ಪಶ್ಚಿಮ ಘಟ್ಟಗಳಲ್ಲಿ ಭಾರೀ ಮಳೆ: ತುಂಗಭದ್ರಾ ಜಲಾಶಯದ ಒಳಹರಿವು ಹೆಚ್ಚಳ

ಎರಡು ತಿಂಗಳ ಹಿಂದೆ ಜಲಾಶಯದಲ್ಲಿ 3 ಟಿಎಂಸಿ ಅಡಿ ಇದ್ದ ನೀರಿನ ಮಟ್ಟ, ಇದೀಗ 8 ಟಿಎಂಸಿ ಅಡಿಗೆ ಏರಿಕೆಯಾಗಿದೆ.
ತುಂಗಭದ್ರಾ ಜಲಾಶಯ
ತುಂಗಭದ್ರಾ ಜಲಾಶಯ
Updated on

ಹೊಸಪೇಟೆ: ರಾಜ್ಯದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಇದರ ಪರಿಣಾಮ ವಿಜಯನಗರ ಜಿಲ್ಲೆಯ ಹೊಸಪೇಟೆಯ ತುಂಗಭದ್ರಾ ಜಲಾಶಯದಲ್ಲಿ ಒಳಹರಿವು ಹೆಚ್ಚಳವಾಗಿದೆ.

ಎರಡು ತಿಂಗಳ ಹಿಂದೆ ಜಲಾಶಯದಲ್ಲಿ 3 ಟಿಎಂಸಿ ಅಡಿ ಇದ್ದ ನೀರಿನ ಮಟ್ಟ, ಇದೀಗ 8 ಟಿಎಂಸಿ ಅಡಿಗೆ ಏರಿಕೆಯಾಗಿದೆ. ಕಳೆದ ಎರಡು ದಿನಗಳಿಂದ 10,503 ಕ್ಯೂಸೆಕ್ ಒಳಹರಿವು ಇದೆ ಎಂದು ವರದಿಗಳು ತಿಳಿಸಿವೆ.

ಕಳೆದ ವರ್ಷ ಇದೇ ವೇಳೆಗೆ ಬರಗಾಲದ ಕಾರಣ ಜಲಾಶಯದಲ್ಲಿ ಕೇವಲ 3 ಟಿಎಂಸಿ ಅಡಿ ಸಂಗ್ರಹವಿತ್ತು. ಈ ವರ್ಷ, ಜಲಾಶಯದ ಮಟ್ಟವು 100.855 ಟಿಎಂಸಿ ಅಡಿ ಸಾಮರ್ಥ್ಯದ ಬದಲಿಗೆ 80 ಟಿಎಂಸಿಎಫ್‌ಟಿಗೆ ಏರಬಹುದು ಎಂದು ಅಧಿಕಾರಿಗಳು ಆಶಿಸಿದ್ದಾರೆ.

ತುಂಗಭದ್ರಾ ಜಲಾಶಯ
ಕಬಿನಿ ಜಲಾಶಯ ಬಹುತೇಕ ಭರ್ತಿ; ಕೆಆರ್‌ಎಸ್‌ ಒಳಹರಿವಿನಲ್ಲಿ ಹೆಚ್ಚಳ

ತುಂಗಾ ಮತ್ತು ಭದ್ರಾ ನದಿಗಳು ಚಿಕ್ಕಮಗಳೂರು ಜಿಲ್ಲೆಯಲ್ಲಿ ಹುಟ್ಟಿದ್ದು, ಎರಡು ವಾರಗಳ ಹಿಂದೆ ನದಿಗಳ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ.

ಜಲಾಶಯದಲ್ಲಿ ನೀರಿನ ಮಟ್ಟ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಾಲೆಗಳಿಗೆ 200 ಕ್ಯೂಸೆಕ್ ನೀರು ಬಿಡಲಾಗುತ್ತಿದೆ ಎಂದು ಹೊಸಪೇಟೆಯ ರೈತ ಮುಖಂಡ ಶಾಂತಾರಾಮ್ ಕೆ ಹೇಳಿದ್ದಾರೆ.

ಇದೇ ವೇಳೆ ವಿಜಯನಗರ, ಕೊಪ್ಪಳ, ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಭತ್ತ, ಮೆಣಸಿನಕಾಯಿ ಬೆಳೆಗಳಿಗೆ ನೀರಿನ ಅಗತ್ಯವಿದ್ದು, ನೀರು ಬಿಡುವಂತೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com