ಭಾರೀ ಮಳೆಗೆ ಸಕಲೇಶಪುರದಲ್ಲಿ ಭೂಕುಸಿತ: ಕೊಚ್ಚಿ ಹೋದ ರಸ್ತೆ

ಭಾರೀ ಮಳೆಗೆ ರಸ್ತೆ ಕೊಚ್ಚಿಹೋಗಿ 80 ಅಡಿ ಆಳಕ್ಕೆ ಕುಸಿದಿದೆ. ಅಕ್ಕಪಕ್ಕದ ಐದು ಗ್ರಾಮಗಳು ಹೋಬಳಿ ಮತ್ತು ತಾಲೂಕು ಕೇಂದ್ರಗಳಿಗೆ ಸಂಪರ್ಕ ಕಳೆದುಕೊಂಡಿವೆ. ಮಲ್ಲೇಗದ್ದೆ, ಕಾಡುಮನೆ ಮತ್ತು ಹಾರ್ಲೆ ಜನರು ಭೂಕುಸಿತದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಸಕಲೇಶದಲ್ಲಿ ಕೊಚ್ಚಿ ಹೋದ ರಸ್ತೆ
ಸಕಲೇಶದಲ್ಲಿ ಕೊಚ್ಚಿ ಹೋದ ರಸ್ತೆ
Updated on

ಹಾಸನ: ಮಂಗಳವಾರ ಮುಂಜಾನೆ ಸುರಿದ ಮಳೆ ಮತ್ತು ಭೂಕುಸಿತದಿಂದ ಸಕಲೇಶಪುರ ತಾಲೂಕಿನ ಕುಂಬರಾಡಿ ಮತ್ತು ಹಾರ್ಲೆ ಎಸ್ಟೇಟ್ ನಡುವಿನ ರಸ್ತೆ ಕೊಚ್ಚಿ ಹೋಗಿದೆ.

ಅವೈಜ್ಞಾನಿಕವಾಗಿ ನಡೆಯುತ್ತಿರುವ ಎತ್ತಿನಹೊಳೆ ಯೋಜನೆಯಿಂದಾಗಿ ಸಕಲೇಶಪುರ ತಾಲೂಕಿನ ಕೆಲವೆಡೆ ಭೂಕುಸಿತ ಉಂಟಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಭಾರೀ ಮಳೆಗೆ ರಸ್ತೆ ಕೊಚ್ಚಿಹೋಗಿ 80 ಅಡಿ ಆಳಕ್ಕೆ ಕುಸಿದಿದೆ. ಅಕ್ಕಪಕ್ಕದ ಐದು ಗ್ರಾಮಗಳು ಹೋಬಳಿ ಮತ್ತು ತಾಲೂಕು ಕೇಂದ್ರಗಳಿಗೆ ಸಂಪರ್ಕ ಕಳೆದುಕೊಂಡಿವೆ. ಮಲ್ಲೇಗದ್ದೆ, ಕಾಡುಮನೆ ಮತ್ತು ಹಾರ್ಲೆ ಜನರು ಭೂಕುಸಿತದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಭೂಕುಸಿತಕ್ಕೆ ಹೆದರಿ ಕಾಫಿ ಎಸ್ಟೇಟ್‌ಗಳಿಗೆ ಭೇಟಿ ನೀಡುವುದನ್ನು ಗ್ರಾಮಸ್ಥರು ನಿಲ್ಲಿಸಿದ್ದಾರೆ. ಎತ್ತಿನಹೊಳೆ ಕಾಲುವೆ ಕಾಮಗಾರಿಯು ಭೂಕುಸಿತ ಸ್ಥಳದಿಂದ ಕೇವಲ 200 ಮೀಟರ್ ದೂರದಲ್ಲಿದೆ.

ಸಕಲೇಶದಲ್ಲಿ ಕೊಚ್ಚಿ ಹೋದ ರಸ್ತೆ
ಹಾಸನ: ಹೇಮಾವತಿ ಪ್ರವಾಹದಿಂದ ಸಕಲೇಶಪುರ ಮುಳುಗಡೆ; ಜನಜೀವನ, ಸಂಚಾರ ಅಸ್ತವ್ಯಸ್ತ

ಘಟನಾ ಸ್ಥಳಕ್ಕೆ ಕಂದಾಯ, ಪಿಡಬ್ಲ್ಯುಡಿ ಹಾಗೂ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಿದರು. ಕಳೆದ 24 ಗಂಟೆಗಳಿಂದ ಬೆಂಗಳೂರು ಮಂಗಳೂರು ಎನ್‌ಎಚ್ 75 ಮತ್ತು ಸಕಲೇಶಪುರ ತಾಲೂಕಿನ ವಿವಿಧ ಭಾಗಗಳಲ್ಲಿ ಭೂಕುಸಿತ ಮುಂದುವರಿದಿದೆ ಎಂದು ಇಲ್ಲಿಗೆ ತಲುಪಿದ ವರದಿಗಳು ತಿಳಿಸಿವೆ. ಹಾಸನ ಹಾಸನ ಜಿಲ್ಲೆಯ ಹಲವೆಡೆ ಸೋಮವಾರ ಸಂಜೆಯಿಂದಲೇ ಭಾರೀ‌ ಮಳೆಯಾಗುತ್ತಿದೆ. ಆದರೂ ಜಿಲ್ಲಾಡಳಿತ ಶಾಲೆಗಳಿಗೆ ರಜೆ ನೀಡಿಲ್ಲ. ಸಕಲೇಶಪುರ ತಾಲ್ಲೂಕಿನ ಹಲವು ಕಡೆ ಸಂಪರ್ಕ ಕಡಿತಗೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com