ನರೇಗಾ ಕೂಲಿ ದಿನಗಳನ್ನು 150ಕ್ಕೆ ಹೆಚ್ಚಿಸಿ, ಇಲ್ಲವೇ ಧರಣಿ ಎದುರಿಸಿ: ಕೇಂದ್ರಕ್ಕೆ ಪ್ರಿಯಾಂಕ್ ಖರ್ಗೆ

ಗ್ರಾಮೀಣ ಮೂಲಸೌಕರ್ಯಗಳನ್ನು ಬಲಪಡಿಸಲು ಮತ್ತು ಸುಧಾರಿಸಲು ಕೇಂದ್ರ ಸರ್ಕಾರವು ಎಂಜಿಎನ್‌ಆರ್‌ಇಜಿ ಅಡಿಯಲ್ಲಿ ಕೂಲಿ ದಿನಗಳನ್ನು 150ಕ್ಕೆ ಹೆಚ್ಚಿಸದಿದ್ದರೆ ದೆಹಲಿಯಲ್ಲಿ ಶಾಸಕರೊಂದಿಗೆ ಧರಣಿ ನಡೆಸುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಪ್ರಿಯಾಂಕ್ ಖರ್ಗೆ
ಪ್ರಿಯಾಂಕ್ ಖರ್ಗೆ
Updated on

ಕಲಬುರಗಿ: ಗ್ರಾಮೀಣ ಮೂಲಸೌಕರ್ಯಗಳನ್ನು ಬಲಪಡಿಸಲು ಮತ್ತು ಸುಧಾರಿಸಲು ಕೇಂದ್ರ ಸರ್ಕಾರವು ಎಂಜಿಎನ್‌ಆರ್‌ಇಜಿ ಅಡಿಯಲ್ಲಿ ಕೂಲಿ ದಿನಗಳನ್ನು 150ಕ್ಕೆ ಹೆಚ್ಚಿಸದಿದ್ದರೆ ದೆಹಲಿಯಲ್ಲಿ ಶಾಸಕರೊಂದಿಗೆ ಧರಣಿ ನಡೆಸುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯಕ್ಕೆ 13 ಕೋಟಿ ಮಾನವ ದಿನಗಳು ದೊರೆತಿದ್ದವು. ಈಗ 12 ಕೋಟಿ ಮಾನವ ದಿನಗಳನ್ನು ಬಳಸಿದ್ದೇವೆ. ಮಾನವ ದಿನ ಸೃಜಿಸಲು ರಾಜ್ಯ ಸರ್ಕಾರ ಕೇವಲ ಶಿಫಾರಸು ಮಾಡಬಲ್ಲದು. ಅದನ್ನು ಕೇಂದ್ರ ಅನುಮೋದಿಸಬೇಕಾಗುತ್ತದೆ. ಬರಗಾಲ ಬಂದಾಗ, ನರೇಗಾ ಕೂಲಿ ದಿನ ಹೆಚ್ಚಿಸುವಂತೆ ದೆಹಲಿಗೆ ಹೋಗಿ ಅಧಿಕಾರಿಗಳನ್ನು ಭೇಟಿಯಾಗಿ ಐದು ಸಲ ಮನವಿ ಕೊಟ್ಟರೂ ಸ್ಪಂದಿಸಿಲ್ಲ’ ಎಂದು ದೂರಿದರು.

‘ನರೇಗಾ ಕೂಲಿ ಹಣವನ್ನು ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ವಿಳಂಬ ಮಾಡಿದ್ದರಿಂದ ಹಿಂದೆ ರಾಜ್ಯ ಸರ್ಕಾರವೇ ವಿತರಿಸಿದೆ. ಈಗಲೂ ಅಂದಾಜು ರೂ.470 ಕೋಟಿ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಿದೆ’ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com