ರೇಣುಕಾಸ್ವಾಮಿ ಕೊಲೆ ಪ್ರಕರಣ: ಅಪಹರಣಕ್ಕೆ ದರ್ಶನ್ ಗ್ಯಾಂಗ್ ಬಳಸಿದ್ದ ಕಾರನ್ನು ವಶಪಡಿಸಿಕೊಂಡ ಪೊಲೀಸರು

ನಟ ದರ್ಶನ್ ತೂಗುದೀಪ ಮತ್ತು ಅವರ ಆಪ್ತೆ ಪವಿತ್ರಾ ಗೌಡ ಪ್ರಮುಖ ಆರೋಪಿಗಳಾಗಿರುವ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರ ತಂಡವು ಭಾನುವಾರ ಸಂತ್ರಸ್ತನ ಅಪಹರಣಕ್ಕೆ ಬಳಸಲಾಗಿದ್ದ ಕಾರನ್ನು ವಶಪಡಿಸಿಕೊಂಡಿದೆ.
ರೇಣುಕಾಸ್ವಾಮಿ- ದರ್ಶನ್
ರೇಣುಕಾಸ್ವಾಮಿ- ದರ್ಶನ್
Updated on

ಚಿತ್ರದುರ್ಗ: ನಟ ದರ್ಶನ್ ತೂಗುದೀಪ ಮತ್ತು ಅವರ ಆಪ್ತೆ ಪವಿತ್ರಾ ಗೌಡ ಪ್ರಮುಖ ಆರೋಪಿಗಳಾಗಿರುವ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರ ತಂಡವು ಭಾನುವಾರ ಸಂತ್ರಸ್ತನ ಅಪಹರಣಕ್ಕೆ ಬಳಸಲಾಗಿದ್ದ ಕಾರನ್ನು ವಶಪಡಿಸಿಕೊಂಡಿದೆ.

ಆರೋಪಿಗಳಲ್ಲಿ ಒಬ್ಬನಾದ ರವಿ ಎಂಬಾತ ಚಿತ್ರದುರ್ಗ ಜಿಲ್ಲೆಯ ಅಯ್ಯನಹಳ್ಳಿ ಗ್ರಾಮದ ಮನೆಯೊಂದರಲ್ಲಿ ಕಾರನ್ನು ನಿಲ್ಲಿಸಿದ್ದ. ವಾಹನವನ್ನು ವಶಪಡಿಸಿಕೊಳ್ಳುವಾಗ ವಿಧಿವಿಜ್ಞಾನ ತಜ್ಞರು ಹಾಜರಿದ್ದರು.

ಪೊಲೀಸರು ರವಿ ಕುಟುಂಬದವರನ್ನು ವಿಚಾರಣೆಗೊಳಪಡಿಸಿ ಕಾರಿನಲ್ಲಿದ್ದ ಹಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ರೇಣುಕಾಸ್ವಾಮಿ- ದರ್ಶನ್
ರೇಣುಕಾಸ್ವಾಮಿ ಕೊಲೆ ಪ್ರಕರಣ; ದರ್ಶನ್ ಮತ್ತು ಗ್ಯಾಂಗ್ ಮತ್ತೆ ಐದು ದಿನ ಪೊಲೀಸ್ ವಶಕ್ಕೆ

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಮತ್ತು ಪವಿತ್ರಾ ಸೇರಿ 16ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com