ಹಾಸನ: ಜಮೀನು-ಹಣಕಾಸು ವಿಚಾರವಾಗಿ ಓರ್ವನ ಗುಂಡಿಕ್ಕಿ ಕೊಂದು ಮತ್ತೋರ್ವ ಆತ್ಮಹತ್ಯೆ

ಜಮೀನು ಸಮಸ್ಯೆ ಕುರಿತು ಚರ್ಚೆ ನಡೆಸುತ್ತಿದ್ದ ವೇಳೆ ಮಾತಿನ ಚಕಮಕಿ ನಡೆಯಿತು. ಈ ಸಂದರ್ಭದಲ್ಲಿ ಆಸಿಫ್ ಶರಫತ್ ಅಲಿ ಮೇಲೆ ಗುಂಡು ಹಾರಿಸಿ ಅದೇ ಆಯುಧದಿಂದ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
Hassan Shootout
ಮೃತ ಆಸಿಫ್
Updated on

ಹಾಸನ: ಹಾಸನದ ಹೊಯ್ಸಳ‌ ನಗರ ಬಡಾವಣೆಯಲ್ಲಿ ಗುರುವಾರ ಮಧ್ಯಾಹ್ನ ಹಾಡಹಗಲೇ ಫೈರಿಂಗ್ ನಡೆದಿದ್ದು, ಸುತ್ತಮುತ್ತಲ ಜನರನ್ನು ಬೆಚ್ಚಿಬೀಳಿಸಿದೆ.

ಮೃತರನ್ನು ಹಾಸನ ನಗರದ ಶರಫತ್ ಅಲಿ (45) ಮತ್ತು ಆಸಿಫ್ (43) ಎಂದು ಗುರುತಿಸಲಾಗಿದೆ. ಇಬ್ಬರೂ ಖಾಲಿ ನಿವೇಶನ ಖರೀದಿಸಲು ಹೋದಾಗ ಈ ಘಟನೆ ನಡೆದಿದೆ.

ಹಾಸನದ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ ಎಂಎಸ್ ಅವರ ಪ್ರಕಾರ, ಶುಂಠಿ ವ್ಯಾಪಾರಿ ಶರಫತ್ ಅಲಿ ಮತ್ತು ರಿಯಲ್ ಎಸ್ಟೇಟ್ ಮಾಲೀಕ ಆಸಿಫ್ ಅಲಿ ಕಾರಿನಲ್ಲಿ ಬಂದು ನಿವೇಶನದ ಮುಂದೆ ಜಮೀನು ಮತ್ತು ಹಣಕಾಸಿನ ವಿಚಾರವಾಗಿ ಚರ್ಚಿಸಿದರು.

ಜಮೀನು ಸಮಸ್ಯೆ ಕುರಿತು ಚರ್ಚೆ ನಡೆಸುತ್ತಿದ್ದ ವೇಳೆ ಮಾತಿನ ಚಕಮಕಿ ನಡೆಯಿತು. ಈ ಸಂದರ್ಭದಲ್ಲಿ ಆಸಿಫ್ ಶರಫತ್ ಅಲಿ ಮೇಲೆ ಗುಂಡು ಹಾರಿಸಿ ಅದೇ ಆಯುಧದಿಂದ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಶರಫತ್ ಅಲಿ ಮತ್ತು ಆಸಿಫ್ ಸ್ನೇಹಿತರಾಗಿದ್ದು, ಹಲವು ವ್ಯವಹಾರಗಳಲ್ಲಿ ಪಾಲುದಾರಿಕೆ ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಶರಫತ್ ಅಲಿ ದೇಹ ಕಾರಿನ ಮುಂದೆ ಬಿದ್ದಿದ್ದರೆ, ಕಾರಿನ ಒಳಗೆ ಸೀಟ್ ಮೇಲೆ ಆಸಿಫ್ ಮೃತದೇಹ ಪತ್ತೆಯಾಗಿದೆ.

ಘಟನಾ ಸ್ಥಳಕ್ಕೆ ಬೆರಳಚ್ಚು ತಜ್ಞರು ಹಾಗೂ ಸಿಬ್ಬಂದಿ ವಿಧಿ ವಿಜ್ಞಾನ ಪ್ರಯೋಗಾಲಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಾಹನದಲ್ಲಿದ್ದ ಪಿಸ್ತೂಲ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇಬ್ಬರೂ ದಶಕದಿಂದ ಶುಂಠಿ ವ್ಯಾಪಾರ ಮಾಡುತ್ತಿದ್ದು, ಆರು ತಿಂಗಳ ಹಿಂದೆ ಪರಸ್ಪರ ಜಗಳವಾಡಿಕೊಂಡು ರಾಜಿ ಮಾಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪೊಲೀಸರು ಮೃತದೇಹಗಳನ್ನು ಹಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com