ರಾಜ್ಯದ ನಾಲ್ಕು ವಿಶ್ವವಿದ್ಯಾಲಯಗಳಲ್ಲಿ ಪೂರ್ಣಾವಧಿ ಕುಲಪತಿಗಳೇ ಇಲ್ಲ!

ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ(ಆರ್‌ಸಿಯು), ಮಂಗಳೂರು ವಿಶ್ವವಿದ್ಯಾಲಯ, ಶಿವಮೊಗ್ಗ ವಿಶ್ವವಿದ್ಯಾಲಯ ಮತ್ತು ಬಳ್ಳಾರಿ ವಿಶ್ವವಿದ್ಯಾಲಯಗಳು ಪೂರ್ಣಾವಧಿ ಕುಲಪತಿಗಳಿಲ್ಲದೆ ಕಾರ್ಯನಿರ್ವಹಿಸುತ್ತಿವೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಳಗಾವಿ: ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ(ಆರ್‌ಸಿಯು), ಮಂಗಳೂರು ವಿಶ್ವವಿದ್ಯಾಲಯ, ಶಿವಮೊಗ್ಗ ವಿಶ್ವವಿದ್ಯಾಲಯ ಮತ್ತು ಬಳ್ಳಾರಿ ವಿಶ್ವವಿದ್ಯಾಲಯಗಳು ಪೂರ್ಣಾವಧಿ ಕುಲಪತಿಗಳಿಲ್ಲದೆ ಕಾರ್ಯನಿರ್ವಹಿಸುತ್ತಿವೆ. 

ರಾಜ್ಯದ ಈ ನಾಲ್ಕು ವಿಶ್ವವಿದ್ಯಾಲಯಗಳ ಕುಲಪತಿಗಳು ನಿವೃತ್ತರಾದ ನಂತರವೂ ಪ್ರಭಾರಿ ಅಥವಾ ತಾತ್ಕಾಲಿಕ ವಿಸಿಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕುಲಪತಿಗಳ ಶೋಧನಾ ಸಮಿತಿಯು ಮೂರು ತಿಂಗಳ ಹಿಂದೆಯೇ ಈ ಹುದ್ದೆಗಳಿಗೆ ಸೂಕ್ತ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಿದೆ. ಆದರೆ ಇನ್ನೂ ನೇಮಕವಾಗಿಲ್ಲ.

ಮೂಲಗಳ ಪ್ರಕಾರ, ಈ ವಿಶ್ವವಿದ್ಯಾಲಯಗಳಿಗೆ ಹೊಸ ಕುಲಪತಿಗಳ ಹೆಸರನ್ನು ರಾಜ್ಯಪಾಲರು ಘೋಷಿಸಲು ಸರ್ಕಾರ ಔಪಚಾರಿಕತೆಯನ್ನು ಪೂರ್ಣಗೊಳಿಸಿಲ್ಲ. ಈ ವಿಶ್ವವಿದ್ಯಾಲಯಗಳಿಗೆ ಸಂಬಂಧಿಸಿದ ಆಡಳಿತಾತ್ಮಕ ಮತ್ತು ಇತರ ವಿಷಯಗಳ ಬಗ್ಗೆ ನಿರ್ಧಾರಗಳನ್ನು ತೆಗೆದುಕೊಳ್ಳುವ ಅಧಿಕಾರವನ್ನು ಉಸ್ತುವಾರಿ ಅಥವಾ ತಾತ್ಕಾಲಿಕ ಕುಲಪತಿಗಳಿಗೆ ನೀಡಲಾಗಿದೆಯೇ ಎಂಬುದು ಸಹ ಇನ್ನೂ ಸ್ಪಷ್ಟವಾಗಿಲ್ಲ ಎಂದು ಮೂಲಗಳು ತಿಳಿಸಿವೆ.

ಈ ವಿಶ್ವವಿದ್ಯಾನಿಲಯಗಳಲ್ಲಿನ ಪ್ರಮುಖ ಯೋಜನೆಗಳನ್ನು ಉಸ್ತುವಾರಿಗಳ ಮೇಲ್ವಿಚಾರಣೆಯಲ್ಲಿ ಕಾರ್ಯಗತಗೊಳಿಸಲಾಗುತ್ತಿದೆ.

ಈ ವಿವಿಗಳಲ್ಲಿ ಪೂರ್ಣಾವಧಿ ಕುಲಪತಿಗಳಿಲ್ಲದ ಕಾರಣ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ. ಪರಿಣಾಮ ಹೆಚ್ಚಿನ ವಿಭಾಗಗಳು ತೀವ್ರ ಸಿಬ್ಬಂದಿ ಕೊರತೆಯನ್ನು ಎದುರಿಸುತ್ತಿವೆ ಎಂದು ಅವರು ಹೇಳಿದ್ದಾರೆ.

"ಈ ಉನ್ನತ ಶಿಕ್ಷಣ ಸಂಸ್ಥೆಗಳ ಸುಗಮ ಕಾರ್ಯನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ರಾಜ್ಯ ಸರ್ಕಾರ ವಿಸಿಗಳ ನೇಮಕಾತಿ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು" ಎಂದು ಶಿಕ್ಷಣತಜ್ಞರೊಬ್ಬರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com