ಕಾವೇರಿ ತೀರದಲ್ಲಿ ಅಸ್ಥಿ ವಿಸರ್ಜನೆಗೆ ಆಕ್ಷೇಪ: ರಾಜ್ಯ ಸರ್ಕಾರಕ್ಕೆ High Court ನೋಟಿಸ್‌

ಉತ್ತರಾಖಂಡ ಹೈಕೋರ್ಟ್‌ ಗಂಗಾ, ಯಮುನಾ ಮತ್ತು ಅವುಗಳ ಉಪನದಿಗಳನ್ನು ಜ್ಯುರಿಸ್ಟಿಕ್‌ ಪರ್ಸನ್‌ ಎಂದು ಘೋಷಿಸಿದ್ದು, ಅಂತೆಯೇ ಕಾವೇರಿಯನ್ನೂ ಜ್ಯುರಿಸ್ಟಿಕ್‌ ಪರ್ಸನ್‌ ಎಂದು ಪರಿಗಣಿಸಬೇಕು ಸಮಿತಿಯೊಂದನ್ನು ರಚಿಸಬೇಕು.
dumping of Ash on Cauvery banks
ಕಾವೇರಿ ನದಿಯಲ್ಲಿ ಅಸ್ಥಿ ವಿಸರ್ಜನೆ (ಸಂಗ್ರಹ ಚಿತ್ರ)
Updated on

ಬೆಂಗಳೂರು: ಕಾವೇರಿ ನದಿ ತೀರದಲ್ಲಿ ಅಸ್ಥಿ ವಿಸರ್ಜನೆ ಸೇರಿದಂತೆ ಮಾಲಿನ್ಯಕಾರಕ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೋಮವಾರ ನೋಟಿಸ್‌ ಜಾರಿ ಮಾಡಿದೆ.

ಬೆಂಗಳೂರಿನ ಕೆ ಜಿ ರಸ್ತೆಯ ಕುಶಾಲ್‌ ಕುಮಾರ್‌ ಕೌಶಿಕ್‌ ಸೇರಿದಂತೆ ಆರು ಮಂದಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್‌ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್‌ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

dumping of Ash on Cauvery banks
ಎರಡು ವರ್ಷಗಳ ನಂತರ ಕೆಆರ್​ಎಸ್ ಡ್ಯಾಮ್​ ಭರ್ತಿ; ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆ

ಅರ್ಜಿದಾರರ ಪರ ವಕೀಲರು “ಕಾವೇರಿ ನದಿ ತೀರದಲ್ಲಿ ಮಾಲಿನ್ಯ ಹೆಚ್ಚಳವಾಗಿದೆ. ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ವರದಿಯಲ್ಲಿ ಕಾವೇರಿ ನದಿ ತೀರದಲ್ಲಿ ಮಾಲಿನ್ಯ ಹೆಚ್ಚಾಗುವುದಕ್ಕೆ ಕಾರಣಗಳನ್ನು ಉಲ್ಲೇಖಿಸಲಾಗಿದೆ. ‌ಇದನ್ನು ಪರಿಗಣಿಸಿ ನದಿ ತೀರದಲ್ಲಿ ಅಸ್ಥಿ ವಿಸರ್ಜನೆಗೆ ಮಾರ್ಗಸೂಚಿ ರೂಪಿಸಬೇಕು. ಕಾವೇರಿ ನದಿಯನ್ನು ಜ್ಯುರಿಸ್ಟಿಕ್‌ ಪರ್ಸನ್‌ (ಕಾನೂನಾತ್ಮಕ ವ್ಯಕ್ತಿ - ವಾಸ್ತವ ವ್ಯಕ್ತಿಯಲ್ಲದ ಆದರೆ ಕಾನೂನಿನನ್ವಯ ಮಾನ್ಯ ಮಾಡಲಾದ ಸಂಘ ಸಂಸ್ಥೆಗಳು, ನಿಸರ್ಗದ ಭಾಗಗಳನ್ನು ವ್ಯಕ್ತಿಗಳ ರೀತಿಯಲ್ಲಿ ಕಾನೂನಾತ್ಮಕವಾಗಿ ಗ್ರಹಿಸುವಿಕೆ) ಎಂದು ಘೋಷಿಸಬೇಕು” ಎಂದು ಕೋರಿದರು.

ಅಂತೆಯೇ “ಈ ಹಿಂದೆ ಸಾಮಾನ್ಯವಾಗಿ ಎರಡು ಸ್ಥಳಗಳಲ್ಲಿ ಮಾತ್ರ ಅಸ್ಥಿ ವಿಸರ್ಜನೆ ನಡೆಯುತ್ತಿತ್ತು. ಈಗ ನದಿಯ ತೀರದ ಎಲ್ಲಾ ಕಡೆಗಳಲ್ಲೂ ಅಸ್ಥಿ ವಿಸರ್ಜನೆ ನಡೆಸಲಾಗುತ್ತಿದೆ. ಇದೇ ನೀರನ್ನು ಕುಡಿಯಲು ಬಳಕೆ ಮಾಡಲಾಗುತ್ತಿದೆ. ಕನಿಷ್ಠ ಪಕ್ಷ ಶ್ರೀರಂಗಪಟ್ಟದ ನಿಮಿಷಾಂಭ ದೇವಸ್ಥಾನದ ತೀರದಲ್ಲಿಯಾದರೂ ಅಸ್ಥಿ ವಿಸರ್ಜನೆ ಮಾಡದಂತೆ ಮಧ್ಯಂತರ ತಡೆ ವಿಧಿಸಬೇಕು. ಈಗ ಮುಂಗಾರು ವ್ಯಾಪಕವಾಗಿದ್ದು, ಅರೆಬೆಂದ ಮೂಳೆಗಳು ದೇವಸ್ಥಾನದ ಬಳಿ ಬಂದು ಬೀಳಬಹುದು” ಎಂದರು.

ಕೆಲ ಕಾಲ ವಾದ ಆಲಿಸಿದ ಪೀಠವು ಮಧ್ಯಂತರ ಆದೇಶ ಮಾಡಲು ನಿರಾಕರಿಸಿತು. ರಾಜ್ಯ ಸರ್ಕಾರ ಮತ್ತು ಇತರೆ ಪ್ರತಿವಾದಿಗಳಿಗೆ ನೋಟಿಸ್‌ ಜಾರಿ ಮಾಡಿ, ಆಕ್ಷೇಪಣೆ ಸಲ್ಲಿಸಲು ಸೂಚಿಸಿ ವಿಚಾರಣೆಯನ್ನು ಸೆಪ್ಟೆಂಬರ್‌ 11ಕ್ಕೆ ಮುಂದೂಡಿತು.

dumping of Ash on Cauvery banks
ವಾರಣಾಸಿಯ ಗಂಗಾ ಆರತಿಯಂತೆ, ಕಾವೇರಿ ಆರತಿ ಆಯೋಜನೆ; PPP ಮಾದರಿಯಲ್ಲಿ ಬೃಂದಾವನಕ್ಕೆ ಹೊಸ ರೂಪ: ಡಿ.ಕೆ ಶಿವಕುಮಾರ್

ಅರ್ಜಿದಾರರ ಮನವಿ ಏನು?

ಕಾವೇರಿ ನದಿ ತೀರದ ನಿರ್ದಿಷ್ಟ ಸ್ಥಳಗಳಲ್ಲಿ ಅಸ್ಥಿ ವಿಸರ್ಜನೆಗೆ ಅವಕಾಶ ಮಾಡಿ ಮಾರ್ಗಸೂಚಿ ರೂಪಿಸಬೇಕು. ಉತ್ತರಾಖಂಡ ಹೈಕೋರ್ಟ್‌ ಗಂಗಾ, ಯಮುನಾ ಮತ್ತು ಅವುಗಳ ಉಪನದಿಗಳನ್ನು ಜ್ಯುರಿಸ್ಟಿಕ್‌ ಪರ್ಸನ್‌ ಎಂದು ಘೋಷಿಸಿದ್ದು, ಅಂತೆಯೇ ಕಾವೇರಿಯನ್ನೂ ಜ್ಯುರಿಸ್ಟಿಕ್‌ ಪರ್ಸನ್‌ ಎಂದು ಪರಿಗಣಿಸಿ ಸಮಿತಿಯೊಂದನ್ನು ರಚಿಸಬೇಕು. ಇವರು ನದಿಗೆ ಹಾನಿ ಮಾಡಿದರವ ವಿರುದ್ಧ ದಾವೆ ಹೂಡಲು ಅವಕಾಶ ಕಲ್ಪಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com