ರೇಣುಕಾಸ್ವಾಮಿ ಕೊಲೆ ಕೇಸ್; ಆರೋಪಿಗಳಿಗೆ ನೀಡಲು ರೆಸ್ಟೋರೆಂಟ್‌ನಲ್ಲಿ ಇಟ್ಟಿದ್ದ 30 ಲಕ್ಷ ರೂ. ಹಣ ವಶಕ್ಕೆ!

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಹೆಸರು ಹೇಳದಿರಲು ಹಂತಕರಿಗೆ ನೀಡಲು ರೆಸ್ಟೋರೆಂಟ್ ವೊಂದರಲ್ಲಿ ಇರಿಸಿದ್ದ ರೂ.30 ಲಕ್ಷ ರೂ.ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ.
ರೇಣುಕಾಸ್ವಾಮಿ-ದರ್ಶನ್
ರೇಣುಕಾಸ್ವಾಮಿ-ದರ್ಶನ್
Updated on

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಹೆಸರು ಹೇಳದಿರಲು ಹಂತಕರಿಗೆ ನೀಡಲು ರೆಸ್ಟೋರೆಂಟ್ ವೊಂದರಲ್ಲಿ ಇರಿಸಿದ್ದ ರೂ.30 ಲಕ್ಷ ರೂ.ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ.

ಆರ್‌.ಆರ್‌.ನಗರದ ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ನಲ್ಲಿ ಈ ಹಣವನ್ನು ವಶಕ್ಕೆ ಪಡೆಯಲಾಗಿದೆ ಎಂದು ವರದಿಗಳು ತಿಳಿಸಿವೆ.

ಪ್ರಕರಣದಲ್ಲಿ ಬಂಧಿತನಾಗಿರುವ ವಿನಯ್ ಮಾಲೀಕತ್ವದ ರೆಸ್ಟೋರೆಂಟ್‌ನಲ್ಲಿ ಪೊಲೀಸರು ಶೋಧ ನಡೆಸಿದ್ದು, ಈ ವೇಳೆ 30 ಲಕ್ಷ ಹಣ ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ.

ಈ ಹಣ ಕೊಲೆ ಆರೋಪ ಹೊರುವ ಯುವಕರಿಗೆ ನೀಡಲು ಇಟ್ಟಿದ್ದ ಹಣ ಎನ್ನಲಾಗಿದೆ. ಕೊಲೆ ನಾವೇ ಮಾಡಿದ್ದು ಎಂದು ಒಪ್ಪಿಕೊಂಡು ಬಂದಿದ್ದ ರಾಘವೇಂದ್ರ, ಕಾರ್ತಿಕ್, ನಿಖಿಲ್ ನಾಯಕ್, ಕೇಶವಮೂರ್ತಿಗೆ ತಲಾ 5 ಲಕ್ಷ ನೀಡಲು ಹಣ ಇಡಲಾಗಿತ್ತು.

ರೇಣುಕಾಸ್ವಾಮಿ-ದರ್ಶನ್
ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಆಪ್ತ ನಾಗರಾಜ್ ಸೇರಿದಂತೆ ಇನ್ನೂ ಮೂವರ ಬಂಧನ

ಹಲ್ಲೆ ಸಮಯದಲ್ಲಿ ಪವಿತ್ರಾ ಗೌಡ ಕಾಲಿಗೆ ರೇಣುಕಾಸ್ವಾಮಿಯನ್ನು ಬೀಳಿಸಿದ್ದ, ಡಿ ಗ್ಯಾಂಗ್ ಕ್ಷಮಾಪಣೆ ಕೇಳಿಸಿತ್ತು ಎನ್ನಲಾಗಿದೆ.

ಅಕ್ಕನ ಕಾಲಿಗೆ ಬೀಳೋ ಎಂದು ಹಿಂಸೆ ನೀಡಲಾಗಿದೆ. ದರ್ಶನ್ ಹೊಡೆತಕ್ಕೆ ನೋವು ತಾಳಲಾರದೆ ಪವಿತ್ರಾ ಗೌಡ ಕಾಲಿಗೆ ಬಿದ್ದು ರೇಣುಕಾಸ್ವಾಮಿ ಅಂಗಲಾಚಿಕೊಂಡಿದ್ದ. ಮೇಡಂ ತಪ್ಪಾಯಿತು, ಕ್ಷಮಿಸಿ ಬಿಡಿ, ನಿಮ್ಮ ಕಾಲು ಹಿಡಿದುಕೊಳ್ಳುತ್ತೇನೆಂದು ಎಂದು ಗೋಗರೆದಿದ್ದ. ಆಗ ತಪ್ಪಾಯಿತು ಸಾರ್ ಎಂದು ಕಾಲಿಗೆ ಬಿದ್ದಾಗ, ದರ್ಶನ್ ಎಗ್ಗರರಿ ಒದ್ದಿದ್ದರು ಎಂದು ಸ್ಥಳ ಮಹಜರು ಮಾಡುವಾಗ ಈ ಬಗ್ಗೆ ಪೊಲೀಸರಿಗೆ ಆರೋಪಿಗಳು ಬಾಯ್ಬಿಟ್ಟಿದ್ದಾರೆಂದು ಮೂಲಗಳು ತಿಳಿಸಿವೆ.

ಜೂ.9 ರಂದು ಸುಮನಹಳ್ಳಿ ಸತ್ವ ಅನುಗ್ರಹ ಅಪಾರ್ಟ್‌ಮೆಂಟ್‌ ಸಮೀಪದ ಮೋರಿ ಬಳಿ ಸಿಕ್ಕಿದ ರೇಣುಕಾಸ್ವಾಮಿ ಮೃತದೇಹ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಹಲವು ಮಹತ್ವದ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com