ನಾಳೆಯಿಂದ ನೆರೆ ಪೀಡಿತ ಪ್ರದೇಶಗಳಿಗೆ ಬಿಜೆಪಿ ನಾಯಕರ ಪ್ರವಾಸ: 6 ತಂಡಗಳ ರಚನೆ

ವಿಪಕ್ಷ ನಾಯಕ ಆರ್ ಅಶೋಕ್, ಶಾಸಕರಾದ ಅರಗ ಜ್ಞಾನೇಂದ್ರ, ಡಾ. ಸಿ.ಎನ್. ಅಶ್ವತ್ಥ ನಾರಾಯಣ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಅರವಿಂದ ಬೆಲ್ಲದ್ ಹಾಗೂ ಬಿ.ಶ್ರೀರಾಮುಲು ನೇತೃತ್ವದಲ್ಲಿ ತಂಡ ರಚನೆ
ಆರ್. ಅಶೋಕ್ ಸಾಂದರ್ಭಿಕ ಚಿತ್ರ
ಆರ್. ಅಶೋಕ್ ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ರಾಜ್ಯದ ನೆರೆ ಪೀಡಿತ ಪ್ರದೇಶಗಳಿಗೆ ರಾಜ್ಯ ಬಿಜೆಪಿ ನಾಯಕರು ನಾಳೆಯಿಂದ ಭೇಟಿ ನೀಡುವ ಉದ್ದೇಶದಿಂದ ಆರು ತಂಡಗಳನ್ನು ರಚಿಸಲಾಗಿದೆ.

ವಿಪಕ್ಷ ನಾಯಕ ಆರ್ ಅಶೋಕ್, ಶಾಸಕರಾದ ಅರಗ ಜ್ಞಾನೇಂದ್ರ, ಡಾ. ಸಿ.ಎನ್. ಅಶ್ವತ್ಥ ನಾರಾಯಣ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಅರವಿಂದ ಬೆಲ್ಲದ್ ಹಾಗೂ ಬಿ.ಶ್ರೀರಾಮುಲು ಅವರ ನೇತೃತ್ವದಲ್ಲಿನ ತಂಡಗಳು ನೆರೆ ಪೀಡಿತ ಪ್ರದೇಶಗಳಲ್ಲಿ ಭೇಟಿ ನೀಡಿ, ಪರಿಶೀಲನೆ ನಡೆಸಲಿವೆ ಎಂದು ಪ್ರಕಟಣೆ ತಿಳಿಸಿದೆ.

ಆರ್. ಅಶೋಕ್ ಸಾಂದರ್ಭಿಕ ಚಿತ್ರ
ಅಥಣಿ: ಪ್ರವಾಹ ಪೀಡಿತ ಪ್ರದೇಶಗಳಿಗೆ ಶಾಸಕ ಸವದಿ ಭೇಟಿ, ಪರಿಶೀಲನೆ

ಆರ್.ಅಶೋಕ್ ನೇತೃತ್ವದ ತಂಡ ಮಂಗಳೂರು, ಬೆಳಗಾವಿ ಜಿಲ್ಲೆಗಳಲ್ಲಿ ಅರಗ ಜ್ಞಾನೇಂದ್ರ ನೇತೃತ್ವದ ತಂಡ ಶಿವಮೊಗ್ಗ ಜಿಲ್ಲೆಯಲ್ಲಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಅವರ ತಂಡ ಕೊಡಗು ಹಾಗೂ ಉಡುಪಿ ಜಿಲ್ಲೆಗಳಿಗೆ ಭೇಟಿ ನೀಡಲಿದ್ದು, ನೆರೆಯಿಂದಾಗಿರುವ ಹಾನಿ ಕುರಿತು ಪರಿಶೀಲನೆ ನಡೆಸಲಿದೆ.

ಛಲವಾದಿ ನಾರಾಯಣಸ್ವಾಮಿ ನೇತೃತ್ವದ ತಂಡ ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಅರವಿಂದ್ ಬೆಲ್ಲದ್ ನೇತೃತ್ವದ ತಂಡ ಬಾಗಲಕೋಟೆ, ವಿಜಯಪುರ ಹಾಗೂ ಬಿ.ಶ್ರೀರಾಮುಲು ಅವರ ತಂಡ ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com