ಕರ್ನಾಟಕದ ಶಿಲ್ಪಿ ಗಣೇಶ್ ಭಟ್ ಕೆತ್ತನೆಯ 3ನೇ ರಾಮ ಲಲ್ಲಾ ಮೂರ್ತಿಯ ಫೋಟೋ ಬಹಿರಂಗ

ಅಯೋಧ್ಯೆಯ ರಾಮಮಂದಿರಕ್ಕಾಗಿ ಕೆತ್ತಲಾದ ಮೂರನೇ ರಾಮಲಲ್ಲಾ ವಿಗ್ರಹದ ಫೋಟೋ ಬಹಿರಂಗಗೊಂಡಿದೆ.
ರಾಮಲಲ್ಲಾನ ಮೂರ್ತಿಗಳು
ರಾಮಲಲ್ಲಾನ ಮೂರ್ತಿಗಳು

ಬೆಂಗಳೂರು: ಅಯೋಧ್ಯೆಯ ರಾಮಮಂದಿರಕ್ಕಾಗಿ ಕೆತ್ತಲಾದ ಮೂರನೇ ರಾಮಲಲ್ಲಾ ವಿಗ್ರಹದ ಫೋಟೋ ಬಹಿರಂಗಗೊಂಡಿದೆ.

ಅಯೋಧ್ಯೆಯ ರಾಮಮಂದಿರದಲ್ಲಿ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ್ದ ರಾಮಲಲ್ಲಾನ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದೆ. ನಿನ್ನೆ ಒಂದೇ ದಿನ ಐದು ಲಕ್ಷಕ್ಕೂ ಹೆಚ್ಚು ಭಕ್ತರು ದೇವರ ದರ್ಶನವನ್ನು ಪಡೆದಿದ್ದಾರೆ. ದೇವರ ದರ್ಶನ ಪಡೆಯಲು ಸಾಗರೋಪಾದಿಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಹೀಗಾಗಿ ಈ ಸಂದಣಿಯನ್ನು ನಿಯಂತ್ರಿಸಲು ಸರ್ಕಾರ ಜಿಲ್ಲಾಢಳಿತ ಅಯೋಧ್ಯೆಗೆ ವಾಹನಗಳ ಪ್ರವೇಶವನ್ನು ನಿಷೇಧಿಸಿದೆ.

ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯ ನಂತರ ರಾಜಸ್ಥಾನದ ಶಿಲ್ಪಿ ಸತ್ಯನಾರಾಯಣ ಪಾಂಡೆ ಕೆತ್ತಿರುವ ಮೂರ್ತಿಯ ಫೋಟೋವನ್ನು ನಿನ್ನೆ ಬಹಿರಂಗಪಡಿಸಲಾಗಿತ್ತು. ಇದೀಗ ಕರ್ನಾಟಕದ ಶಿಲ್ಪಿ ಗಣೇಶ್ ಭಟ್ ಅವರು ಕೆತ್ತಿರುವ ರಾಮ ಲಲ್ಲಾ ಮೂರನೇ ಮೂರ್ತಿಯ ಫೋಟೋವನ್ನು ಇದೀಗ ಬಹಿರಂಗಪಡಿಸಲಾಗಿದೆ.

ಗಣೇಶ್ ಭಟ್ ಅವರು ಕೃಷ್ಣ ಶಿಲೆಯಲ್ಲೇ ಮೂರ್ತಿಯನ್ನು ಕೆತ್ತಿದ್ದಾರೆ. ಇದರಲ್ಲಿ, ಭಗವಾನ್ ರಾಮನ ಪಾದದ ಒಂದು ಬದಿಯಲ್ಲಿ ಹನುಮಂತನನ್ನು ಇನ್ನೊಂದು ಬದಿಯಲ್ಲಿ ಗರುಡನನ್ನು ಕೆತ್ತಲಾಗಿದೆ. ವಿಗ್ರಹ ಸುತ್ತಲೂ ವಿಷ್ಣುವಿನ ಅವತಾರಗಳನ್ನು ಕೆತ್ತಲಾಗಿದೆ.

ಇದರಲ್ಲಿ ವಿಷ್ಣುವಿನ 10 ಅವತಾರಗಳ ಚಿತ್ರ. 1- ಮತ್ಸ್ಯ, 2- ಕೂರ್ಮ, 3- ವರಾಹ, 4- ನರಸಿಂಹ, 5- ವಾಮನ್, 6- ಪರಶುರಾಮ, 7- ರಾಮ, 8- ಕೃಷ್ಣ, 9- ಬುದ್ಧ ಮತ್ತು 10ನೇ ಕಲ್ಕಿ ಅವತಾರವನ್ನು ಕಾಣಬಹುದು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com