ಹಾಸನ: ತಂದೆಯ ಕಿರುಕುಳ ತಾಳಲಾರದೆ ಪುತ್ರ ಆತ್ಮಹತ್ಯೆ!

ಮೃತನ ತಂದೆ ಸೈಯದ್ ಪಾಷಾ ಹಲವು ಸಂದರ್ಭಗಳಲ್ಲಿ ಕೌಟುಂಬಿಕ ವಿಚಾರವಾಗಿ ತನ್ನ ಮಗ ಮತ್ತು ಸೊಸೆ ವಿರುದ್ಧ ಅವಾಚ್ಯ ಶಬ್ಧಗಳಿಂದ ಜಗಳವಾಡುತ್ತಿದ್ದ ಎನ್ನಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಹಾಸನ: ಕೌಟುಂಬಿಕ ವಿಚಾರಕ್ಕೆ ತಂದೆಯ ನಿರಂತರ ಕಿರುಕುಳ ತಾಳಲಾರದೆ ಪುತ್ರನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅರಸೀಕೆರೆಯಲ್ಲಿ ಬುಧವಾರ ನಡೆದಿದೆ. ಮೃತನನ್ನು ಅಕಿಲ್ ಪಾಶ (25) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ
ರಾಮನಗರ: 4 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಕೊಲೆ, ಸಂಬಂಧಿ ಅರೆಸ್ಟ್

ಮೃತನ ತಂದೆ ಸೈಯದ್ ಪಾಷಾ ಹಲವು ಸಂದರ್ಭಗಳಲ್ಲಿ ಕೌಟುಂಬಿಕ ವಿಚಾರವಾಗಿ ತನ್ನ ಮಗ ಮತ್ತು ಸೊಸೆ ವಿರುದ್ಧ ಅವಾಚ್ಯ ಶಬ್ಧಗಳಿಂದ ಜಗಳವಾಡುತ್ತಿದ್ದ ಎನ್ನಲಾಗಿದೆ.

ಸಂಬಂಧಿಕರು ಮತ್ತು ನೆರೆಹೊರೆಯವರು ಪೊಲೀಸರ ಸಹಾಯದಿಂದ ಸೈಯದ್ ಪಾಷಾ ಮತ್ತು ಅವರ ಮಗನನ್ನು ಸಮಾಧಾನಪಡಿಸಲು ಹಲವು ಬಾರಿ ಪ್ರಯತ್ನಿಸಿದರೂ ಅದು ವಿಫಲವಾಗಿದೆ. ಈ ಸಂಬಂಧ ಸೈಯದ್ ಪಾಷಾ ವಿರುದ್ಧ ಅರಸೀಕೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com