ಬೆಂಗಳೂರು: ಗುರಾಯಿಸಿದ್ದನ್ನು ಪ್ರಶ್ನಿಸಿದ ಯುವಕನ ಬರ್ಬರ ಹತ್ಯೆ!

ಮನೋಜ್ ಶನಿವಾರ ಬೆಳಗ್ಗೆ 3 ಗಂಟೆ ಸುಮಾರಿಗೆ ತನ್ನ ಸ್ನೇಹಿತ ಆ್ಯಂಟನಿಯೊಂದಿಗೆ ರಸ್ತೆಯಲ್ಲಿ ಹೋಗುತ್ತಿದ್ದ. ಈ ವೇಳೆ ಎದುರಿನಿಂದ ಬಂದ ಆರೋಪಿಗಳ ಗುಂಪೊಂದು ಮನೋಜ್‌ನನ್ನು ಗುರಾಯಿಸಿದೆ. ಅದೇ ವಿಚಾರವಾಗಿ ಇಬ್ಬರ ನಡುವೆ ಜಗಳ ಆರಂಭವಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಗುರಾಯಿಸಿದ್ದನ್ನು ಪ್ರಶ್ನಿಸಿದ ಎಂಬ ಕಾರಣಕ್ಕೆ ಚಾಕುವಿನಿಂದ ಇರಿದು ಯುವಕನನ್ನು ಹತ್ಯೆಗೈದ ಘಟನೆ ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಯ್ಸಳ ನಗರದ 3ನೇ ಮುಖ್ಯರಸ್ತೆಯಲ್ಲಿ ಶನಿವಾರ ನಡೆದಿದೆ.

ಮೃತರನ್ನು ಖಾಸಗಿ ಸಂಸ್ಥೆಯ ಉದ್ಯೋಗಿ ಮನೋಜ್ (22) ಎಂದು ಗುರುತಿಸಲಾಗಿದ್ದು, ಘಟನೆಯಲ್ಲಿ ಗಾಯಗೊಂಡ ಮತ್ತೊಬ್ಬ ವ್ಯಕ್ತಿಯನ್ನು ಆ್ಯಂಟನಿ (23) ಎಂದು ಗುರುತಿಸಲಾಗಿದೆ, ಇಬ್ಬರೂ ಹೊಯ್ಸಳನಗರ ನಿವಾಸಿಗಳು.

ಮನೋಜ್ ಶನಿವಾರ ಬೆಳಗ್ಗೆ 3 ಗಂಟೆ ಸುಮಾರಿಗೆ ತನ್ನ ಸ್ನೇಹಿತ ಆ್ಯಂಟನಿಯೊಂದಿಗೆ ರಸ್ತೆಯಲ್ಲಿ ಹೋಗುತ್ತಿದ್ದ. ಈ ವೇಳೆ ಎದುರಿನಿಂದ ಬಂದ ಆರೋಪಿಗಳ ಗುಂಪೊಂದು ಮನೋಜ್‌ನನ್ನು ಗುರಾಯಿಸಿದೆ. ಅದೇ ವಿಚಾರವಾಗಿ ಇಬ್ಬರ ನಡುವೆ ಜಗಳ ಆರಂಭವಾಗಿದೆ.

ಸಂಗ್ರಹ ಚಿತ್ರ
ಬೆಂಗಳೂರು: ತಾತನಿಂದಲೇ 6 ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರ; ತಂದೆಯ ಅಪರಾಧ ಮುಚ್ಚಿಡಲು ಯತ್ನಿಸಿದ ಮಗನ ಬಂಧನ!

ನೋಡನೋಡುತ್ತಿದ್ದಂತೆ ಆರೋಪಿಗಳು ಚಾಕುವಿನಿಂದ ಮನೋಜ್‌ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತಕ್ಷಣ ಆತನ ಸ್ನೇಹಿತರು ಹತ್ತಿರದ ಆಸ್ಪತ್ರೆಗೆ ರವಾನಿಸಿದ್ದರು. ಆದರೆ ತೀವ್ರ ರಕ್ತಸ್ರಾವವಾಗಿದ್ದರಿಂದ ಚಿಕಿತ್ಸೆ ಫಲಿಸದೆ ಮನೋಜ್ ಮೃತಪಟ್ಟಿದ್ದಾನೆ. ಗಾಯಗೊಂಡಿರುವ ಆತನ ಸ್ನೇಹಿತ ಆ್ಯಂಟನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಹಳೆ ದ್ವೇಷದ ಹಿನ್ನೆಲೆಯಲ್ಲಿ ಎರಡು ಗುಂಪುಗಳ ನಡುವೆ ಜಗಳ ನಡೆದಿರುವ ಶಂಕೆ ವ್ಯಕ್ತವಾಗಿದೆ. ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿರುವುದಾಗಿ ರಾಮಮೂರ್ತಿ ನಗರ ಠಾಣಾ ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com