ಬೆಂಗಳೂರು ಟೆಕ್ ಶೃಂಗಸಭೆ 2024: B2B ಸಭೆಗಳು, ಉದ್ಯೋಗಗಳ ಮೇಲೆ ಆದ್ಯತೆ

ಈ ವರ್ಷದ ಟೆಕ್ ಸಮ್ಮಿಟ್ B2B ಸಭೆಗಳ ಮೇಲೆ ಕೇಂದ್ರೀಕರಿಸುತ್ತದೆ, ಪ್ರತಿನಿಧಿಗಳು ಫಲಪ್ರದ ಚರ್ಚೆಗಳಲ್ಲಿ ತೊಡಗಿಸಿಕೊಳ್ಳಲು ಮತ್ತು ಕರ್ನಾಟಕದಲ್ಲಿ ಹೆಚ್ಚಿನ ಉದ್ಯೋಗವನ್ನು ಸೃಷ್ಟಿಸಲು ಅನುವು ಮಾಡಿಕೊಡುತ್ತದೆ.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಶುಕ್ರವಾರ ಬೆಂಗಳೂರಿನಲ್ಲಿ ಟೆಕ್ ಉದ್ಯಮದ ಪ್ರಮುಖರೊಂದಿಗೆ ಸಂವಾದ ನಡೆಸಿದರು.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಶುಕ್ರವಾರ ಬೆಂಗಳೂರಿನಲ್ಲಿ ಟೆಕ್ ಉದ್ಯಮದ ಪ್ರಮುಖರೊಂದಿಗೆ ಸಂವಾದ ನಡೆಸಿದರು.
Updated on

ಬೆಂಗಳೂರು: ನವೆಂಬರ್ 19ರಿಂದ 21ರವರೆಗೆ ನಡೆಯಲಿರುವ ಬೆಂಗಳೂರು ಟೆಕ್ ಶೃಂಗಸಭೆ (BTS) ಗೂ ಮುನ್ನ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ನಿನ್ನೆ ಶುಕ್ರವಾರ ಐಟಿ, ಸೆಮಿಕಂಡಕ್ಟರ್, ಬಯೋಟೆಕ್, ಎಲೆಕ್ಟ್ರಾನಿಕ್ಸ್ ಮತ್ತು ಇತರ ಸ್ಟಾರ್ಟ್‌ಅಪ್‌ಗಳ 200 ಮುಖ್ಯಸ್ಥರೊಂದಿಗೆ ಉಪಹಾರ ಸಭೆ ನಡೆಸಿದರು.

ಈ ವರ್ಷದ ಟೆಕ್ ಸಮ್ಮಿಟ್ B2B ಸಭೆಗಳ ಮೇಲೆ ಕೇಂದ್ರೀಕರಿಸುತ್ತದೆ, ಪ್ರತಿನಿಧಿಗಳು ಫಲಪ್ರದ ಚರ್ಚೆಗಳಲ್ಲಿ ತೊಡಗಿಸಿಕೊಳ್ಳಲು ಮತ್ತು ಕರ್ನಾಟಕದಲ್ಲಿ ಹೆಚ್ಚಿನ ಉದ್ಯೋಗವನ್ನು ಸೃಷ್ಟಿಸಲು ಅನುವು ಮಾಡಿಕೊಡುತ್ತದೆ.

ನಾವೀನ್ಯತೆಯನ್ನು ಪೋಷಿಸುವ, ಹೂಡಿಕೆಯನ್ನು ಪ್ರೋತ್ಸಾಹಿಸುವ ಮತ್ತು ಸುಸ್ಥಿರ ಬೆಳವಣಿಗೆಯನ್ನು ಬೆಂಬಲಿಸುವ ವಾತಾವರಣವನ್ನು ಬೆಳೆಸಲು ನಾವು ಬದ್ಧರಾಗಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು. 2023ರ ಆರ್ಥಿಕ ವರ್ಷದಲ್ಲಿ ರಾಜ್ಯವು ಜಿಎಸ್‌ಡಿಪಿ ಬೆಳವಣಿಗೆಯ ದರವನ್ನು (ನಾಮಮಾತ್ರ) ಶೇಕಡಾ 14.2 ರಷ್ಟು ಸಾಧಿಸಲು ಸರ್ಕಾರದ ಮುಂದುವರಿಕೆಯ ನೀತಿಗಳಿಂದಾಗಿ ಸಾಧ್ಯವಾಯಿತು ಎಂದರು.

ಕರ್ನಾಟಕವು ದೇಶದ ನಾಲ್ಕನೇ ಅತಿದೊಡ್ಡ ರಾಜ್ಯವಾಗಿದೆ. ಭಾರತದ ಜಿಡಿಪಿಗೆ ಸುಮಾರು ಶೇಕಡಾ 8.2ರಷ್ಟು ಕೊಡುಗೆ ನೀಡುತ್ತದೆ. ಕರ್ನಾಟಕವು ತಾಂತ್ರಿಕ ಪ್ರಗತಿಯ ಮುಂದಿನ ಅಲೆಯನ್ನು ಕಾಣುತ್ತಿದೆ. ಬೆಳವಣಿಗೆ ಮತ್ತು ನಾವೀನ್ಯತೆಯನ್ನು ಉತ್ತೇಜಿಸುವ ದೃಢವಾದ ಮೂಲಸೌಕರ್ಯ, ನುರಿತ ಕಾರ್ಯಪಡೆ ಮತ್ತು ನಿಯಂತ್ರಣ ಚೌಕಟ್ಟನ್ನು ರಚಿಸುತ್ತದೆ ಎಂದು ಅವರು ಹೇಳಿದರು.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಶುಕ್ರವಾರ ಬೆಂಗಳೂರಿನಲ್ಲಿ ಟೆಕ್ ಉದ್ಯಮದ ಪ್ರಮುಖರೊಂದಿಗೆ ಸಂವಾದ ನಡೆಸಿದರು.
ಜಪಾನ್-ಕೊರಿಯಾ ಕಂಪನಿಗಳಿಂದ ರಾಜ್ಯದಲ್ಲಿ 6,450 ಕೋಟಿ ರೂ ಹೂಡಿಕೆ; ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ!

BTS-2024 ಎಲೆಕ್ಟ್ರೋ-ಸೆಮಿಕಾನ್, ಹೊಸ-ಯುಗದ ತಂತ್ರಜ್ಞಾನಗಳ ಸುತ್ತ ನಾವೀನ್ಯತೆ ಮತ್ತು ಚರ್ಚೆಯನ್ನು ಆಹ್ವಾನಿಸಲು. ಐಟಿ ಮತ್ತು ಡೀಪ್ ಟೆಕ್, ಬಯೋಟೆಕ್ ಮತ್ತು ಹೆಲ್ತ್ ಟೆಕ್, ಸ್ಟಾರ್ಟ್ಅಪ್ ಇಕೋಸಿಸ್ಟಮ್, ಗ್ಲೋಬಲ್ ಇನ್ನೋವೇಶನ್ ಅಲೈಯನ್ಸ್, ಇಂಡಿಯಾ-ಯುಎಸ್ಎ ಟೆಕ್ ಕಾನ್ಕ್ಲೇವ್ ಮುಂತಾದ ಇತರ ಕ್ಷೇತ್ರಗಳು ಮುಂದುವರಿಯುತ್ತವೆ.

ರಾಜ್ಯದಾದ್ಯಂತ ಹೆಚ್ಚುತ್ತಿರುವ ಇನ್‌ಕ್ಯುಬೇಶನ್ ಸೆಂಟರ್‌ಗಳೊಂದಿಗೆ, ಸರ್ಕಾರವು ಕೌಶಲ್ಯ ನಿರ್ಮಾಣವನ್ನು ನೋಡುತ್ತಿದೆ. ಜಾಗತಿಕ ಸಾಮರ್ಥ್ಯ ಕೇಂದ್ರಗಳಿಗೆ (ಜಿಸಿಸಿ) ಪ್ಲಗ್ ಮತ್ತು ಪ್ಲೇ ಸೌಲಭ್ಯಗಳನ್ನು ನೀಡಲು ಸಿದ್ಧವಾಗಿದೆ. ಬೆಳಗಾವಿಯಲ್ಲಿ ಏರೋಸ್ಪೇಸ್ ಆಗಿರಲಿ, ಮೈಸೂರಿನಲ್ಲಿ ಸೆಮಿಕಂಡಕ್ಟರ್‌ಗಳು ಮತ್ತು ಮಂಗಳೂರಿನಲ್ಲಿ ಸ್ಟಾರ್ಟ್‌ಅಪ್‌ಗಳು ಬೆಂಗಳೂರಿನ ಆಚೆಗೂ ಹೊಸ ಆವಿಷ್ಕಾರದ ಅಲೆ ಬರುವುದು ಖಚಿತ ಎಂದು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.


ಮುಂಬರುವ ನೀತಿಗಳು:
ಚಲನಶೀಲತೆ, ಟ್ರಾಫಿಕ್ ಮತ್ತು ಘನತ್ಯಾಜ್ಯ ನಿರ್ವಹಣೆಯಂತಹ ನೈಜ ಜೀವನದ ಸಮಸ್ಯೆಗಳನ್ನು ನಿಭಾಯಿಸಲು ಸ್ಟಾರ್ಟಪ್‌ಗಳು ಮತ್ತು ಕಂಪನಿಗಳು ಒಗ್ಗೂಡಲು ಕರ್ನಾಟಕ ನಗರ ಶೃಂಗಸಭೆಯನ್ನು ಆಯೋಜಿಸುತ್ತದೆ

ಉತ್ಪನ್ನ ಮತ್ತು ಎಂಜಿನಿಯರಿಂಗ್‌ನ ಶ್ರೇಷ್ಠತೆಯ ಕೇಂದ್ರ, ಮುಂದಿನ 3 ತಿಂಗಳಲ್ಲಿ ನೀಲನಕ್ಷೆಯನ್ನು ಬಿಡುಗಡೆ ಮಾಡಲಾಗುವುದು

AI ನೀತಿಗಾಗಿ ಮುಂದಿನ 15 ದಿನಗಳಲ್ಲಿ ಕಾರ್ಯಕಾರಿ ಸಮಿತಿಯನ್ನು ರಚಿಸಲಾಗುವುದು. ಕರ್ನಾಟಕ ಪ್ಲಾಟ್‌ಫಾರ್ಮ್ ಆಧಾರಿತ ಗಿಗ್ ವರ್ಕರ್ಸ್ (ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ) ಮಸೂದೆ 2024ಕ್ಕೆ ಸಮಾಲೋಚನೆಗಳಿಗಾಗಿ ವಿಸ್ತರಿಸಲಾಗುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com