ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್, ಪವಿತ್ರಾ ಗೌಡ ಸೇರಿ ಎಲ್ಲ ಆರೋಪಿಗಳಿಗೆ ಜುಲೈ 18 ರವರೆಗೆ ನ್ಯಾಯಾಂಗ ಬಂಧನ

ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ದರ್ಶನ್ ಹಾಗೂ ಇತರ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಇಂದು ಅಂತ್ಯವಾದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್​ ಮೂಲಕ ಜಡ್ಜ್​ ಮುಂದೆ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು.
ಪವಿತ್ರಾ ಗೌಡ ಮತ್ತು ನಟ ದರ್ಶನ್
ಪವಿತ್ರಾ ಗೌಡ ಮತ್ತು ನಟ ದರ್ಶನ್
Updated on

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ತೂಗುದೀಪ್ ಮತ್ತು ಅವರ ಗೆಳತಿ ಪವಿತ್ರಾ ಗೌಡ ಸೇರಿ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಜುಲೈ 18 ರವರೆಗೆ ವಿಸ್ತರಿಸಿ 24ನೇ ಎಸಿಎಂಎಂ ಕೋರ್ಟ್ ಗುರುವಾರ ಆದೇಶ ಹೊರಡಿಸಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ದರ್ಶನ್ ಹಾಗೂ ಇತರ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಇಂದು ಅಂತ್ಯವಾದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್​ ಮೂಲಕ ಜಡ್ಜ್​ ಮುಂದೆ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು.

ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸುವಂತೆ ಎಸ್​ಪಿಪಿ ರಿಮ್ಯಾಂಡ್ ಅರ್ಜಿ ಸಲ್ಲಿಸಿದ ಹಿನ್ನೆಲೆಯಲ್ಲಿ ಕೋರ್ಟ್ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನವನ್ನು ಜುಲೈ 18ರವರೆಗೆ ವಿಸ್ತರಿಸಿ ಆದೇಶ ನೀಡಿದೆ.

ಪವಿತ್ರಾ ಗೌಡ ಮತ್ತು ನಟ ದರ್ಶನ್
ಅಪರಾಧ ಸಾಬೀತಾಗುವವರೆಗೂ Darshan ನಿರಪರಾಧಿ; ಮಾಜಿ ಸಂಸದೆ Sumalatha ಮೊದಲ ಪ್ರತಿಕ್ರಿಯೆ

ಬೆಂಗಳೂರಿನ ಪರಪ್ಪನ ಅಗ್ರಹಾರ ಮತ್ತು ತುಮಕೂರು ಜೈಲಿನಲ್ಲಿರುವ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್​ ಮೂಲಕ ಕೋರ್ಟ್ ಗೆ ಹಾಜರು ಪಡಿಸಲಾಯಿತು.

ಪವಿತ್ರಾ ಗೌಡಗೆ ಚಿತ್ರದುರ್ಗದ ರೇಣುಕಾ ಸ್ವಾಮಿ ಅಶ್ಲೀಲ ಸಂದೇಶ ಕಳಿಸಿದ್ದ ಎನ್ನಲಾಗಿದೆ. ಆತನನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆತಂದು ಜೂನ್ 9 ರಂದು ಭೀಕರವಾಗಿ ಹತ್ಯೆ ಮಾಡಿದ ಆರೋಪದ ಮೇಲೆ ದರ್ಶನ್​ ಹಾಗೂ ಅವರ ಗ್ಯಾಂಗ್ ಜೈಲು ಪಾಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com