ಜಲವಿವಾದ; ಯಾವುದೇ ರಾಜ್ಯಕ್ಕೆ ಅನ್ಯಾಯವಾಗಲು ಪ್ರಧಾನಿ- ನಾನು ಅವಕಾಶ ನೀಡಲ್ಲ: ಕೇಂದ್ರ ಸಚಿವ ಸೋಮಣ್ಣ

ಅಂತಾರಾಜ್ಯ ನದಿ ವಿವಾದ ಮತ್ತು ಮತ್ತಿತರ ವಿಚಾರಗಳಲ್ಲಿ ನಾನು ಮತ್ತು ಪ್ರಧಾನಿ ನರೇಂದ್ರ ಮೋದಿ ಯಾವುದೇ ರಾಜ್ಯವನ್ನು ಎಂದಿಗೂ ನಿರಾಸೆಗೊಳಿಸುವುದಿಲ್ಲ ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ ಸೋಮಣ್ಣ ಹೇಳಿದ್ದಾರೆ.
ಶುಕ್ರವಾರ ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಕೇಂದ್ರ ಸಚಿವ ವಿ ಸೋಮಣ್ಣ.
ಶುಕ್ರವಾರ ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಕೇಂದ್ರ ಸಚಿವ ವಿ ಸೋಮಣ್ಣ.
Updated on

ತುಮಕೂರು: ಅಂತಾರಾಜ್ಯ ನದಿ ವಿವಾದ ಮತ್ತು ಮತ್ತಿತರ ವಿಚಾರಗಳಲ್ಲಿ ನಾನು ಮತ್ತು ಪ್ರಧಾನಿ ನರೇಂದ್ರ ಮೋದಿ ಯಾವುದೇ ರಾಜ್ಯವನ್ನು ಎಂದಿಗೂ ನಿರಾಸೆಗೊಳಿಸುವುದಿಲ್ಲ ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ ಸೋಮಣ್ಣ ಶುಕ್ರವಾರ ಹೇಳಿದ್ದಾರೆ.

ದಕ್ಷಿಣದ ಎರಡು ರಾಜ್ಯಗಳ ನಡುವೆ ಅಂತರರಾಜ್ಯ ಜಲ ವಿವಾದ ಹಾಗೆ ಉಳಿದಿರುವುದರಿಂದ ಸೋಮಣ್ಣ ಅವರ ನೇಮಕವು ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ತಮಿಳುನಾಡಿನಲ್ಲಿ ಕೆಲವರು ಎತ್ತಿದ ವಿರೋಧಕ್ಕೆ ಸೋಮಣ್ಣ ಪ್ರತಿಕ್ರಿಯಿಸಿದರು.

ಕರ್ನಾಟಕದ ಸೋಮಣ್ಣ ಅವರು ತುಮಕೂರು ಲೋಕಸಭೆ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.

ಸೋಮಣ್ಣ ಅವರನ್ನು ಜಲಶಕ್ತಿ ಸಚಿವರನ್ನಾಗಿ ಮಾಡಿರುವುದರ ವಿರುದ್ಧ ತಮಿಳುನಾಡು ಕಾಂಗ್ರೆಸ್ ಸಮಿತಿ ನಿರ್ಣಯವನ್ನು ಅಂಗೀಕರಿಸಿದೆ. ಕರ್ನಾಟಕ ಮತ್ತು ತಮಿಳುನಾಡು ನಡುವೆ ಹಲವಾರು ಜಲ ವಿವಾದಗಳಿರುವುದರಿಂದ ಅಲ್ಲಿನ ರೈತ ಸಂಘಗಳು ಅವರ ನೇಮಕವನ್ನು ವಿರೋಧಿಸಿದ್ದವು.

'ಒಕ್ಕೂಟ ವ್ಯವಸ್ಥೆಯಲ್ಲಿ ನಾವೆಲ್ಲರೂ ಒಂದೇ ಕುಟುಂಬ, ಅದು ತಮಿಳುನಾಡು, ಕರ್ನಾಟಕ, ಪುದುಚೇರಿ ಅಥವಾ ಕೇರಳ ಆಗಿರಲಿ... ತಮಿಳುನಾಡು ಹಕ್ಕುಗಳಿಗಾಗಿ ಪ್ರತಿಪಾದಿಸುವುದರಲ್ಲಿ ಯಾವುದೇ ತಪ್ಪಿಲ್ಲ. ಆದರೆ, ನಾವೆಲ್ಲರೂ ಸಮಾನವಾಗಿ ಬದುಕಬೇಕು. ದೇಶದ ಜನಸಂಖ್ಯೆ ಹೆಚ್ಚಿದೆ ಮತ್ತು ಪ್ರಧಾನಿ ಮೋದಿ ದೇಶದ ಬಗ್ಗೆ ದೂರದೃಷ್ಟಿ ಹೊಂದಿದ್ದಾರೆ. ಜಲ ವಿವಾದಕ್ಕೆ ಸಂಬಂಧಿಸಿದಂತೆ ಯಾವುದೇ ರಾಜ್ಯಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ' ಎಂದು ಸೋಮಣ್ಣ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದರು.

ಶುಕ್ರವಾರ ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಕೇಂದ್ರ ಸಚಿವ ವಿ ಸೋಮಣ್ಣ.
ಕೇಂದ್ರ ಜಲಶಕ್ತಿ ಖಾತೆ ರಾಜ್ಯ ಸಚಿವರಾಗಿ ವಿ. ಸೋಮಣ್ಣ ಅಧಿಕಾರ ಸ್ವೀಕಾರ

'ನಾನು ಒಬ್ಬನೇ... ಮಹಾನ್ ವ್ಯಕ್ತಿ ಅಲ್ಲ (ಏಕಪಕ್ಷೀಯ ನಿರ್ಧಾರಗಳನ್ನು ತೆಗೆದುಕೊಳ್ಳಲು). ಎಲ್ಲ ಪಕ್ಷಗಳು ಒಟ್ಟಾಗಿ ಕುಳಿತು ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುತ್ತೇವೆ. ವಿವಾದಗಳನ್ನು ಎದುರಿಸಲು ಕಾನೂನುಗಳಿವೆ' ಎಂದು ಅವರು ಹೇಳಿದರು.

1994 ಮತ್ತು 1999ರ ನಡುವೆ ಕರ್ನಾಟಕದಲ್ಲಿ ಜನತಾದಳ ಸರ್ಕಾರದಲ್ಲಿ ಸಚಿವರಾಗಿ ಕೆಲಸ ಮಾಡಿದ್ದ ಸೋಮಣ್ಣ, ಜೆ ಜಯಲಲಿತಾ ತಮಿಳುನಾಡು ಸಿಎಂ ಆಗಿದ್ದಾಗ ಅಂದಿನ ಕರ್ನಾಟಕದ ಸಿಎಂ ಜೆಎಚ್ ಪಟೇಲ್ ಮತ್ತು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರೊಂದಿಗೆ ರಾಜ್ಯ ವಿವಾದಗಳ ಬಗ್ಗೆ ಮಧ್ಯಂತರ ಮಾತುಕತೆ ನಡೆಸಿದ್ದನ್ನು ನೆನಪಿಸಿಕೊಂಡರು.

ಕೇಂದ್ರ ಸಚಿವರಾದ ನಂತರ ರಾಜ್ಯಕ್ಕೆ ತಮ್ಮ ಚೊಚ್ಚಲ ಭೇಟಿಯ ವೇಳೆ ಸೋಮಣ್ಣ ಅವರು ತುಮಕೂರಿನ ಸಿದ್ದಗಂಗಾ ಮಠ ಸೇರಿದಂತೆ 10ಕ್ಕೂ ಹೆಚ್ಚು ಧಾರ್ಮಿಕ ಸಂಸ್ಥೆಗಳಿಗೆ ಭೇಟಿ ನೀಡಿದರು.

ಶುಕ್ರವಾರ ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಕೇಂದ್ರ ಸಚಿವ ವಿ ಸೋಮಣ್ಣ.
ನಿಷ್ಠರನ್ನು ಪಕ್ಷ ನಿರಾಸೆಗೊಳಿಸುವುದಿಲ್ಲ ಎಂಬ ಸಂದೇಶ ಇದು: ಮೋದಿ ಸಂಪುಟದ ಏಕೈಕ ಲಿಂಗಾಯತ ಸಚಿವ ವಿ ಸೋಮಣ್ಣ (ಸಂದರ್ಶನ)

‘ಶಿಷ್ಟಾಚಾರ ಉಲ್ಲಂಘನೆ’: ಡಿಸಿ, ಜಿಲ್ಲಾ ಪಂಚಾಯಿತಿ ಸಿಇಒಗೆ ಸೋಮಣ್ಣ ತರಾಟೆ

ಸೋಮಣ್ಣ ಅವರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ತಮ್ಮೊಂದಿಗೆ ಇಲ್ಲದ ಕಾರಣ ತುಮಕೂರು ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಪ್ರಭು ಜಿ ಅವರನ್ನು ತರಾಟೆಗೆ ತೆಗೆದುಕೊಂಡರು. ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡ ಘಟನೆಯಲ್ಲಿ ಚಿನ್ನೇನಹಳ್ಳಿ ಸಂತ್ರಸ್ತರನ್ನು ಭೇಟಿ ಮಾಡಲು ಸಚಿವರು ಆಸ್ಪತ್ರೆಗೆ ಬಂದಿದ್ದರು. ಡಿಎಚ್‌ಒ ಡಾ. ಮಂಜುನಾಥ್‌ ಸೇರಿದಂತೆ ಯಾವುದೇ ಜಿಲ್ಲೆಯ ಅಧಿಕಾರಿಗಳು ಹಾಜರಾಗದ ಕಾರಣ ಆಕ್ರೋಶವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ಮತ್ತು ಸಿಇಒಗೆ ದೂರವಾಣಿ ಕರೆ ಮಾಡಿ ಶಿಷ್ಟಾಚಾರ ಉಲ್ಲಂಘಿಸಿದ್ದಕ್ಕಾಗಿ ತರಾಟೆಗೆ ತೆಗೆದುಕೊಂಡರು.

ಅಧಿಕಾರಿಗಳು ಕೊರಟಗೆರೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ ಪರಮೇಶ್ವರ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿದ್ದಾಗಿ ಸಮರ್ಥಿಸಿಕೊಂಡರು. ಈಗಾಗಲೇ ಚಿನ್ನೇನಹಳ್ಳಿಗೆ ಭೇಟಿ ನೀಡಿರುವುದಾಗಿ ತಿಳಿಸಿದರು.

ನಿಮ್ಮ ಕ್ಷಮೆಯನ್ನು ಒಪ್ಪಿಕೊಳ್ಳಲು ಸಿದ್ಧರಿಲ್ಲ, ತಾವೂ ಸಚಿವರಾಗಿದ್ದು, ಶಿಷ್ಟಾಚಾರ ಪಾಲಿಸಬೇಕಿತ್ತು ಎಂದು ಸೋಮಣ್ಣ ಪ್ರತಿಪಾದಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com