ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ಎಸ್ಐಟಿಯಿಂದ ಸಹಕಾರಿ ಬ್ಯಾಂಕ್​ನಲ್ಲಿದ್ದ 45 ಕೋಟಿ ರೂ. ಜಪ್ತಿ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ತನಿಖೆಯನ್ನು ಚುರುಕುಗೊಳಿಸಿರುವ ಎಸ್​ಐಟಿ, ಫಸ್ಟ್ ಫೈನಾನ್ಸ್ ಸಹಕಾರಿ ಬ್ಯಾಂಕ್​ನಲ್ಲಿದ್ದ 45 ಕೋಟಿ ರೂ. ಜಪ್ತಿ ಮಾಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ತನಿಖೆಯನ್ನು ಚುರುಕುಗೊಳಿಸಿರುವ ಎಸ್​ಐಟಿ, ಹೈದರಾಬಾದ್​ನ ಫಸ್ಟ್ ಫೈನಾನ್ಸ್ ಸಹಕಾರಿ ಬ್ಯಾಂಕ್​ನಲ್ಲಿದ್ದ 45 ಕೋಟಿ ರೂ. ಜಪ್ತಿ ಮಾಡಿದೆ.

ಫಸ್ಟ್ ಫೈನಾನ್ಸ್ ಸಹಕಾರಿ ಬ್ಯಾಂಕ್ ಬಂಧಿತ ಆರೋಪಿ ಸತ್ಯನಾರಾಯಣ್‌ ಒಡೆತನದ ಸಹಕಾರಿ ಬ್ಯಾಂಕ್ ಆಗಿದ್ದು, ಇದೇ ಬ್ಯಾಂಕ್‌ ಖಾತೆಗೆ 94.73 ಕೋಟಿ ರೂ. ವರ್ಗಾವಣೆಯಾಗಿತ್ತು. ಬ್ಯಾಂಕ್​ನ 18 ನಕಲಿ ಖಾತೆಗಳಿಗೆ 94.73 ಕೋಟಿ ರೂ. ವರ್ಗಾವಣೆಯಾಗಿದೆ.

ವರ್ಗಾವಣೆಯಾಗಿದ್ದ 94.73 ಕೋಟಿ ರೂ. ಪೈಕಿ ಬಹುಪಾಲು ಹಣ ಡ್ರಾ ಆಗಿದ್ದು, ಇನ್ನುಳಿದ ಹಣ ಎಲ್ಲಿಗೆ ಹೋಗಿದೆ ಎಂಬುದರ ಕುರಿತು ಎಸ್​ಐಟಿ ತನಿಖೆ ನಡೆಸುತ್ತಿದೆ. ಪ್ರಕರಣ ಸಂಬಂಧ ಐವರನ್ನು ಎಸ್​ಐಟಿ ಬಂಧಿಸಿದೆ. ಪರಶುರಾಮ್, ನೆಕ್ಕುಂಟಿ ನಾಗರಾಜ್, ನಾಗೇಶ್ವರ ರಾವ್, ಪದ್ಮನಾಭ, ಸತ್ಯನಾರಾಯಣ ಅವರನ್ನು ಎಸ್ ಐಟಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.

ಸಾಂದರ್ಭಿಕ ಚಿತ್ರ
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದೆ: ಗೃಹ ಸಚಿವ ಪರಮೇಶ್ವರ

ಈ ಮಧ್ಯೆ ಪ್ರಕರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು ಬುಧವಾರ ತಿಳಿಸಿದ್ದಾರೆ.

ಮುಂಬೈನಲ್ಲಿರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಪ್ರಧಾನ ಕಛೇರಿ ಕಳೆದ ವಾರ ತನ್ನ ಎಂಜಿ ರೋಡ್ ಶಾಖೆಯನ್ನು ಒಳಗೊಂಡ ಸರ್ಕಾರಿ ಸ್ವಾಮ್ಯದ ವಾಲ್ಮೀಕಿ ಅಭಿವೃದ್ಧಿ ನಿಗಮದ ಸಾರ್ವಜನಿಕ ಹಣ ದುರುಪಯೋಗಪಡಿಸಿಕೊಂಡ ಪ್ರಕರಣದ ತನಿಖೆ ನಡೆಸುವಂತೆ ಸಿಬಿಐಗೆ ದೂರು ಸಲ್ಲಿಸಿತ್ತು. ಈ ದೂರಿನ ಆಧಾರದ ಮೇಲೆ ಸಿಬಿಐ ಪ್ರಕರಣದ ತನಿಖೆಗೆಯನ್ನು ಕೈಗೆತ್ತಿಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com