Breaking News: ಇನ್ನು ಕೆಲವೇ ಗಂಟೆಗಳಲ್ಲಿ ಶಾಸಕ ಪ್ರದೀಪ್ ಈಶ್ವರ್ ರಾಜಿನಾಮೆ?: ಪ್ರತಾಪ್ ಸಿಂಹ ಟ್ವೀಟ್!

ಕರ್ನಾಟಕ ಲೋಕಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. 28 ಕ್ಷೇತ್ರಗಳ ಪೈಕಿ ಬಿಜೆಪಿ 17, ಕಾಂಗ್ರೆಸ್ 9 ಮತ್ತು ಜೆಡಿಎಸ್ 2 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಈ ಮಧ್ಯೆ ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ ಡಾ. ಕೆ ಸುಧಾಕರ್ ಗೆದ್ದರೆ ತಾವು ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುತ್ತೇನೆ.
ಶಾಸಕ ಪ್ರದೀಪ್ ಈಶ್ವರ್
ಶಾಸಕ ಪ್ರದೀಪ್ ಈಶ್ವರ್
Updated on

ಬೆಂಗಳೂರು: ಕರ್ನಾಟಕ ಲೋಕಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. 28 ಕ್ಷೇತ್ರಗಳ ಪೈಕಿ ಬಿಜೆಪಿ 17, ಕಾಂಗ್ರೆಸ್ 9 ಮತ್ತು ಜೆಡಿಎಸ್ 2 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಈ ಮಧ್ಯೆ ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ ಡಾ. ಕೆ ಸುಧಾಕರ್ ಗೆದ್ದರೆ ತಾವು ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುತ್ತೇನೆ ಎಂದು ಪ್ರದೀಪ್ ಈಶ್ವರ್ ಮಾಧ್ಯಮಗಳ ಮುಂದೆ ಮಾತನಾಡಿದ್ದರು.

ಈ ಹಿಂದೆ ಮಾಧ್ಯಮಗಳ ಮುಂದೆ ಮಾತನಾಡಿದ್ದ ಕಾಂಗ್ರೆಸ್ ಶಾಸಕ ಚಿಕ್ಕಬಳ್ಳಾಪುರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಖಚಿತವಾಗಿ ಗೆಲ್ಲುತ್ತಾರೆ. ನಮ್ಮ ಅಭ್ಯರ್ಥಿಗಿಂತ ಡಾ. ಸುಧಾಕರ್ 1 ಮತ ಹೆಚ್ಚಿಗೆ ಪಡೆದರೆ ನಾನು ನನ್ನ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುತ್ತೇನೆ ಎಂದು ಘಂಟಾ ಘೋಷವಾಗಿ ಹೇಳಿದ್ದರು.

ಇದೀಗ ಚಿಕ್ಕಬಳ್ಳಾಪುರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಕೆ ಸುಧಾಕರ್ ಅವರು 8,19,588 ಮತಗಳನ್ನು ಪಡೆದು 1,62,099 ಮತಗಳ ಅಂತರದಿಂದ ಬೃಹತ್ ಗೆಲುವು ಸಾಧಿಸಿದ್ದಾರೆ. ಇನ್ನು ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ 6,57,489 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ.

ಶಾಸಕ ಪ್ರದೀಪ್ ಈಶ್ವರ್
ಲೋಕಸಭೆ ಚುನಾವಣೆ: ರಾಜ್ಯದಲ್ಲಿ 17 ಸ್ಥಾನಗಳಲ್ಲಿ ಬಿಜೆಪಿ, ಎರಡರಲ್ಲಿ ಜೆಡಿಎಸ್; 9 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು

ಇದೀಗ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಪ್ರದೀಪ್ ಈಶ್ವರ್ ಮಾತನಾಡಿದ್ದ ವಿಡಿಯೋ ತುಣುಕನ್ನು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು ಇನ್ನು ಕೆಲವೇ ಗಂಟೆಗಳಲ್ಲಿ ಶಾಸಕ ಪ್ರದೀಪ್ ಈಶ್ವರ್ ರಾಜಿನಾಮೆ ನೀಡಲಿದ್ದಾರೆ ಎಂದು ಟ್ವೀಟ್ ಮಾಡಿ ಕಾಲೆಳೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com