ವಾಲ್ಮೀಕಿ ಹಗರಣ: ಇಡಿ ಅಧಿಕಾರಿಗಳ ವಿರುದ್ಧದ ಎಫ್​ಐಆರ್​ಗೆ ಹೈಕೋರ್ಟ್ ತಡೆ

ತಮ್ಮ ವಿರುದ್ಧ ಎಫ್​​​ಐಆರ್ ದಾಖಲಿಸಿರುವುದನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯದ ಈ ಇಬ್ಬರು ಅಧಿಕಾರಿಗಳು ಹೈಕೋರ್ಟ್ ಮೊರೆ ಹೋಗಿದ್ದರು.
ಹೈಕೋರ್ಟ್
ಹೈಕೋರ್ಟ್
Updated on

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ(ಇಡಿ) ಇಬ್ಬರು ಅಧಿಕಾರಿಗಳ ವಿರುದ್ಧ ಕರ್ನಾಟಕ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ಗೆ ಹೈಕೋರ್ಟ್‌ ಮಂಗಳವಾರ ತಡೆಯಾಜ್ಞೆ ನೀಡಿದೆ.

ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಚಿವ ನಾಗೇಂದ್ರ ಅವರ ಹೆಸರು ಹೇಳುವಂತೆ ಇಡಿ ಅಧಿಕಾರಿಗಳು ತನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆಂದು ಆರೋಪಿಸಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಕಲ್ಲೇಶ್ ಬಿ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬೆಂಗಳೂರಿನ ವಿಲ್ಸನ್‌ ಗಾರ್ಡನ್‌ ಪೊಲೀಸ್‌ ಠಾಣೆಯಲ್ಲಿ ಇಡಿ ಅಧಿಕಾರಿಗಳಾದ ಕಣ್ಣನ್ ಮತ್ತು ಮಿತ್ತಲ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು.

ತಮ್ಮ ವಿರುದ್ಧ ಎಫ್​​​ಐಆರ್ ದಾಖಲಿಸಿರುವುದನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯದ ಈ ಇಬ್ಬರು ಅಧಿಕಾರಿಗಳು ಹೈಕೋರ್ಟ್ ಮೊರೆ ಹೋಗಿದ್ದರು.

ಹೈಕೋರ್ಟ್
ವಾಲ್ಮೀಕಿ ನಿಗಮ ಹಗರಣ: ಅಧಿಕಾರಿಗಳ ವಿರುದ್ಧ FIR ಪ್ರಶ್ನಿಸಿ ಹೈಕೋರ್ಟ್​​ ನಲ್ಲಿ ಇಡಿ ಅರ್ಜಿ

ಹಗರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಯನ್ನು ಬುಡಮೇಲು ಮಾಡುವ ಉದ್ದೇಶದಿಂದ ಎಫ್‌ಐಆರ್ ದಾಖಲಿಸಲಾಗಿದೆ. ಯಾವುದೇ ಪ್ರಾಥಮಿಕ ವಿಚಾರಣೆಯಿಲ್ಲದೆ ಕರ್ನಾಟಕ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಹೀಗಾಗಿ, ಎಫ್‌ಐಆರ್‌ಗೆ ತಡೆ ನೀಡಬೇಕು ಎಂದು ಇಡಿ ಅಧಿಕಾರಿಗಳು ಮನವಿ ಮಾಡಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಇಡಿ ಅಧಿಕಾರಿಗಳ ವಿರುದ್ಧದ ಎಫ್​ಐಆರ್​ಗೆ ತಡೆ ನೀಡಿ ಆದೇಶಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com