ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್ ​ಗಿರಿ: ಅಪ್ರಾಪ್ತ ಸೇರಿ ಮೂವರ ಬಂಧನ

ಮಂಗಳೂರಿನ ಕದ್ರಿ ಪಾರ್ಕ್‌ನಲ್ಲಿ ಶುಕ್ರವಾರ ಮತ್ತೊಂದು 'ನೈತಿಕ ಪೊಲೀಸ್‌ಗಿರಿ' ಪ್ರಕರಣ ವರದಿಯಾಗಿದ್ದು, ಅನ್ಯಕೋಮಿನ ಯುವಕ, ಯುವತಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಂಗಳೂರು: ಮಂಗಳೂರಿನ ಕದ್ರಿ ಪಾರ್ಕ್‌ನಲ್ಲಿ ಶುಕ್ರವಾರ ಮತ್ತೊಂದು 'ನೈತಿಕ ಪೊಲೀಸ್‌ಗಿರಿ' ಪ್ರಕರಣ ವರದಿಯಾಗಿದ್ದು, ಅನ್ಯಕೋಮಿನ ಯುವಕ, ಯುವತಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಶುಕ್ರವಾರ ಬಂಧಿಸಲಾಗಿದೆ.

ಪೊಲೀಸರ ಪ್ರಕಾರ, ಯೆನೆಪೊಯ ಕಾಲೇಜಿನಲ್ಲಿ(ಬಿಎಸ್‌ಸಿ ನರ್ಸಿಂಗ್) ಓದುತ್ತಿರುವ 20 ವರ್ಷದ ಯುವತಿ, ನಂತೂರಿನಲ್ಲಿರುವ ಜಿಎನ್‌ಎಂ ನರ್ಸಿಂಗ್ ಕಾಲೇಜಿನಲ್ಲಿ ಓದುತ್ತಿರುವ ತನ್ನ ಸ್ನೇಹಿತ 20 ವರ್ಷದ ಅಖಿಲ್ ಅವರೊಂದಿಗೆ ಬೆಳಗ್ಗೆ ಕದ್ರಿ ಪಾರ್ಕ್‌ಗೆ ಬಂದಿದ್ದರು.

ಈ ವೇಳೆ ಹಿಂದುತ್ವ ಸಂಘಟನೆಗಳಿಗೆ ಸೇರಿದವರು ಎನ್ನಲಾದ ಮೂವರು ಅವರ ಹೆಸರು ಮತ್ತು ಭೇಟಿಯ ಉದ್ದೇಶದ ಬಗ್ಗೆ ಪ್ರಶ್ನಿಸಿದ್ದಾರೆ. ಅಖಿಲ್ ಮುಸ್ಲಿಂ ಎಂದು ತಪ್ಪಾಗಿ ಭಾವಿಸಿ ಆತನ ಮೇಲೆ ಹಲ್ಲೆ ನಡೆಸಿ, ಅವಾಚ್ಯವಾಗಿ ನಿಂದಿಸಿದ್ದಾರೆ ಮತ್ತು ಅವರ ಫೋಟೋಗಳು, ವಿಡಿಯೋ ಮಾಡಿದ್ದಾರೆ.

ದೂರಿನ ಆಧಾರದ ಮೇಲೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, 18 ವರ್ಷ ವರ್ಷದ ನಿತಿನ್, 18 ವರ್ಷದ ಹರ್ಷ ಮತ್ತು 17 ವರ್ಷದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನೂ ಬಂಧಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com