ಹಾಸನ: ಕೇಂದ್ರ ಸರ್ಕಾರದಿಂದ ಇಂಧನ ವಲಯದಲ್ಲಿ ಕ್ರಾಂತಿಕಾರಿ ಬದಲಾವಣೆ: ಹರ್ದೀಪ್ ಸಿಂಗ್ ಪುರಿ

ಇಂಧನ ವಲಯದಲ್ಲಿ ಕ್ರಾಂತಿಕಾರಿ ಬದಲಾವಣೆ ತರಲು ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮುಂದಾಗಿದೆ ಎಂದು ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ, ವಸತಿ ಮತ್ತು ನಗರ ವ್ಯವಹಾರಗಳ ಕೇಂದ್ರ ಸಚಿವರಾದ ಹರ್ದೀಪ್ ಸಿಂಗ್ ಪುರಿ ಹೇಳಿದರು. 
ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ
ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ
Updated on

ಹಾಸನ: ಇಂಧನ ವಲಯದಲ್ಲಿ ಕ್ರಾಂತಿಕಾರಿ ಬದಲಾವಣೆ ತರಲು ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮುಂದಾಗಿದೆ ಎಂದು ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ, ವಸತಿ ಮತ್ತು ನಗರ ವ್ಯವಹಾರಗಳ ಕೇಂದ್ರ ಸಚಿವರಾದ ಹರ್ದೀಪ್ ಸಿಂಗ್ ಪುರಿ ಹೇಳಿದರು. 

ನಗರದ ಸಂತೆ ಪೇಟೆ ಕಾರಾಗೃಹದ ಎದುರು ಇರುವ ಎಚ್.ಪಿ ಪೆಟ್ರೋಲ್ ಬಂಕ್ ಬಳಿ ಇಂದು CNG ಕೇಂದ್ರದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಗ್ಯಾಸ್ ಸಂಪರ್ಕದಲ್ಲಿ ಜಪಾನ್ ದೇಶ ಮುಂಚೂಣಿಯಲ್ಲಿದೆ, ಅಲ್ಲದೆ ಅವರು ಇತರ ದೇಶಗಳಲ್ಲೂ ಅದನ್ನು ವಿಸ್ತರಿಸುವ ಸಲುವಾಗಿ ಭಾರತ ವಿವಿಧ ದೇಶಗಳಲ್ಲಿ ಹೂಡಿಕೆ ಮಾಡಲು ಮುಂದಾಗಿರುವುದು ಶ್ಲಾಘನೀಯ ಎಂದರು.

ಇಂಧನ ವಲಯದಲ್ಲಿ ಪರಿಸರಕ್ಕೆ ಪೂರಕವಾದ ಸಿಎನ್ ಜಿ ಬಳಕೆ ಹಾಗೂ ಅಳವಡಿಕೆಯಲ್ಲಿ ಹಾಸನದ ಜನರೂ ಉತ್ಸುಕರಾಗಿದ್ದು, ಸಿಎನ್ ಜಿ ಅಳವಡಿಸಿಕೊಳ್ಳಲು ಇಚ್ಚಿಸುವವರಿಗೆ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳಿಂದ ಸಾಕಷ್ಟು ಅನುಕೂಲಗಳಿದ್ದು, ಅವುಗಳನ್ನು ಬಳಸಿಕೊಳ್ಳುವಂತೆ ಕರೆ ನೀಡಿದರು

ಅತೀ ಶೀಘ್ರದಲ್ಲಿ ಹಾಸನದಲ್ಲಿ ಮನೆ ಮನೆಗೆ ಸಿಎನ್ ಜಿ ಸಂಪರ್ಕ ನೀಡಲು ಯೋಜಿಸಲಾಗಿದೆ ಜೊತೆಗೆ ಸುಮಾರು 100 ಡಿಜಿಟಲ್ ಸಿಎನ್ ಜಿ ಕೇಂದ್ರಗಳನ್ನು ಸ್ಥಾಪಿಸಲು ಯೋಜಿಸಲಾಗಿದೆ ಜನರು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಮನವಿ ಮಾಡಿದರು.

ಇದಕ್ಕೂ ಮುನ್ನಾ ಹಳೇಬಿಡಿನ ಯುನೆಸ್ಕೋ ವಿಶ್ವ ಪಾರಂಪರಿಕಾ ತಾಣಗಳ ಪಟ್ಟಿಗೆ ಸೇರ್ಪಡೆಯಾದ ಹೊಯ್ಸಳೇಶ್ವರ ದೇವಾಲಯಕ್ಕೆ ಭೇಟಿ ನೀಡಿದ ಹರ್ದಿಪ್ ಸಿಂಗ್ ಪುರಿ, ಶಿಲ್ಪಕಲೆ ವೀಕ್ಷಿಸಿ ದೇವರ ದರ್ಶನ ಪಡೆದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com