ಬೆಂಗಳೂರು ದಕ್ಷಿಣ ಕ್ಷೇತ್ರದ ಜನರಿಗೆ ಶೀಘ್ರ ಕಾವೇರಿ ನೀರು ಒದಗಿಸಿ: ಅಧಿಕಾರಿಗಳಿಗೆ ಡಿಸಿಎಂ ಡಿಕೆಶಿ ಸೂಚನೆ

ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಬೆಂಗಳೂರು ದಕ್ಷಿಣ ಕ್ಷೇತ್ರದ ಜನರಿಗೆ 3-4 ತಿಂಗಳಲ್ಲಿ ಕಾವೇರಿ ನೀರನ್ನು ಪೂರೈಸಲಾಗುವುಜು ಎಂದು ಉಪ ಮುಖ್ಯಮಂತ್ರಿ ಡಿ.ಕೆಶಿವಕುಮಾರ್ ಅವರು ಗುರುವಾರ ಭರವಸೆ ನೀಡಿದರು.
ಯಲಚೇನಹಳ್ಳಿಯಲ್ಲಿ ‘ನಿಮ್ಮ ಮನೆ ಬಾಗಿಲಿಗೆ ಸರ್ಕಾರ’ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಿವಾಸಿಗಳಿಂದ ಮನವಿ ಸ್ವೀಕರಿಸಿದರು.
ಯಲಚೇನಹಳ್ಳಿಯಲ್ಲಿ ‘ನಿಮ್ಮ ಮನೆ ಬಾಗಿಲಿಗೆ ಸರ್ಕಾರ’ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಿವಾಸಿಗಳಿಂದ ಮನವಿ ಸ್ವೀಕರಿಸಿದರು.

ಬೆಂಗಳೂರು: ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಬೆಂಗಳೂರು ದಕ್ಷಿಣ ಕ್ಷೇತ್ರದ ಜನರಿಗೆ 3-4 ತಿಂಗಳಲ್ಲಿ ಕಾವೇರಿ ನೀರನ್ನು ಪೂರೈಸಲಾಗುವುಜು ಎಂದು ಉಪ ಮುಖ್ಯಮಂತ್ರಿ ಡಿ.ಕೆಶಿವಕುಮಾರ್ ಅವರು ಗುರುವಾರ ಭರವಸೆ ನೀಡಿದರು.

ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ ಕಾರ್ಯಕ್ರಮದಲ್ಲಿ ಸಂಸದ ಡಿ.ಕೆ.ಸುರೇಶ್ ಹಾಗೂ ಶಾಸಕ ಎಂ.ಕೃಷ್ಣಪ್ಪ ಅವರು ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕುಡಿಯುವ ನೀರಿಗೆ ತೀವ್ರ ಸಮಸ್ಯೆ ಇದ್ದು, ಪರಿಹಾರ ಒದಗಿಸಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಸ್ಪಂದಿಸಿದ ಡಿಕೆ.ಶಿವಕುಮಾರ್ ಅವರು, 110 ಹಳ್ಳಿಗಳಿಗೆ ಕಾವೇರಿ ನೀರು ಪೂರೈಸುವ ಯೋಜನೆ ಅಂತಿಮ ಹಂತದಲ್ಲಿದೆ. ಮುಂದಿನ 3-4 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದ್ದು, ತಕ್ಷಣವೇ ನೀರು ಪೂರೈಸಲಾಗುವುದು ಎಂದು ಭರವಸೆ ನೀಡಿದರು.

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿರುವ 18 ಕಿ.ಮೀ. ರಸ್ತೆಯ ಒತ್ತಡ ಕಡಿಮೆ ಮಾಡಲು ಪರ್ಯಾಯ ರಸ್ತೆ ಮಾಡಬೇಕಿದೆ. ಕನಕಪುರ ರಸ್ತೆಯಿಂದ ಎಲೆಕ್ಟ್ರಾನಿಕ್ ಸಿಟಿ ಮಧ್ಯೆ ಹೊಸ ರಸ್ತೆ ನಿರ್ಮಿಸುವ ಯೋಜನೆಗೆ ಈ ಹಿಂದೆ ಬಿಡಿಎ ಅಧಿಸೂಚನೆ ಹೊರಡಿಸಿದೆ. ಅದಕ್ಕೆ ಮರುಜೀವ ನೀಡಲು ಪ್ರಯತ್ನ ಆರಂಭವಾಗಿದೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com