ವಿಪಕ್ಷಗಳ ಅಹೋರಾತ್ರಿ ಧರಣಿ: ವಿಧಾನಸಭೆ, ಪರಿಷತ್ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಮುಡಾ ಅಕ್ರಮ ಸೈಟ್ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳು ಚರ್ಚೆಗೆ ಪಟ್ಟುಹಿಡಿದು ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಅಹೋರಾತ್ರಿ ಧರಣಿ ನಡೆಸುತ್ತಿದೆ.
ವಿಧಾನಸಭೆ ಕಲಾಪ
ವಿಧಾನಸಭೆ ಕಲಾಪ
Updated on

ಬೆಂಗಳೂರು: ಮುಡಾ ಅಕ್ರಮ ಸೈಟ್ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳು ಚರ್ಚೆಗೆ ಪಟ್ಟುಹಿಡಿದು ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಅಹೋರಾತ್ರಿ ಧರಣಿ ನಡೆಸುತ್ತಿದೆ.

ಇಂದು ಸಹ ಸದನದಲ್ಲಿ ವಿಪಕ್ಷಗಳು ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ಚರ್ಚೆಗೆ ಅವಕಾಶ ನೀಡುವಂತೆ ಗದ್ದಲ ಎಬ್ಬಿಸಿದರು. ಈ ಹಿನ್ನೆಲೆಯಲ್ಲಿ ವಿಧಾನಸಭೆ ಹಾಗೂ ವಿಧಾನ ಪರಿಷತ್ ಕಲಾಪಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.

ಜುಲೈ 15ರಂದು ಅಧಿವೇಶನ ಆರಂಭವಾಗಿದ್ದು, ಜುಲೈ 26ರವರೆಗೆ ನಡೆಯಬೇಕಿತ್ತು. ಆದರೆ ವಿಪಕ್ಷಗಳ ಗದ್ದಲದಿಂದಾಗಿ ಒಂದು ದಿನ ಮೊದಲೇ ಕಲಾಪಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಿಕೆ ಮಾಡಲಾಗಿದೆ. ವಿಧಾನಸಭೆ ಕಲಾಪವನ್ನು ಸ್ಪೀಕರ್ ಯುಟಿ ಖಾದರ್ ಮುಂದೂಡಿದರೆ ವಿಧಾನಪರಿಷತ್ ಕಲಾಪವನ್ನು ಉಪಸಭಾಪತಿ ಪ್ರಾಣೇಶ್ ಮುಂದೂಡಿದರು.

ವಿಧಾನಸಭೆ ಕಲಾಪ
ಒಂದು ರಾಷ್ಟ್ರ ಒಂದು ಚುನಾವಣೆ ಮತ್ತು ಕ್ಷೇತ್ರ ಪುನರ್ ವಿಂಗಡಣೆ ವಿರೋಧಿಸಿ ವಿಧಾನಸಭೆಯಲ್ಲಿ ನಿರ್ಣಯ

ಇಂದು ಬೆಳಿಗ್ಗೆ ಸಹ ಪ್ರತಿಪಕ್ಷಗಳು ಧರಣಿಯನ್ನು ಮುಂದುವರೆಸಿದ್ದರಿಂದ ಸದನದಲ್ಲಿ ಸುಗಮ ಕಲಾಪ ಸಾಧ್ಯವಾಗದೆ ಸದನವನ್ನು ಎರಡು ಬಾರಿ ಮುಂದೂಡಲಾಯಿತು. ಮತ್ತೆ ಕಲಾಪ ಆರಂಭಗೊಂಡ ನಂತರ ವಿಪಕ್ಷಗಳ ಗದ್ದಲದ ನಡುವೆ ಸಭಾಧ್ಯಕ್ಷರು ಕೆಲ ವಿಧೇಯಕಗಳ ಮಂಡನೆ, ಅಂಗೀಕಾರ ಕಲಾಪ ನಡೆಸಿದರು. ನಂತರ ಸದನದ ಕಲಾಪಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com