ಬೆಳಗಾವಿ ವಿಭಜಿಸಿ ಚಿಕ್ಕೋಡಿ, ಗೋಕಾಕ ಹೊಸ ಜಿಲ್ಲೆಗಳಾಗಿ ರೂಪಿಸಬೇಕು: ಸತೀಶ್ ಜಾರಕಿಹೊಳಿ

ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ಬಹುಕಾಲದಿಂದ ಬಾಕಿ ಉಳಿದಿದ್ದ ಬೆಳಗಾವಿ ಜಿಲ್ಲೆ ವಿಭಜನೆಯ ಸಮಸ್ಯೆ ಮತ್ತೆ ಸದ್ದು ಮಾಡುತ್ತಿದೆ.
ಸಚಿವ ಸತೀಶ್ ಜಾರಕಿಹೊಳಿ
ಸಚಿವ ಸತೀಶ್ ಜಾರಕಿಹೊಳಿ
Updated on

ಬೆಳಗಾವಿ: ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ಬಹುಕಾಲದಿಂದ ಬಾಕಿ ಉಳಿದಿದ್ದ ಬೆಳಗಾವಿ ಜಿಲ್ಲೆ ವಿಭಜನೆಯ ಸಮಸ್ಯೆ ಮತ್ತೆ ಸದ್ದು ಮಾಡುತ್ತಿದೆ.

ಬೆಳಗಾವಿಯಲ್ಲಿ ಮಾತನಾಡಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ , ಭೌಗೋಳಿಕವಾಗಿ ವಿಶಾಲವಾಗಿರುವ ಬೆಳಗಾವಿ ಜಿಲ್ಲೆಯನ್ನು ಮೂರು ಜಿಲ್ಲೆಗಳಾಗಿ ವಿಂಗಡಿಸಬೇಕು. ಆಡಳಿತದ ಅನುಕೂಲಕ್ಕಾಗಿ ಬೆಳಗಾವಿಯನ್ನು ವಿಭಜಿಸಿ ಮೂರು ಜಿಲ್ಲೆಗಳಾಗಿ ರಚನೆ ಮಾಡಬೇಕು ಎಂದು ಒಲವು ತೋರಿದ್ದಾರೆ.

ಆಡಳಿತ ದೃಷ್ಟಿಯಿಂದ ಬೆಳಗಾವಿಯನ್ನು ವಿಭಜಿಸಿ ಗೋಕಾಕ ಮತ್ತು ಚಿಕ್ಕೋಡಿಯನ್ನು ಹೊಸ ಜಿಲ್ಲೆಗಳನ್ನಾಗಿ ರಚಿಸುವುದು ಅತ್ಯಗತ್ಯ. ಬೆಳಗಾವಿಯಲ್ಲಿ ಮೂರು ಜಿಲ್ಲೆಗಳ ರಚನೆಗೆ ಹಲವು ದಿನಗಳಿಂದ ಬೇಡಿಕೆಗಳಿದ್ದು, ಸರಕಾರ ಪರಿಶೀಲಿಸಲಿದೆ ಎಂದು ಹೇಳಿದರು.

ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ ಕಾಂಗ್ರೆಸ್‌ನಲ್ಲಿ ಭಿನ್ನಮತ: ಅಥಣಿಯಲ್ಲಿ ಪಕ್ಷದ ಮುನ್ನಡೆಗೆ ಸವದಿ ಸಹಾಯ ಮಾಡಿಲ್ಲ- ಸತೀಶ್ ಜಾರಕಿಹೊಳಿ

ರಾಜ್ಯದ ಅತಿದೊಡ್ಡ ಜಿಲ್ಲೆಗಳಲ್ಲಿ ಒಂದಾದ ಬೆಳಗಾವಿಯು 18 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದ್ದು, ಹಲವು ತಾಲೂಕುಗಳಲ್ಲಿ ಹರಡಿರುವ ಬೃಹತ್ ಜನಸಂಖ್ಯೆಯನ್ನು ಹೊಂದಿದೆ. ಮುಂದಿನ ದಿನಗಳಲ್ಲಿ ಬೆಳಗಾವಿಯನ್ನು ವಿಭಜಿಸುವ ಕುರಿತು ಸರ್ಕಾರ ಗಮನ ಹರಿಸಲಿದೆ ಎಂದರು.

ತಮ್ಮ ಸರ್ಕಾರದ ಭರವಸೆಗಳ ಕುರಿತು ಪ್ರತಿಕ್ರಿಯಿಸಿದ ಜಾರಕಿಹೊಳಿ, ಹಿಂದಿನ ಚುನಾವಣೆಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿನ ಅಂತರವು ತೀವ್ರವಾಗಿ ಕುಸಿದಿರುವುದರಿಂದ ಸಂಸತ್ ಚುನಾವಣೆಯಲ್ಲಿ ಖಾತರಿ ಯೋಜನೆಗಳು ಭಾರಿ ಪರಿಣಾಮ ಬೀರಿವೆ ಎಂದು ಹೇಳಿದರು. ರಾಜ್ಯದಲ್ಲಿ ಖಾತರಿ ಯೋಜನೆಗಳನ್ನು ಮುಂದುವರಿಸುವ ಅಗತ್ಯವನ್ನು ಅವರು ಒತ್ತಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com