ಚಿತ್ರದುರ್ಗ: ರೇಣುಕಾಸ್ವಾಮಿ ಕೊಲೆ ಪ್ರಕರಣ, ನಟ ದರ್ಶನ್ ವಿರುದ್ಧ ಪ್ರತಿಭಟನೆ

33 ವರ್ಷದ ರೇಣುಕಾಸ್ವಾಮಿ ಅವರ ಬರ್ಬರ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳು ಬುಧವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿದವು.
ಪ್ರತಿಭಟನೆ ಚಿತ್ರ
ಪ್ರತಿಭಟನೆ ಚಿತ್ರ
Updated on

ಬೆಂಗಳೂರು: 33 ವರ್ಷದ ರೇಣುಕಾಸ್ವಾಮಿ ಅವರ ಬರ್ಬರ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳು ಬುಧವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿದವು.

ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ನೀಲಕಂಠೇಶ್ವರ ದೇವಸ್ಥಾನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿವರೆಗೆ ಸಾಗಿತು.

ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಮಾಜಿ ಶಾಸಕ ಜಿ. ಹೆಚ್.ತಿಪ್ಪಾರೆಡ್ಡಿ, ದರ್ಶನ್ ತೆರೆಮೇಲೆ ಹೀರೋ ಆದರೆ ನಿಜ ಜೀವನದಲ್ಲಿ ಹೀರೋ ಅಲ್ಲ, ರೇಣುಕಾಸ್ವಾಮಿ ಅವರ ಪೋಷಕರ ನೋವನ್ನು ನಾವು ಕಡೆಗಣಿಸುವಂತಿಲ್ಲ.ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಇಂತಹ ಘಟನೆಗಳು ನಡೆಯುತ್ತಿವೆ ಎಂದು ಆರೋಪಿಸಿದರು.

ಪ್ರತಿಭಟನೆ ಚಿತ್ರ
ರೇಣುಕಾಸ್ವಾಮಿ ಕೊಲೆ: ನಟ ದರ್ಶನ್ ಸೇರಿ ಎಲ್ಲಾ ಆರೋಪಿಗಳನ್ನು ಕರೆದೊಯ್ದು ಪಟ್ಟಣಗೆರೆ ಶೆಡ್ ನಲ್ಲಿ ಸ್ಥಳ ಮಹಜರು

"ಆರೋಪಿ ನಂಬರ್ 1 ಆಗಬೇಕಾದ ದರ್ಶನ್ ಅವರನ್ನು ಆರೋಪಿ ನಂಬರ್ 2 ಆರೋಪಿ ಮಾಡಲಾಗಿದೆ. ಇದು ಅವರನ್ನು ರಕ್ಷಿಸುವ ಪ್ರಯತ್ನವಾಗಿದೆ. ಗೃಹ ಸಚಿವ ಡಾ. ಜಿ. ಪರಮೇಶ್ವರ ಏನೂ ಆಗಿಲ್ಲ ಎಂಬಂತೆ ಮಾತನಾಡುತ್ತಾರೆ. ಸರ್ಕಾರ ಇಂತಹ ಘಟನೆಗಳನ್ನು ದುರ್ಬಲಗೊಳಿಸಬಹುದು. ದರ್ಶನ್ ಮತ್ತು ಪ್ರಕರಣದ ಇತರ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕು, ಅವರನ್ನು ಜೈಲಿನಿಂದ ಬಿಡುಗಡೆ ಮಾಡಬಾರದು. ದರ್ಶನ್ ಹಾಗೂ ಇತರ ಆರೋಪಿಗಳನ್ನು ಬಿಡುಗಡೆ ಮಾಡಿದರೆ ದೊಡ್ಡ ಮಟ್ಟದ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆನೀಡಿದರು.

ತನಿಖೆಯ ಮೇಲೆ ರಾಜಕಾರಣಿಗಳು ಪ್ರಭಾವ ಬೀರುವ ಸಾಧ್ಯತೆ ಇದೆ ಎಂದು ಮಾಜಿ ಶಾಸಕ ಬಸವರಾಜನ್ ಹೇಳಿದ್ದಾರೆ. ''ಸರ್ಕಾರ ಅವರ ಪರ ಇದೆಯಂತೆ. ದರ್ಶನ್ ಅವರು ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸರಕಾರ ಹಾಗೂ ರಾಜಕಾರಣಿಗಳು ಅವರ ಪರ ಒಲವು ತೋರುವ ಸಾಧ್ಯತೆಗಳಿದ್ದು, ಪ್ರಕರಣವನ್ನು ಕೇಂದ್ರ ತನಿಖಾ ದಳ ಸಿಬಿಐಗೆ ವಹಿಸುವುದು ಸೂಕ್ತ ಎಂದು ಒತ್ತಾಯಿಸಿದರು.

ಪ್ರತಿಭಟನೆ ಚಿತ್ರ
ಕಾನೂನು ಎಲ್ಲರಿಗೂ ಒಂದೇ, ನಟ ದರ್ಶನ್ ತಪ್ಪು ಮಾಡಿದ್ದರೆ ಶಿಕ್ಷೆಯಾಗುತ್ತದೆ: ಡಾ ಪರಮೇಶ್ವರ್

“ದರ್ಶನ್‌ಗೆ ಕುರುಡು ಅಭಿಮಾನಿಗಳ ಪಡೆ ಇದೆ. ಈ ಘೋರ ಹತ್ಯೆಯ ನಂತರವೂ ಅವರ ಅಭಿಮಾನಿಗಳು ಬೆಂಬಲಿಸುತ್ತಿದ್ದಾರೆ. ಇದರಿಂದ ನಾವು ಏನು ಅರ್ಥಮಾಡಿಕೊಳ್ಳಬೇಕು? ಅಭಿಮಾನಿಗಳು ನಟನನ್ನು ಸರಿಪಡಿಸಬೇಕು, ಅವರ ಪ್ರತಿ ಕೃತ್ಯವನ್ನು ಬೆಂಬಲಿಸಬಾರದು. ಇಂತಹ ಕುರುಡು ಫಾಲೋಯಿಂಗ್ ಕೊಲೆಗೆ ಕಾರಣವಾಗಿದೆ. ಅವರನ್ನು ಬಂಧಿಸಿದ ಪೊಲೀಸರು ಕೆಲಸವನ್ನು ಶ್ಲಾಘಿಸಿದರು. ಪ್ರತಿಭಟನೆಯಲ್ಲಿ ಬಜರಂಗದಳ, ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಹಾಗೂ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com