500 ಕೋಟಿ ರೂ. ಹವಾಲಾ ವ್ಯವಹಾರ ಹಿಂದೆ ಬಿಜೆಪಿ ಸಂಸದ ಸಿದ್ದೇಶ್ವರ್ ಕೈವಾಡ: ಕಾಂಗ್ರೆಸ್ ಆರೋಪ

ದಾವಣಗೆರೆ ಬಿಜೆಪಿ ಸಂಸದ ಡಾ.ಜಿ.ಎಂ.ಸಿದ್ದೇಶ್ವರ ಅವರು ನಡೆಸಿರುವ ಹವಾಲಾ ವಹಿವಾಟಿನ ಕುರಿತು ಜಾರಿ ನಿರ್ದೇಶನಾಲಯ (ಇಡಿ) ಮತ್ತು ಆದಾಯ ತೆರಿಗೆ ಇಲಾಖೆಯಿಂದ ತನಿಖೆ ನಡೆಸಬೇಕು ಎಂದು ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಸದಸ್ಯರು ಒತ್ತಾಯಿಸಿದ್ದಾರೆ.
ಜಿ.ಎಂ ಸಿದ್ದೇಶ್ವರ್
ಜಿ.ಎಂ ಸಿದ್ದೇಶ್ವರ್

ದಾವಣಗೆರೆ: ದಾವಣಗೆರೆ ಬಿಜೆಪಿ ಸಂಸದ ಡಾ.ಜಿ.ಎಂ.ಸಿದ್ದೇಶ್ವರ ಅವರು ನಡೆಸಿರುವ ಹವಾಲಾ ವಹಿವಾಟಿನ ಕುರಿತು ಜಾರಿ ನಿರ್ದೇಶನಾಲಯ (ಇಡಿ) ಮತ್ತು ಆದಾಯ ತೆರಿಗೆ ಇಲಾಖೆಯಿಂದ ತನಿಖೆ ನಡೆಸಬೇಕು ಎಂದು ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಸದಸ್ಯರು ಒತ್ತಾಯಿಸಿದ್ದಾರೆ.

ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಬಿ.ಮಂಜಪ್ಪ, ಕಳೆದ 8ರಿಂದ 10 ವರ್ಷಗಳಲ್ಲಿ 500 ಕೋಟಿ ರೂ.ಗೂ ಅಧಿಕ ಹವಾಲಾ ವಹಿವಾಟು ನಡೆದಿದ್ದು, ಸೂಕ್ತ ತನಿಖೆಯಿಂದ ಸತ್ಯಾಂಶ ಹೊರಬರಲಿದೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಹದಡಿ ರಸ್ತೆಯಲ್ಲಿರುವ ಆದಾಯ ತೆರಿಗೆ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ ತನಿಖೆಗೆ ಒತ್ತಾಯಿಸಿದರು.

ಸಂಸದರು  ಕಮಿಷನ್‌ ನಿಂದ ಬಂದ ಅಪಾರ ಪ್ರಮಾಣದ ಹಣವನ್ನು ತಮ್ಮ ಕಾರಿನಲ್ಲಿ ಸಾಗಿಸುತ್ತಿದ್ದಾರೆ ಎಂದು ಸಿದ್ದೇಶ್ವರ ಕಾರು ಚಾಲಕ ಸ್ವಾಮಿ ಮತ್ತು ಚಾಲಕನ ಪತ್ನಿ ಅನುಪಮಾ ಹೇಳಿದ್ದಾರೆಂದು ಮಂಜಪ್ಪ ಆರೋಪಿಸಿದ್ದಾರೆ. ಈ ಕುರಿತು ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಆದರೆ ಈ ಆರೋಪಗಳನ್ನು  ಸಿದ್ದೇಶ್ವರ ಅವರು ನಿರಾಕರಿಸಿದ್ದಾರೆ. ಅವುಗಳನ್ನು ಸಂಪೂರ್ಣವಾಗಿ ಆಧಾರರಹಿತ ಎಂದು ಹೇಳಿದ್ದಾರೆ. ಸ್ವಾಮಿ ಅವರು ತಮ್ಮ ಯಾವುದೇ ಸಂಸ್ಥೆಯೊಂದಿಗೆ ಎಂದಿಗೂ ಚಾಲಕರಾಗಿ ಕೆಲಸ ಮಾಡಿಲ್ಲ ಮತ್ತು ಆರೋಪಗಳು ಸ್ಪಷ್ಟ ರಾಜಕೀಯ ಪಿತೂರಿಯಾಗಿದೆ ಎಂದು ದೂರಿದ್ದಾರೆ. ಆರೋಪಗಳ ಬಗ್ಗೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಸ್ವಾಮಿ ಮತ್ತು ಅನುಪಮಾ ವಿರುದ್ಧ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿಎಸ್ ಜಗದೀಶ್ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ  ದೂರು ದಾಖಲಿಸಿದ್ದಾರೆ. ಎಫ್‌ಐಆರ್‌ನ ಪ್ರತಿಗಳನ್ನು ನಾಲ್ಕನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ದಾವಣಗೆರೆ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಕಳುಹಿಸಲಾಗಿದೆ ಎಂದು ಅವರು ಹೇಳಿದರು.

ಸ್ವಾಮಿ ಮತ್ತು ಅನುಪಮಾ ಅವರು ಜನವರಿ 14 ರಂದು ವಾಟ್ಸಾಪ್ ಸಂದೇಶವನ್ನು ಕಳುಹಿಸಿದ್ದಾರೆ, ನಾಲ್ಕು ಬಾರಿ ಸಂಸದರಾಗಿರುವ ಸಿದ್ದೇಶ್ವರ ಅವರ ಇಮೇಜ್  ಹಾಳು ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ, ಸಂಸದರ ಕುಟುಂಬದ ವಿರುದ್ಧ ದೊಡ್ಡ ಸಂಚು ಹೂಡುತ್ತಿದ್ದಾರೆ ಎಂದು ಜಗದೀಶ್  ಆರೋಪಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com