ಹಾಸನ: ಡೆಂಗ್ಯೂ ಜ್ವರಕ್ಕೆ MBBS ವಿದ್ಯಾರ್ಥಿ ಸಾವು!

ಹೊಳೆನರಸೀಪುರ ತಾಲೂಕಿನ ಗೋಹಳ್ಳಿ ಮೂಲದ ಕುಶಾಲ್ (22) ಹೆಚ್‌ಐಎಂಎಸ್‌ನಲ್ಲಿ ಮೂರನೇ ವರ್ಷದ ಎಂಬಿಬಿಎಸ್ ವಿದ್ಯಾಭ್ಯಾಸ ಮಾಡುತ್ತಿದ್ದರು
Kushal was admitted to a private hospital after his health deteriorated.
ಕುಶಾಲ್(Photo | Express)
Updated on

ಹಾಸನ: ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಎಚ್‌ಐಎಂಎಸ್‌) ಅಂತಿಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಡೆಂಗ್ಯೂ ಜ್ವರಕ್ಕೆ ಶುಕ್ರವಾರ ಬಲಿಯಾಗಿದ್ದಾರೆ.

ಹೊಳೆನರಸೀಪುರ ತಾಲೂಕಿನ ಗೋಹಳ್ಳಿ ಮೂಲದ ಕುಶಾಲ್ (22) ಹೆಚ್‌ಐಎಂಎಸ್‌ನಲ್ಲಿ ಮೂರನೇ ವರ್ಷದ ಎಂಬಿಬಿಎಸ್ ವಿದ್ಯಾಭ್ಯಾಸ ಮಾಡುತ್ತಿದ್ದರು. ಗುರುವಾರ ಅವರ ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.

ಮೃತ ಕುಶಾಲ್ ಹುಟ್ಟಿದ್ದು ಬಡ ಕುಟುಂಬದಲ್ಲಿ. ತಂದೆ ಮಂಜುನಾಥ್ ವ್ಯಾಪಾರಸ್ಥರಾಗಿದ್ದು, ತಾಯಿ ರೇಖಾ ಟೈಲರ್ ಆಗಿದ್ದಾರೆ.

Kushal was admitted to a private hospital after his health deteriorated.
ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ: ಹಾಸಿಗೆಗಳನ್ನು ಮೀಸಲಿಡಲು ಸರ್ಕಾರಿ ಆಸ್ಪತ್ರೆಗಳಿಗೆ ಸೂಚನೆ

ಕುಶಾಲ್‌ನ ಪೋಷಕರು ಕೂಡ ಡೆಂಗ್ಯೂ ಸೋಂಕುವಿನಿಂದ ಬಳಲುತ್ತಿದ್ದು, ಹಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕುಶಾಲ್ ತಂದೆ ಮಂಜುನಾಥ್ ಸೋಂಕಿನಿಂದ ಚೇತರಿಸಿಕೊಂಡಿದ್ದು, ಇತ್ತೀಚೆಗಷ್ಟೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಅವರ ತಾಯಿ ರೇಖಾಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಹಾಸನ ಜಿಲ್ಲೆಯಲ್ಲಿ ಈ ವರೆಗೂ ಡೆಂಗ್ಯೂ ಜ್ವರಕ್ಕೆ ಮೂವರು ಮಕ್ಕಳು ಸೇರಿ ನಾಲ್ವರು ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com