20 ವರ್ಷಗಳ ಹಿಂದಿನ ಕೊಲೆ ಪ್ರಕರಣ: ಕನ್ನಡ ಸಿನಿಮಾ ನಿರ್ದೇಶಕ ಬಂಧನ!

ರೌಡಿ ಶೀಟರ್ ಕೋಥಾ ರವಿ ಹತ್ಯೆ ಪ್ರಕರಣದಲ್ಲಿ ನಿರ್ದೇಶಕ 8ನೇ ಆರೋಪಿಯಾಗಿದ್ದಾರೆ. ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2004ರಲ್ಲಿ ಕೊಲೆ ನಡೆದಿತ್ತು.
ನಿರ್ದೇಶಕ ಗಜ
ನಿರ್ದೇಶಕ ಗಜ
Updated on

ಬೆಂಗಳೂರು: 20 ವರ್ಷಗಳ ಹಿಂದಿನ ಕೊಲೆ ಪ್ರಕರಣದಲ್ಲಿ ಬೇಕಾಗಿದ್ದ ಕನ್ನಡ ಚಲನಚಿತ್ರ ನಿರ್ದೇಶಕರೊಬ್ಬರನ್ನು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ರೌಡಿ ಶೀಟರ್ ಕೋಥಾ ರವಿ ಹತ್ಯೆ ಪ್ರಕರಣದಲ್ಲಿ ನಿರ್ದೇಶಕ 8ನೇ ಆರೋಪಿಯಾಗಿದ್ದಾರೆ. ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2004ರಲ್ಲಿ ಕೊಲೆ ನಡೆದಿತ್ತು.

ನಿರ್ದೇಶಕನನ್ನು ಗಜೇಂದ್ರ ಅಲಿಯಾಸ್ ಗಜ ಎಂದು ಗುರುತಿಸಲಾಗಿದೆ. ರೌಡಿ ಶೀಟರ್ ಹತ್ಯೆ ನಂತರ ಪೊಲೀಸರು ಆತನನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಸುಮಾರು ಒಂದು ವರ್ಷ ನ್ಯಾಯಾಂಗ ಬಂಧನದಲ್ಲಿದ್ದು, ನಂತರ ಜಾಮೀನಿನ ಮೇರೆಗೆ ಜೈಲಿನಿಂದ ಹೊರಗೆ ಬಂದಿದ್ದರು. ತದನಂತರ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಚಂದ್ರಪ್ಪ ಮತ್ತು ಅಲ್ಯೂಮಿನಿಯಂ ಬಾಬು ಕೊಲೆಯಲ್ಲಿ ಭಾಗಿಯಾಗಿರುವ ಇನ್ನಿಬ್ಬರು.

ಅರಸಯ್ಯನ ಆಪ್ತನಾಗಿರುವ ಗಜೇಂದ್ರ ಎರಡು ಕನ್ನಡ ಮತ್ತು ತಮಿಳು ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ ಎನ್ನಲಾಗಿದೆ. ಜಾಮೀನು ಸಿಕ್ಕ ನಂತರ ಅವರು ನೆರೆಯ ರಾಜ್ಯದಲ್ಲಿ ನೆಲೆಸಿದ್ದರು ಎನ್ನಲಾಗಿದೆ. ಹೆಚ್ಚಿನ ತನಿಖೆಗಳು ನಡೆಯುತ್ತಿವೆ.

ನಿರ್ದೇಶಕ ಗಜ
ಕಾಪಿ ರೈಟ್ಸ್ ಉಲ್ಲಂಘನೆ ವಿರುದ್ಧ ನ್ಯಾಯಾಲಯದಲ್ಲಿ ಹೋರಾಟ: ರಕ್ಷಿತ್ ಶೆಟ್ಟಿಯ ಪರಂವಃ ಬಹಿರಂಗ ಪತ್ರ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com