ಆಸ್ತಿ ವಿವಾದ?: ಮೈಸೂರಿನ ಅನ್ನದಾನೇಶ್ವರ ಮಠದ ಹಿರಿಯ ಸ್ವಾಮೀಜಿ ಬರ್ಬರ ಕೊಲೆ

ಮೈಸೂರಿನಲ್ಲಿ ಅನ್ನದಾನೇಶ್ವರ ಮಠದ ಹಿರಿಯ ಸ್ವಾಮೀಜಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ.
ಶಿವಾನಂದ ಸ್ವಾಮೀಜಿ ಹತ್ಯೆ
ಶಿವಾನಂದ ಸ್ವಾಮೀಜಿ ಹತ್ಯೆ
Updated on

ಮೈಸೂರು: ಮೈಸೂರಿನಲ್ಲಿ ಅನ್ನದಾನೇಶ್ವರ ಮಠದ ಹಿರಿಯ ಸ್ವಾಮೀಜಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ.

ಮೈಸೂರಿನ ಸಿದ್ದಾರ್ಥನಗರದಲ್ಲಿ 90 ವರ್ಷದ ಶಿವಾನಂದ ಸ್ವಾಮೀಜಿಯನ್ನು ಸ್ವಾಮೀಜಿ ಆಪ್ತ ಸಹಾಯಕ 60 ವರ್ಷದ ರವಿ ಎಂಬಾತನೇ ಹತ್ಯೆ ಮಾಡಿದ್ದು ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಘಟನಾ ಸ್ಥಳಕ್ಕೆ ನಜರ್‌ಬಾದ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅನ್ನದಾನೇಶ್ವರ ಮಠವು ಸುಮಾರು 9 ಎಕರೆ ವಿಸ್ತೀರ್ಣದಲ್ಲಿದೆ. ಮೈಸೂರು ರಾಜರು ದಾನವಾಗಿ ನೀಡಿದ್ದ ಈ ಮಠದ ಜಾಗದ ವಿಚಾರವಾಗಿ ಹಲವು ವಿವಾದಗಳು ಇವೆ.

ಶಿವಾನಂದ ಸ್ವಾಮೀಜಿ ಹತ್ಯೆ
ಹಣ ಪಡೆದು ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರಕ್ಕೆ ಅವಕಾಶ: ಮಲತಂದೆ ಸೇರಿ ಮೂವರ ಬಂಧನ

ಕುಡಿದ ಮತ್ತಿನಲ್ಲಿ ಶಿವಾನಂದ ಸ್ವಾಮೀಜಿ ಅವರನ್ನು ರವಿ ಕೊಲೆ ಮಾಡಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಹುಲ್ಲು ಕತ್ತರಿಸುವ ಆಯುಧದಲ್ಲಿ ಸ್ವಾಮೀಜಿ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಡಿಸಿಪಿ ಮುತ್ತುರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com