ವಾಲ್ಮೀಕಿ ನಿಗಮ, ಮುಡಾ ಹಗರಣ: ಸಿಬಿಐ ತನಿಖೆಗೆ ಯದುವೀರ್ ಒಡೆಯರ್ ಒತ್ತಾಯ

ಹಗರಣದಲ್ಲಿ ಭಾಗಿಯಾಗದಿದ್ದರೆ ಸಿಬಿಐ ತನಿಖೆ ಎದುರಿಸಲು ಕಾಂಗ್ರೆಸ್ ನಾಯಕರು ಹಿಂಜರಿಯಬಾರದು. ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು. ಆರೋಪ ಎದುರಿಸುತ್ತಿರುವವರು ಸಿಬಿಐ ತನಿಖೆ ನಂತರ ಆರೋಪ ಮುಕ್ತರಾಗಿ ಬರಲಿ ಎಂದರು.
ಸಂಸದ ಯದುವೀರ್ ಒಡೆಯರ್ ಸಾಂದರ್ಭಿಕ ಚಿತ್ರ
ಸಂಸದ ಯದುವೀರ್ ಒಡೆಯರ್ ಸಾಂದರ್ಭಿಕ ಚಿತ್ರ
Updated on

ಮಡಿಕೇರಿ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಹಾಗೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾದ ಹಗರಣ ಕುರಿತು ನ್ಯಾಯಯುತ ತನಿಖೆಗಾಗಿ ಸಿಬಿಐಗೆ ವಹಿಸಬೇಕು ಎಂದು ಮೈಸೂರು-ಕೊಡಗು ಲೋಕಸಭೆ ಎಂಪಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಒತ್ತಾಯಿಸಿದ್ದಾರೆ.

ಸಂಸದ ಯದುವೀರ್ ಒಡೆಯರ್ ಸಾಂದರ್ಭಿಕ ಚಿತ್ರ
ಮಹರ್ಷಿ ವಾಲ್ಮೀಕಿ ನಿಗಮ ಅವ್ಯವಹಾರ: ಕರ್ನಾಟಕ ಸರ್ಕಾರ ಎಷ್ಟು ಪರ್ಸೆಂಟ್ ಕಪ್ಪ ನೀಡಿದೆ?: ರಾಹುಲ್ ಗಾಂಧಿಗೆ ಬಿಜೆಪಿ ಪ್ರಶ್ನೆ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಿಯಾಗಿ ಆಡಳಿತ ನಡೆಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿದರು. ಹಗರಣದಲ್ಲಿ ಭಾಗಿಯಾಗದಿದ್ದರೆ ಸಿಬಿಐ ತನಿಖೆ ಎದುರಿಸಲು ಕಾಂಗ್ರೆಸ್ ನಾಯಕರು ಹಿಂಜರಿಯಬಾರದು. ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು. ಆರೋಪ ಎದುರಿಸುತ್ತಿರುವವರು ಸಿಬಿಐ ತನಿಖೆ ನಂತರ ಆರೋಪ ಮುಕ್ತರಾಗಿ ಬರಲಿ ಎಂದರು.

ಸಂಸದ ಯದುವೀರ್ ಒಡೆಯರ್ ಸಾಂದರ್ಭಿಕ ಚಿತ್ರ
ಮುಡಾ ಹಗರಣ: 50:50 ಹಂಚಿಕೆ ರದ್ದು; ಸಿಬಿಐ ತನಿಖೆಗೆ ವಹಿಸಲ್ಲ ಎಂದ ಸರ್ಕಾರ

ಮುಡಾವನ್ನು ಹಿಂದಿನ ಮೈಸೂರು ಸಂಸ್ಥಾನದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ನಿವೇಶನ ಒದಗಿಸುವ ಉದ್ದೇಶದಿಂದ ಸ್ಥಾಪಿಸಲಾಗಿತ್ತು. ಆದರೆ, ಇಂದು ಪ್ರಾಧಿಕಾರ ಶ್ರೀಮಂತರಿಗೆ ನಿವೇಶನ ನೀಡುತ್ತಿದೆ ಎಂದು ಸಂಸದ ಯದುವೀರ್ ಒಡೆಯರ್ ಆಕ್ರೋಶ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com