ಕರಾವಳಿ ಭಾಗದಲ್ಲಿ ಮುಂದುವರೆದ ಮಳೆ: ನಾಳೆಯವರೆಗೂ 'ರೆಡ್ ಆಲರ್ಟ್' ವಿಸ್ತರಣೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಕಾರವಾರ ತಾಲೂಕಿನಲ್ಲಿ ಆರು, ಕುಮಟಾ ತಾಲೂಕಿನಲ್ಲಿ 6, ಹೊನ್ನಾವರ ತಾಲೂಕಿನಲ್ಲಿ 14 ಸೇರಿದಂತೆ 26 ಆರೈಕೆ ಕೇಂದ್ರಗಳನ್ನು ತೆರೆಯಲಾಗಿದ್ದು, 2,368 ಜನರಿಗೆ ಆಶ್ರಯ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು/ಶಿರಸಿ: ರಾಜ್ಯದ ಕರಾವಳಿ ಭಾಗದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಭಾರತೀಯ ಹವಾಮಾನ ಇಲಾಖೆ ನಾಳೆಯವರೆಗೂ 'ರೆಡ್ ಅಲರ್ಟ್' ವಿಸ್ತರಿಸಿದೆ.

ಇನ್ನೂ ದಕ್ಷಿಣ ಒಳನಾಡಿನಲ್ಲಿ ಮಳೆಯ ತೀವ್ರತೆ ಕಡಿಮೆಯಾದ ಕಾರಣ ಈ ಪ್ರದೇಶಕ್ಕೆ ಘೋಷಿಸಲಾಗಿದ್ದ ''ರೆಡ್ ಅಲರ್ಟ್' ಹಿಂತೆಗೆದುಕೊಂಡಿದ್ದು, ಜುಲೈ 20 ರವರೆಗೆ ಆರೆಂಜ್ ಆಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 19 ರಿಂದ ಮಳೆಯ ತೀವ್ರತೆ ಕಡಿಮೆಯಾಗುವ ನಿರೀಕ್ಷೆಯಿದೆ.

ಈ ಮಧ್ಯೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಕಾರವಾರ ತಾಲೂಕಿನಲ್ಲಿ ಆರು, ಕುಮಟಾ ತಾಲೂಕಿನಲ್ಲಿ 6, ಹೊನ್ನಾವರ ತಾಲೂಕಿನಲ್ಲಿ 14 ಸೇರಿದಂತೆ 26 ಚಿಕಿತ್ಸಾ ಕೇಂದ್ರಗಳನ್ನು ತೆರೆಯಲಾಗಿದ್ದು, 2,368 ಜನರಿಗೆ ಆಶ್ರಯ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ
ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ; ರೆಡ್ ಅಲರ್ಟ್ ಮುಂದುವರಿಕೆ

ಕಳೆದ 24 ಗಂಟೆಗಳಲ್ಲಿ ಕಾರವಾರ ತಾಲೂಕಿನಲ್ಲಿ ಮನೆ ಕುಸಿದು ಮೂರು ಮನೆಗಳು ಸಂಪೂರ್ಣ ಹಾನಿಯಾಗಿವೆ. ಒಂದು ಮನೆ ತೀವ್ರ ಹಾಗೂ 18 ಭಾಗಶಃ ಹಾನಿಯಾಗಿದ್ದು, ಓರ್ವ ವ್ಯಕ್ತಿ ಪ್ರಾಣ ಕಳೆದುಕೊಂಡಿದ್ದಾರೆ. ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರು ಜಿಲ್ಲಾಡಳಿತದ ತುರ್ತು ಸಹಾಯವಾಣಿ ಸಂಖ್ಯೆ 1077 ಹಾಗೂ ವಾಟ್ಸಾಪ್ ಸಂಖ್ಯೆ 94835 11015 ಗೆ ಕರೆ ಮಾಡಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲೂ ಮಳೆಯ ಅಬ್ಬರ ಜೋರಾಗಿದೆ. ಶೃಂಗೇರಿ ದೇವಸ್ಥಾನಕ್ಕೆ ಹೋಗುವ ರಸ್ತೆಗಳು ಜಲಾವೃತವಾಗಿದ್ದು, ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಲು ಸಾಧ್ಯವಾಗುತ್ತಿಲ್ಲ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮಾವಿನೂರು, ಕಾಗಿನೆರೆ ​​ಸೇರಿದಂತೆ ಹಲವು ಗ್ರಾಮಗಳಲ್ಲಿ ಮಳೆಯಿಂದಾಗಿ ಇಂದಿಗೂ ವಿದ್ಯುತ್ ಇಲ್ಲದಂತಾಗಿದೆ. ಈ ಭಾಗದಲ್ಲಿ ಕೆಸರು ಹೆಚ್ಚಾಗಿ ಆಗುತ್ತಿದ್ದು, ಸಕಲೇಶಪುರ-ಮಾರನಹಳ್ಳಿ ನಡುವಿನ ರಾಷ್ಟ್ರೀಯ ಹೆದ್ದಾರಿ 75ಕ್ಕೆ ಹೆಚ್ಚು ಹಾನಿಯಾಗುತ್ತಿದೆ ಎಂದು ಸಕಲೇಶಪುರ ಉಪ ವಿಭಾಗಾಧಿಕಾರಿ ಶ್ರುತಿ ತಿಳಿಸಿದ್ದಾರೆ.

ಹವಾಮಾನ ಇಲಾಖೆ ಪ್ರಕಾರ ಕಲೆದ 24 ಗಂಟೆ ಅವಧಿಯಲ್ಲಿ ಶಿವಮೊಗ್ಗ ಜಿಲ್ಲೆ ಆಗುಂಬೆಯಲ್ಲಿ ಅತಿ ಹೆಚ್ಚು 210 ಮಿ.ಮೀ. ಮಳೆಯಾಗಿದೆ. ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ಬಿಡುಗಡೆ ಮಾಡಿರುವ ಜಲಾಶಯ ನೀರಿನ ಮಟ್ಟದ ಪಟ್ಟಿಯ ಪ್ರಕಾರ, ಕಬಿನಿ ಜಲಾಶಯಕ್ಕೆ ಅದರ ಒಟ್ಟು ಸಾಮರ್ಥ್ಯದ ಶೇ.95ರಷ್ಟು ನೀರಿನ ಒಳ ಹರಿವಿದೆ. ಆಲಮಟ್ಟಿ ಜಲಾಶಯಕ್ಕೆ ಶೇ.80 ಮತ್ತು ನಾರಾಯಣಪುರ ಜಲಾಶಯಕ್ಕೆ ಶೇ. 87 ರಷ್ಟು ನೀರಿನ ಒಳ ಹರಿವಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com