ಮಂಗಳೂರು ವಿಮಾನ ನಿಲ್ದಾಣದ ಮೂಲಕ ಅಡಕೆ ಅಕ್ರಮ ಆಮದು: ಕಠಿಣ ಕ್ರಮಕ್ಕೆ ಕ್ಯಾಂಪ್ಕೊ ಆಗ್ರಹ

ದೇಶೀಯ ಮಾರುಕಟ್ಟೆಗೆ ಅಕ್ರಮವಾಗಿ ಅಡಕೆ ಆಮದು ಮಾಡಿಕೊಳ್ಳುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಕೇಂದ್ರ ಅಡಿಕೆ ಮತ್ತು ಕೋಕೋ ಮಾರ್ಕೆಟಿಂಗ್ ಮತ್ತು ಪ್ರೊಸೆಸಿಂಗ್ ಕೋಆಪರೇಟಿವ್(ಕ್ಯಾಂಪ್ಕೊ), ಅಕ್ರಮ ಆಮದು ತಡೆಗಟ್ಟಲು...
ಅಡಿಕೆ
ಅಡಿಕೆ

ಮಂಗಳೂರು: ದೇಶೀಯ ಮಾರುಕಟ್ಟೆಗೆ ಅಕ್ರಮವಾಗಿ ಅಡಕೆ ಆಮದು ಮಾಡಿಕೊಳ್ಳುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಕೇಂದ್ರ ಅಡಿಕೆ ಮತ್ತು ಕೋಕೋ ಮಾರ್ಕೆಟಿಂಗ್ ಮತ್ತು ಪ್ರೊಸೆಸಿಂಗ್ ಕೋಆಪರೇಟಿವ್(ಕ್ಯಾಂಪ್ಕೊ), ಅಕ್ರಮ ಆಮದು ತಡೆಗಟ್ಟಲು ಕಠಿಣ ಕ್ರಮ ತೆಗೆದುಕೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದೆ.

ವಿವಿಧ ಮಾರ್ಗಗಳ ಮೂಲಕ ವಿದೇಶಿ ಅಡಿಕೆ ಅಕ್ರಮವಾಗಿ ಭಾರತ ಪ್ರವೇಶಿಸುತ್ತಿರುವುದನ್ನು ಸೂಕ್ಷ್ಮವಾಗಿ ಗಮನಿಸಿದ್ದು, ಇದು ಸ್ಥಳೀಯ ಅಡಿಕೆ ಮಾರುಕಟ್ಟೆಗೆ ಮತ್ತು ಸರ್ಕಾರಕ್ಕೆ ಸಾಕಷ್ಟು ಆರ್ಥಿಕ ನಷ್ಟವನ್ನು ಉಂಟುಮಾಡುತ್ತದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಎ ಕಿಶೋರ್ ಕುಮಾರ್ ಕೊಡ್ಗಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

"ವಿಶೇಷವಾಗಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ(MIA) ಇಂಟಿಗ್ರೇಟೆಡ್ ಕಾರ್ಗೋ ಟರ್ಮಿನಲ್(ICT) ಮೂಲಕ ಮಂಗಳೂರಿಗೆ ಆಮದು ಮಾಡಿಕೊಂಡ ಅಡಿಕೆಯನ್ನು ವಿವಿಧ ಪ್ರದೇಶಗಳಿಗೆ ವಿತರಿಸಲಾಗುತ್ತದೆ. ಇದು ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಸಾಂಪ್ರದಾಯಿಕ ಅಡಿಕೆ ಕೃಷಿ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುತ್ತದೆ. ಈ ಕಾನೂನುಬಾಹಿರ ಪದ್ಧತಿಯು ಸ್ಥಳೀಯ ರೈತರು ಮತ್ತು ಸಹಕಾರಿ ಸಂಸ್ಥೆಗಳನ್ನು ದುರ್ಬಲಗೊಳಿಸುತ್ತದೆ ಮತ್ತು ಅಡಿಕೆ ಬೆಲೆಯನ್ನು ಸ್ಥಿರಗೊಳಿಸುತ್ತದೆ” ಎಂದು ಕೊಡ್ಗಿ ಹೇಳಿದ್ದಾರೆ.

ತಕ್ಷಣ ನಿರ್ಣಾಯಕ ಕ್ರಮವನ್ನು ತೆಗೆದುಕೊಳ್ಳುವಂತೆ ಸರ್ಕಾರಕ್ಕೆ ಮನವಿ ಮಾಡಿದ ಅವರು, ಒಳಬರುವ ಅರೆಕಾನಟ್ ಮೂಲ, ಬೆಲೆ ಮತ್ತು ಅದರ ಜೊತೆಗಿನ ದಾಖಲಾತಿಗಳನ್ನು ಕೂಲಂಕಷವಾಗಿ ಪರಿಶೀಲಿಸುವ ಅಗತ್ಯ ಇದೆ. ಇದರಿಂದ ಸಂಭಾವ್ಯ ತೆರಿಗೆ ವಂಚನೆಯನ್ನು ತಡೆಗಟ್ಟಬಹುದು. ಅಲ್ಲದೆ ರೈತರ ಹಿತ ಕಾಪಾಡಬಹುದು ಎಂದು ಅವರು ತಿಳಿಸಿದ್ದಾರೆ.

ಕ್ಯಾಪ್ಕೊ ಈ ಸಂಬಂಧ ಈಗಾಗಲೇ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಸೇರಿದಂತೆ ಪ್ರಮುಖ ಪಾಲುದಾರರೊಂದಿಗೆ ಪತ್ರವ್ಯವಹಾರ ನಡೆಸಿದೆ ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com