ಬೆಂಗಳೂರು: ಜೂನ್‌ 6 ಮತ್ತು 7ರಂದು ವಿವಿಧೆಡೆ ನೀರು ಪೂರೈಕೆಯಲ್ಲಿ ವ್ಯತ್ಯಯ: BWSSB

ಕಾವೇರಿ ನೀರು ಸರಬರಾಜು ಯೋಜನೆಯ 5ನೇ ಹಂತದ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಬಿಡಬ್ಲ್ಯುಎಸ್‌ಎಸ್‌ಬಿ ಹಲವು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಿರುವ ಹಿನ್ನೆಲೆಯಲ್ಲಿ ಜೂನ್ 6 ಮತ್ತು 7ರಂದು ನಗರದ ಹಲವೆಡೆ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಕಾವೇರಿ ನೀರು ಸರಬರಾಜು ಯೋಜನೆಯ 5ನೇ ಹಂತದ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಬಿಡಬ್ಲ್ಯುಎಸ್‌ಎಸ್‌ಬಿ ಹಲವು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಿರುವ ಹಿನ್ನೆಲೆಯಲ್ಲಿ ಜೂನ್ 6 ಮತ್ತು 7ರಂದು ನಗರದ ಹಲವೆಡೆ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಮೊದಲ ಹಂತದಲ್ಲಲಿ ಕಾವೇರಿ 1, 2 ಹಾಗೂ 3 ಹಂತಗಳ ನೀರು ಸರಬರಾಜು ಘಟಕದಲ್ಲಿ ಜೂನ್ 6 ರಂದು ಬೆಳಿಗ್ಗೆ 6 ರಿಂದ ಸಂಜೆ 6ರವರೆಗೆ ಕಾಮಗಾರಿ ನಡೆಸುವುದರಿಂದ 12 ಗಂಟೆ ನೀರು ಪೂರೈಕೆ ಇರುವುದಿಲ್ಲ.

ಸಂಗ್ರಹ ಚಿತ್ರ
ಅಂತರ್ಜಲ ಮಟ್ಟ ಹೆಚ್ಚಿಸಲು ಕ್ರಮ: 30 ದಿನಗಳಲ್ಲಿ 986 ಮಳೆನೀರು ಇಂಗುಗುಂಡಿ ನಿರ್ಮಿಸಿದ BWSSB!

ಎರಡನೇ ಹಂತದಲ್ಲಿ ಕಾವೇರಿ 4 ನೇ ಹಂತದ 1 ಮತ್ತು 2ನೇ ಫೇಸ್‌ನಲ್ಲಿ ಅದೇ ದಿನ ಬೆಳಗ್ಗೆ 10ರಿಂದ ಸಂಜೆ 4ರವರೆಗೆ ನೀರು ಪೂರೈಕೆ ಸಂಪೂರ್ಣವಾಗಿ ಸ್ಥಗಿತಗೊಳ್ಳಲಿದೆ. ಹೀಗಾಗಿ, ಸಾರ್ವಜನಿಕರು ಅಗತ್ಯ ಪ್ರಮಾಣದ ನೀರು ಸಂಗ್ರಹಿಸಿಟ್ಟುಕೊಳ್ಳುವ ಮೂಲಕ ಸಹಕರಿಸುವಂತೆ ಜನಮಂಡಳಿ ಮನವಿ ಮಾಡಿದೆ.

ಕಾವೇರಿ 5ನೇ ಹಂತದ ಕಾಮಗಾರಿ ಪೂರ್ಣಗೊಳ್ಳುವ ಅಂತಿಮ ಹಂತದಲ್ಲಿದ್ದು, ಜಲಮಂಡಳಿ ನೀರು ಸರಬರಾಜು ಮಾಡಲು ಸಿದ್ಧತೆ ನಡೆಸಿದೆ. 110 ಗ್ರಾಮಗಳಿಗೆ ಕಾವೇರಿ ಸಂಪರ್ಕ ನೀಡಲು ಜನರ ಮನೆಬಾಗಿಲಿಗೆ ಜಲಮಂಡಳಿ ತೆರಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com