ಕಲಘಟಗಿ: ಜಿಂಕೆ ಬೇಟೆಯಾಡಿದ ಮೂವರು ಆರೋಪಿಗಳ ಬಂಧನ

ವದಂತಿ ಆಧರಿಸಿ ಅರಣ್ಯಾಧಿಕಾರಿಗಳು ದಿಢೀರ್‌ ತಪಾಸಣೆ ನಡೆಸಿ ವಾಹನಗಳನ್ನು ಪರಿಶೀಲಿಸಿದಾಗ ಜಿಂಕೆ ಮಾಂಸ ಇರುವುದು ಪತ್ತೆಯಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಧಾರವಾಡ: ಕಲಘಟಗಿ ವ್ಯಾಪ್ತಿಯಲ್ಲಿ ಜಿಂಕೆ ಬೇಟೆಯಾಡಿದ ಮೂವರು ಆರೋಪಿಗಳನ್ನು ಅರಣ್ಯಾಧಿಕಾರಿಗಳು ಬಂಧನಕ್ಕೊಳಪಡಿಸಿದ್ದಾರೆ.

ಬಂಧಿತ ಮೂವರು ಆರೋಪಿಗಳು ರೈತರಾಗಿದ್ದು, ನಾಯಿಗಳ ಸಹಾಯದಿಂದ ಜಿಂಕೆಯನ್ನು ಬೇಟೆಯಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಂಗ್ರಹ ಚಿತ್ರ
ಸಿಂಹದ ಬಾಯಿಂದಲೇ ಬೇಟೆ ಕದ್ದ ಬೇಟೆಗಾರರು!

ವದಂತಿ ಆಧರಿಸಿ ಅರಣ್ಯಾಧಿಕಾರಿಗಳು ದಿಢೀರ್‌ ತಪಾಸಣೆ ನಡೆಸಿ ವಾಹನಗಳನ್ನು ಪರಿಶೀಲಿಸಿದಾಗ ಜಿಂಕೆ ಮಾಂಸ ಇರುವುದು ಪತ್ತೆಯಾಗಿದೆ.

ಅರಣ್ಯಾಧಿಕಾರಿ ಅರುಣ್ ಕುಮಾರ್ ಮಾತನಾಡಿ, ಶುಕ್ರವಾರ ಕಂಡ್ಲಿ ಗ್ರಾಮ ಅರಣ್ಯ ಪ್ರದೇಶದಲ್ಲಿ ದಾಳಿ ನಡೆಸಲಾಗಿತ್ತು. ಈ ವೇಳೆ ವಾಹನದಲ್ಲಿದ್ದ ಜಿಂಕೆ ಮಾಂಸ- ಕಾಲುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕೃತ್ಯದಲ್ಲಿ ಭಾಗಿಯಾಗಿರುವ ಇನ್ನೂ ಕೆಲವು ಆರೋಪಿಗಳ ಹುಡುಕಾಟ ಮುಂದುವರೆದಿದೆ. ಮೂವರು ತಲೆಮರೆಸಿಕೊಂಡಿದ್ದಾರೆ. ಆರೋಪಿಗಳು ಮಾಂಸವನ್ನು ತಮ್ಮ ಸಂಬಂಧಿಕರ ಮನೆಗೆ ಸಾಗಿಸುತ್ತಿದ್ದರು ಎಂದು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com