ಬೆಂಗಳೂರು: ಕುಡಿದು ಬಸ್ ಚಲಾಯಿಸಿದ 9 ಮಂದಿ ಚಾಲಕರ ವಿರುದ್ಧ ಪ್ರಕರಣ ದಾಖಲು

ನಗರ ಸಂಚಾರ ಪೊಲೀಸರು ಗುರುವಾರ ರಾತ್ರಿ ನಗರದಲ್ಲಿ ಕೈಗೊಂಡಿದ್ದ ವಿಶೇಷ ಕಾರ್ಯಾಚರಣೆ ವೇಳೆ ಕುಡಿದು ಖಾಸಗಿ ಬಸ್ ಚಾಲನೆ ಮಾಡುತ್ತಿದ್ದ 9 ಮಂದಿ ಚಾಲಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ನಗರ ಸಂಚಾರ ಪೊಲೀಸರು ಗುರುವಾರ ರಾತ್ರಿ ನಗರದಲ್ಲಿ ಕೈಗೊಂಡಿದ್ದ ವಿಶೇಷ ಕಾರ್ಯಾಚರಣೆ ವೇಳೆ ಕುಡಿದು ಖಾಸಗಿ ಬಸ್ ಚಾಲನೆ ಮಾಡುತ್ತಿದ್ದ 9 ಮಂದಿ ಚಾಲಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಗರದ ಆನಂದ್ ರಾವ್ ವೃತ್ತ, ಮೌರ್ಯ ವೃತ್ತ, ಕಪಾಲಿ ರಸ್ತೆ, ಗಾಂಧಿ ನಗರ ಸೇರಿದಂತೆ ಖಾಸಗಿ ಬಗ್ ಗಳು ಹೆಚ್ಚಾಗಿ ಓಡಾಡುವ ವಿವಿಧ ಸ್ಥಳಗಳಲ್ಲಿ  ನಗರ ಸಂಚಾರ ಪೊಲೀಸರು ಗುರುವಾರ ರಾತ್ರಿ 8 ಗಂಟೆಯಿಂದ 11.30ರವರೆಗೆ ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದರು.

ಈ ವೇಳೆ 881 ಖಾಸಗಿ ಬಸ್ ಗಳ ಚಾಲಕರನ್ನು ತಪಾಸಣೆ ನಡೆಸಿದಾಗ 9 ಮಂದಿ ಚಾಲಕರು ಮದ್ಯ ಸೇವಿಸಿ ಬಸ್ ಚಾಲನೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

ಈ ಹಿನ್ನೆಲೆಯಲ್ಲಿ ಚಾಲಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ, ಚಾಲನಾ ಪರವಾನಗಿ ಅಮಾನತು ಸೇರಿದಂತೆ ಕಾನೂನು ಕ್ರಮ ಕೈಗೊಂಡಿದ್ದಾರೆ.

ಇತ್ತೀಚೆಗಷ್ಟೇ ಸಂಚಾರಿ ಪೊಲೀಸರು ಶಾಲಾ ಬಸ್ ಚಾಲಕರು ಕುಡಿದು ವಾಹನ ಚಲಾಯಿಸುವವರ ವಿರುದ್ಧವೂ ಕ್ರಮ ಕೈಗೊಂಡಿದ್ದರು, 16 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com