ರೇಣುಕಾಸ್ವಾಮಿ ಕುಟುಂಬಕ್ಕೆ ಆರ್ಥಿಕ ನೆರವು ನೀಡುವ ಬಗ್ಗೆ ಚರ್ಚಿಸಿ ತೀರ್ಮಾನ; ಕೇಸಿನಲ್ಲಿ ಯಾರೇ ಭಾಗಿಯಾಗಿದ್ದರೂ ಕ್ರಮ: ಡಾ ಜಿ ಪರಮೇಶ್ವರ್

ನಟ ದರ್ಶನ್ ತೂಗುದೀಪ ಸಹಚರರಿಂದ ಹತ್ಯೆಯಾಗಿದ್ದಾರೆ ಎಂದು ಹೇಳಲಾಗುತ್ತಿರುವ ರೇಣುಕಾಸ್ವಾಮಿ ಕುಟುಂಬಕ್ಕೆ ಆರ್ಥಿಕ ನೆರವು ನೀಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಜೊತೆಗೆ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ.
ಪವಿತ್ರಾ ಗೌಡ, ದರ್ಶನ್, ಮತ್ತು ಕೊಲೆಯಾದ ರೇಣುಕಾಸ್ವಾಮಿ(ಸಂಗ್ರಹ ಚಿತ್ರ)
ಪವಿತ್ರಾ ಗೌಡ, ದರ್ಶನ್, ಮತ್ತು ಕೊಲೆಯಾದ ರೇಣುಕಾಸ್ವಾಮಿ(ಸಂಗ್ರಹ ಚಿತ್ರ)
Updated on

ಬೆಂಗಳೂರು: ನಟ ದರ್ಶನ್ ತೂಗುದೀಪ ಸಹಚರರಿಂದ ಹತ್ಯೆಯಾಗಿದ್ದಾರೆ ಎಂದು ಹೇಳಲಾಗುತ್ತಿರುವ ರೇಣುಕಾಸ್ವಾಮಿ ಕುಟುಂಬಕ್ಕೆ ಆರ್ಥಿಕ ನೆರವು ನೀಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಜೊತೆಗೆ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರೇಣುಕಾಸ್ವಾಮಿ ಕುಟುಂಬಸ್ಥರನ್ನು ಭೇಟಿ ಮಾಡಲು ನಿನ್ನೆ ತೆರಳಬೇಕಿತ್ತು. ಆದರೆ, ಬಕ್ರೀದ್ ಹಬ್ಬ ಇದ್ದರಿಂದ ಹೋಗಲು ಸಾಧ್ಯವಾಗಿಲ್ಲ. ರೇಣುಕಾಸ್ವಾಮಿ ಮನೆಗೆ ಭೇಟಿ ಕೊಟ್ಟು ಧೈರ್ಯ ಹೇಳಿ ಬರುತ್ತೇನೆ ಎಂದರು.

ರೇಣುಕಾಸ್ವಾಮಿ ಕುಟುಂಬದ ಸದಸ್ಯರಿಗೆ ಆರ್ಥಿಕ ನೆರವು ನೀಡುವ ಬಗ್ಗೆ, ತನಿಖೆ ನಡೆದ ಬಳಿಕ ಆರ್ಥಿಕ ನೆರವು ಬಗ್ಗೆ ಚರ್ಚೆ ಮಾಡುತ್ತೇವೆ. ಸರ್ಕಾರದಿಂದ ನೆರವು ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇನೆ ಎಂದರು.

ಪವಿತ್ರಾ ಗೌಡ, ದರ್ಶನ್, ಮತ್ತು ಕೊಲೆಯಾದ ರೇಣುಕಾಸ್ವಾಮಿ(ಸಂಗ್ರಹ ಚಿತ್ರ)
ನಟ ದರ್ಶನ್‌ಗೆ ಸಾಲು ಸಾಲು ಸಂಕಷ್ಟ: ರಾಜಕಾಲುವೆ ಒತ್ತುವರಿ ಕೇಸ್‌ಗೆ ಮರುಜೀವ; ತೂಗುದೀಪ ನಿವಾಸಕ್ಕೂ ಸಂಚಕಾರ!

ಸಂಬಂಧಪಟ್ಟವರನ್ನು ತನಿಖೆ ಮಾಡಲಾಗುವುದು: ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಚಿಕ್ಕಣ್ಣಗೆ ನೋಟಿಸ್‌ ನೀಡಿರುವ ಬಗ್ಗೆ, ಸಿನಿಮಾ ನಟರು ಆಗಿರೋದ್ರಿಂದ ಕಲಾವಿದರು ಸಂಪರ್ಕದಲ್ಲಿರುವುದು ಸಹಜ. ಸಾಕ್ಷ್ಯಾಧಾರಗಳ ಮೇಲೆ ತನಿಖೆ ಮುಂದುವರೆಯುತ್ತದೆ. ಈ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಅವರನ್ನು ತನಿಖೆ ಮಾಡಲಾಗುವುದು ಎಂದರು. ಸದ್ಯ ಪ್ರಕರಣದ ತನಿಖೆ ನಡೆಯುತ್ತಿದ್ದು, ದರ್ಶನ್ ಸೇರಿದಂತೆ 19 ಜನರು ಬಂಧನದಲ್ಲಿದ್ದಾರೆ.

ಪೆಟ್ರೋಲ್ ದರ ಏರಿಕೆ ಪ್ರತಿಭಟನೆ ಎದುರಿಸುತ್ತೇವೆ: ಪಿಎಸ್ ಐ ನೇಮಕಾತಿ ಅಂತಿಮ ಹಂತದಲ್ಲಿದೆ. ಟೆಕ್ಷಿಕಲ್ ಪ್ರಶ್ನೆಗಳನ್ನ ತೆಗೆದಿದ್ದಾರೆ. ಈ ವಾರ ಅಥವಾ ಮುಂದಿನ ವಾರ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ ಬಗ್ಗೆ, ಪ್ರತಿಭಟನೆ ಮಾಡೋದು ಅವರ ಹಕ್ಕು. ಬಿಜೆಪಿಯವರು ಪ್ರತಿಯೊಂದರಲ್ಲೂ ರಾಜಕಾರಣ ಮಾಡ್ತಾರೆ. 14 ಬಾರಿ ಪೆಟ್ರೋಲ್ ಬೆಲೆ ಏರಿಕೆ ಮಾಡಿದ್ದಾರೆ. ಕಚ್ಚಾತೈಲ ಬ್ಯಾರಲ್ ಕಡಿಮೆ ಇದ್ದರೂ ಜಾಸ್ತಿ ಮಾಡಿದರು. ಅದನ್ನು ಬಿಜೆಪಿಯವರು ನೆನಪಿಟ್ಟುಕೊಳ್ಳಲಿ. ಅವರ ಪ್ರತಿಭಟನೆ ಮಾಡಲಿ ನಾವು ಎದುರಿಸುತ್ತೇವೆ ಎಂದರು.

ಪವಿತ್ರಾ ಗೌಡ, ದರ್ಶನ್, ಮತ್ತು ಕೊಲೆಯಾದ ರೇಣುಕಾಸ್ವಾಮಿ(ಸಂಗ್ರಹ ಚಿತ್ರ)
ನಟ ದರ್ಶನ್ ಪ್ರಕರಣ: ಪೊಲೀಸರ ಮುಂದೆ ಹಾಸ್ಯ ನಟ ಚಿಕ್ಕಣ್ಣ ಹೇಳಿದ್ದು ಹೀಗೆ...

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com