ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ 10 ಲಕ್ಷ ರೂ ಸಾಲ: ವಿದ್ಯಾರ್ಥಿಗಳು, ತಜ್ಞರ ಮಿಶ್ರ ಪ್ರತಿಕ್ರಿಯೆ

ಸರ್ಕಾರವು ಯುವಜನರಿಗೆ ಕೌಶಲ್ಯ ಮತ್ತು ಅವಕಾಶಗಳನ್ನು ಒದಗಿಸುವ ಉದ್ದೇಶವನ್ನು ಹೊಂದಿದ್ದರೂ, ವಿದ್ಯಾರ್ಥಿಗಳು ಮತ್ತು ತಜ್ಞರು ಈ ಹಣಕಾಸಿನ ಸಾಲಗಳಿಗೆ ಮಿಶ್ರ ಪ್ರತಿಕ್ರಿಯೆಯನ್ನು ಹೊಂದಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಸರ್ಕಾರಿ ಯೋಜನೆಗಳು ಮತ್ತು ನೀತಿಗಳ ಅಡಿಯಲ್ಲಿ ಯಾವುದೇ ಪ್ರಯೋಜನಕ್ಕೆ ಅನರ್ಹರಾಗಿರುವ ವಿದ್ಯಾರ್ಥಿಗಳು ಈಗ ದೇಶೀಯ ಶಿಕ್ಷಣ ಸಂಸ್ಥೆಗಳಲ್ಲಿ ಉನ್ನತ ಶಿಕ್ಷಣಕ್ಕಾಗಿ ಶೇಕಡಾ 3ರ ಬಡ್ಡಿದರದಲ್ಲಿ 10 ಲಕ್ಷ ರೂಪಾಯಿಗಳವರೆಗೆ ಸಾಲವನ್ನು ಪಡೆಯಬಹುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ 2024ರಲ್ಲಿ ಘೋಷಿಸಿದ್ದಾರೆ.

ಪ್ರತಿ ವರ್ಷ ಒಂದು ಲಕ್ಷ ವಿದ್ಯಾರ್ಥಿಗಳಿಗೆ ನೇರ ಇ-ವೋಚರ್‌ಗಳನ್ನು ನೀಡಲಾಗುವುದು ಎಂದು ಅವರು ಹೇಳಿದರು. ಸರ್ಕಾರವು ಯುವಜನರಿಗೆ ಕೌಶಲ್ಯ ಮತ್ತು ಅವಕಾಶಗಳನ್ನು ಒದಗಿಸುವ ಉದ್ದೇಶವನ್ನು ಹೊಂದಿದ್ದರೂ, ವಿದ್ಯಾರ್ಥಿಗಳು ಮತ್ತು ತಜ್ಞರು ಈ ಹಣಕಾಸಿನ ಸಾಲಗಳಿಗೆ ಮಿಶ್ರ ಪ್ರತಿಕ್ರಿಯೆಯನ್ನು ಹೊಂದಿದ್ದಾರೆ.

ಬೆಂಗಳೂರಿನ ಬಿಎಂಎಸ್ ಕಾಲೇಜ್ ಆಫ್ ಇಂಜಿನಿಯರಿಂಗ್ (ಬಿಎಂಎಸ್‌ಸಿಇ)ನ ನಾಲ್ಕನೇ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿ ತನಿಷ್ಕ್ ಕುಮಾರ್, ದೇಶದ ಇತರ ಬ್ಯಾಂಕ್‌ಗಳಿಗೆ ಹೋಲಿಸಿದರೆ ಬಡ್ಡಿ ದರವು ಕಡಿಮೆ ಇರುವುದರಿಂದ ಸಾಲ ಯೋಜನೆ ವಿದ್ಯಾರ್ಥಿಗಳಿಗೆ ಹೆಚ್ಚು ಪ್ರಯೋಜನಕಾರಿಯಾಗಿದೆ. ಇಂತಹ ಸಾಲಗಳು ವಿದ್ಯಾರ್ಥಿಗಳಿಗೆ ವಿದೇಶಕ್ಕೆ ಹೋಗುವ ಬದಲು ದೇಶದೊಳಗಿನ ಸಂಸ್ಥೆಗಳಲ್ಲಿ ಅಧ್ಯಯನ ಮಾಡಲು ಸಹಾಯ ಮಾಡುತ್ತದೆ. ಇದು ದೇಶದಲ್ಲಿ ನುರಿತ ಕೌಶಲ್ಯಭರಿತ ವ್ಯಕ್ತಿಗಳನ್ನು ಉಳಿಸಿಕೊಳ್ಳಲು ಸಹಾಯ ಮಾಡುತ್ತದೆ ಎಂದರು.

ಆದಾಗ್ಯೂ, ಇಂತಹ ಸಾಲಗಳು ವಿದ್ಯಾರ್ಥಿಗಳು ಕಷ್ಟಪಟ್ಟು ಕೆಲಸ ಮಾಡುವುದರಿಂದ ಮತ್ತು ಅವರ ಕೋರ್ಸ್‌ಗಳನ್ನು ಮುಂದುವರಿಸುವುದರಿಂದ ದೂರವಿರಲು ಕಾರಣವಾಗಬಹುದು ಎಂದು ಇನ್ನೊಬ್ಬ ವಿದ್ಯಾರ್ಥಿ ಹೇಳುತ್ತಾರೆ. ಇಂತಹ ದೊಡ್ಡ ಸಾಲಗಳಿಗೆ ಸುಲಭ ಪ್ರವೇಶವು ಒಟ್ಟಾರೆ ಆರ್ಥಿಕತೆಯಲ್ಲಿ ಕುಸಿತಕ್ಕೆ ಕಾರಣವಾಗಬಹುದು. ಇದನ್ನು ಕೆಲವು ಗುಂಪುಗಳಿಗೆ ಮಾತ್ರ ನೀಡಬೇಕಾಗಿದೆ ಅಥವಾ ಇದು ವಿದ್ಯಾರ್ಥಿಗಳಲ್ಲಿ ಜವಾಬ್ದಾರಿಯುತ ಉಳಿತಾಯವನ್ನು ನಿರುತ್ಸಾಹಗೊಳಿಸುತ್ತದೆ, ಜನರು ತಮ್ಮ ಆರ್ಥಿಕ ಭದ್ರತೆಯನ್ನು ನಿರ್ಮಿಸುವ ಬದಲು ಸರ್ಕಾರದ ನೆರವಿನ ಮೇಲೆ ಅವಲಂಬಿತರಾಗುವುದು ಹೆಚ್ಚಾಗಬಹುದು ಎಂದು ಬೆಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಮೂರನೇ ವರ್ಷದ ವಿದ್ಯಾರ್ಥಿ ಸೂರಜ್ ಗೌಡ ಹೇಳುತ್ತಾರೆ.

ಸಾಂದರ್ಭಿಕ ಚಿತ್ರ
ಕೇಂದ್ರ ಬಜೆಟ್ 2024: ದೇಶದಲ್ಲಿ 4 ಕೋಟಿ ಉದ್ಯೋಗ ಸೃಷ್ಟಿಸುವ ಬದಲು ಕಾರ್ಪೊರೇಟ್ ಜಗತ್ತಿಗೆ ಭೀತಿ ಹುಟ್ಟಿಸುತ್ತಿದೆಯೇ? ಅಂಕಣಕಾರರು ಏನಂತಾರೆ?

ಸ್ನಾತಕಪೂರ್ವ, ಸ್ನಾತಕೋತ್ತರ ಅಥವಾ ವೃತ್ತಿಪರ ಕೋರ್ಸ್‌ಗಳನ್ನು ಬಯಸುವ ವಿದ್ಯಾರ್ಥಿಗಳು ಸಾಲವನ್ನು ಪಡೆಯಬಹುದು. ಬೋಧನಾ ಶುಲ್ಕಗಳು, ವಸತಿ ಮತ್ತು ಇತರ ಶಿಕ್ಷಣ ಸಂಬಂಧಿತ ವೆಚ್ಚಗಳನ್ನು ಒಳಗೊಂಡಿರುತ್ತದೆ ಎಂದು ಹಣಕಾಸು ಸಚಿವಾಲಯ ಹೇಳುತ್ತದೆ. ಈ ವರ್ಷ ಸರ್ಕಾರವು ಶಿಕ್ಷಣ ಉದ್ಯೋಗ ಮತ್ತು ಕೌಶಲ್ಯಕ್ಕಾಗಿ 1.48 ಲಕ್ಷ ಕೋಟಿ ರೂಪಾಯಿ ಹೆಚ್ಚಿನ ಸ್ಕಾಲರ್‌ಶಿಪ್ ನೀಡುವ ಮತ್ತು ಶುಲ್ಕವನ್ನು ಕಡಿಮೆ ಮಾಡುವ ಬದಲು ಸರ್ಕಾರವು ವಿದ್ಯಾರ್ಥಿಗಳನ್ನು ಸಾಲದ ಸುಳಿಯಲ್ಲಿ ಸಿಲುಕಿಸುತ್ತಿದೆ ಎಂದು ಕೆಲವು ವಿದ್ಯಾರ್ಥಿ ಸಮುದಾಯಗಳು ಅಭಿಪ್ರಾಯಪಟ್ಟಿವೆ.

ನಗರದ ಕೆನಡಿಯನ್ ಇಂಟರ್‌ನ್ಯಾಶನಲ್ ಸ್ಕೂಲ್‌ನ ವ್ಯವಸ್ಥಾಪಕ ನಿರ್ದೇಶಕಿ ಶ್ವೇತಾ ಶಾಸ್ತ್ರಿ, ಹೆಚ್ಚಿನ ಅಂತಾರಾಷ್ಟ್ರೀಯ ವಿದ್ಯಾರ್ಥಿಗಳನ್ನು ಆಕರ್ಷಿಸಲು ಭಾರತವನ್ನು ಜಾಗತಿಕ ಶೈಕ್ಷಣಿಕ ಕೇಂದ್ರವಾಗಿ ಅಭಿವೃದ್ಧಿಪಡಿಸುವ ಗುರಿಯನ್ನು ಹೆಚ್ಚಿಸುವ ಅಗತ್ಯವಿದೆ. ಹೆಚ್ಚು ವಿದೇಶಿ ವಿದ್ಯಾರ್ಥಿಗಳನ್ನು ಆಕರ್ಷಿಸಲು ಶಿಕ್ಷಣ ವ್ಯವಸ್ಥೆಯನ್ನು ಮೇಲ್ದರ್ಜೆಗೇರಿಸುವ ಅವಶ್ಯಕತೆಯಿದೆ. ಡಿಜಿಟಲ್ ವಿಭಜನೆಯನ್ನು ನಿವಾರಿಸಲು ಮತ್ತು ಗುಣಮಟ್ಟದ ಶಿಕ್ಷಣವನ್ನು ನೀಡಲು ಸರ್ಕಾರ ಹೂಡಿಕೆ ಮಾಡುವುದನ್ನು ಮುಂದುವರಿಸಬೇಕು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com