ಜ.17 ಇಂಡಿಯಾ-ಅಫ್ಘಾನಿಸ್ತಾನ ಟಿ20 ಕ್ರಿಕೆಟ್​​: ಬಿಎಂಟಿಸಿಯಿಂದ ಹೆಚ್ಚುವರಿ ಬಸ್​​ ವ್ಯವಸ್ಥೆ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜನವರಿ 17 ರಂದು ಭಾರತ ಹಾಗೂ ಅಫ್ಘಾನಿಸ್ತಾನ ಟಿ20 ಹೊನಲು ಬೆಳಕಿನ ಪಂದ್ಯ ನಡೆಯಲಿದ್ದು. ಈ ಪಂದ್ಯ ವೀಕ್ಷಣೆಗೆ ಭಾಗವಹಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ಬಿಎಂಟಿಸಿ ಹೆಚ್ಚುವರಿ ಬಸ್​ ಸೇವೆಯನ್ನು ಒದಗಿಸಲಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜನವರಿ 17 ರಂದು ಭಾರತ ಹಾಗೂ ಅಫ್ಘಾನಿಸ್ತಾನ ಟಿ20 ಹೊನಲು ಬೆಳಕಿನ ಪಂದ್ಯ ನಡೆಯಲಿದ್ದು. ಈ ಪಂದ್ಯ ವೀಕ್ಷಣೆಗೆ ಭಾಗವಹಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ಬಿಎಂಟಿಸಿ ಹೆಚ್ಚುವರಿ ಬಸ್​ ಸೇವೆಯನ್ನು ಒದಗಿಸಲಿದೆ.

ಚಿನ್ನಸ್ವಾಮಿ ಕ್ರೀಡಾಂಗಣದಿಂದ ನಗರದ 12 ಕಡೆಗಳಿಗೆ ಹೆಚ್ಚುವರಿ ಬಸ್​​​ ಕಾರ್ಯಾಚರಣೆ ನಡೆಸಲಿವೆ. ಚಿನ್ನಸ್ವಾಮಿ ಕ್ರೀಡಾಂಗಣದಿಂದ ಕಾಡುಗೋಡಿ, ಸರ್ಜಾಪುರ, ಎಲೆಕ್ಟ್ರಾನಿಕ್ ಸಿಟಿ, ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್​,​ ಕೆಂಗೇರಿ, ನೆಲಮಂಗಲ, ಯಲಹಂಕ 5ನೇ ಹಂತ 5ನೇ ಹಂತ, ಬಾಗಲೂರು, ಹೊಸಕೋಟೆಗೆ ಹೆಚ್ಚಿನ ಬಸ್ ವ್ಯವಸ್ಥೆ ಮಾಡಲಾಗಿದೆ.

ಮಾರ್ಗಸಂಖ್ಯೆ ಎಸ್‍ಬಿಎಸ್ -1ಕೆ ಬಸ್ ಎಚ್‍ಎಎಲ್ ಮಾರ್ಗವಾಗಿ ಕಾಡುಕೋಡಿ ತಲುಪಲಿದೆ. ಎಸ್‍ಬಿಎಸ್-13ಕೆ ನಂಬರಿನ ಬಸ್ ಹೂಡಿ ಮಾರ್ಗವಾಗಿ ಕಾಡುಗೋಡಿ ಬಸ್ ನಿಲ್ದಾಣ ತಲುಪಲಿದೆ. ಜಿ-2 ಬಸ್ ಅಗರ, ದೊಮ್ಮಸಂದ್ರ ಮಾರ್ಗವಾಗಿ ಸರ್ಜಾಪುರ, ಜಿ-3ಬಸ್ ಹೊಸೂರು ರಸ್ತೆ ಮಾರ್ಗವಾಗಿ ಎಲೆಕ್ಟ್ರಾನಿಕ್ ಸಿಟಿ, ಜಿ-4 ಜಯದೇವ ಆಸ್ಪತ್ರೆ ಮಾರ್ಗವಾಗಿ ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್ ತಲುಪಲಿದೆ ಎಂದು ಬಿಎಂಟಿಸಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com