ್ಲ ಸಮುದಾಯವನ್ನು ಎಸ್ ಟಿ ವರ್ಗಕ್ಕೆ ಸೇರಿಸುವುದು, ರಾಜ್ಯದ ತೆಂಗು ಬೆಳೆಗಾರರಿಂದ ಕೊಬರಿ ಖರೀದಿ ಹಾಗೂ ರಾಜ್ಯ ಎದುರಿಸುತ್ತಿರುವ ಬರ ಪರಿಸ್ಥಿತಿಯ ಬಗ್ಗೆ ಕೇಂದ್ರ ಸಚಿವರೊಂದಿಗೆ ಸುದೀರ್ಘವಾಗಿ ಚರ್ಚೆ ನಡೆಸಲಾಯಿತು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com