ವಸತಿ ಯೋಜನೆ: ಫಲಾನುಭವಿಗಳಿಗೆ ತಲಾ 1 ಲಕ್ಷ ರೂ. ನೆರವು ನೀಡಲು ಸರ್ಕಾರ ಒಪ್ಪಿಗೆ!

ಬಿಜೆಪಿ ಶಾಸಕರ ಮನವಿ ಪುರಸ್ಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಫಲಾನುಭವಿಗಳ ವಂತಿಕೆಯ ಒಟ್ಟು ವೆಚ್ಚ ರೂ.121.53 ಕೋಟಿ ಬಿಡುಗಡೆ ಮಾಡಲು ಸಮ್ಮತಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದು ಲಕ್ಷ ಮನೆ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ಯೋಜನೆಯ ಫಲಾನುಭವಿಗಳಿಗೆ ಆರ್ಥಿಕ ಹೊರೆ ತಗ್ಗಿಸುವ ನಿಟ್ಟಿನಲ್ಲಿ ಸಿದ್ದರಾಮಯ್ಯ ಅವಪು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.

ವಿಧಾನಸೌಧದಲ್ಲಿ ಗುರುವಾರ ನಡೆದ ಸಭೆಯಲ್ಲಿ ಕಾಂಗ್ರೆಸ್‌, ಬಿಜೆಪಿ ಶಾಸಕರ ಮನವಿ ಪುರಸ್ಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಫಲಾನುಭವಿಗಳ ವಂತಿಕೆಯ ಒಟ್ಟು ವೆಚ್ಚ ರೂ.121.53 ಕೋಟಿ ಬಿಡುಗಡೆ ಮಾಡಲು ಸಮ್ಮತಿಸಿದ್ದಾರೆ ಎಂದು ವಸತಿ ಸಚಿವ ಜಮೀರ್‌ ಅಹಮದ್‌ ಖಾನ್‌ ಮಾಹಿತಿ ನೀಡಿದ್ದಾರೆ.

ಸಂಗ್ರಹ ಚಿತ್ರ
ಮುಡಾ ಹಗರಣ: ನನ್ನ ವರ್ಚಸ್ಸು ಹಾಳು ಮಾಡಲು ಪ್ರತಿಪಕ್ಷಗಳ ಯತ್ನ- ಸಿಎಂ ಸಿದ್ದರಾಮಯ್ಯ

ಈ ಯೋಜನೆಗೆ 2017ರಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ರೂ.6 ಲಕ್ಷ ನಿಗದಿ ಮಾಡಲಾಗಿತ್ತು. ಕೇಂದ್ರ ಸರ್ಕಾರ ರೂ.1.50 ಲಕ್ಷ, ರಾಜ್ಯ ಸರ್ಕಾರ ಸಾಮಾನ್ಯ ವರ್ಗಕ್ಕೆ ರೂ.1.20 ಲಕ್ಷ, ಪರಿಶಿಷ್ಟ ವರ್ಗಕ್ಕೆ ರೂ.2 ಲಕ್ಷ ನಿಗದಿ ಮಾಡಿತ್ತು.

ಬಿ.ಎಸ್‌. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದ ನಂತರ 10.60 ಲಕ್ಷಕ್ಕೆ ಹೆಚ್ಚಳ ಮಾಡಿದ್ದರು. ರೂ.60 ಸಾವಿರ ಜಿಎಸ್'ಟಿ ಸೇರಿ 11. 20 ಲಕ್ಷವಾಗಿತ್ತು. ಸಿದ್ದರಾಮಯ್ಯ ಅವರು ಈಗ ತೆಗೆದುಕೊಂಡ ತೀರ್ಮಾನದಿಂದ ಸಾಮಾನ್ಯ ವರ್ಗ ರೂ.7.50 ಲಕ್ಷ, ಪರಿಶಿಷ್ಟರು ರೂ.6.70 ಲಕ್ಷ ಕಟ್ಟಬೇಕಾಗುತ್ತದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com