ಕೋಲಾರ: ಆನಂದ ಮಾರ್ಗ ಆಶ್ರಮದಲ್ಲಿ ಹೊಡೆದಾಟ; ಸ್ವಾಮೀಜಿ ಬರ್ಬರ ಕೊಲೆ

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಸಂತಳ್ಳಿಯಲ್ಲಿರುವ ಆನಂದ ಮಾರ್ಗ ಆಶ್ರಮದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ ವೇಳೆ ಹಿರಿಯ ಸ್ವಾಮೀಜಿ ಒಬ್ಬರ ಬರ್ಬರ ಹತ್ಯೆಯಾಗಿದೆ.
ಆಚಾರ್ಯ ಚಿನ್ಮಯಾನಂದ ಸ್ವಾಮಿಜೀ
ಆಚಾರ್ಯ ಚಿನ್ಮಯಾನಂದ ಸ್ವಾಮಿಜೀ
Updated on

ಕೋಲಾರ: ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಸಂತಳ್ಳಿಯಲ್ಲಿರುವ ಆನಂದ ಮಾರ್ಗ ಆಶ್ರಮದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ ವೇಳೆ ಹಿರಿಯ ಸ್ವಾಮೀಜಿ ಒಬ್ಬರ ಬರ್ಬರ ಹತ್ಯೆಯಾಗಿದೆ.

ಕೊಲೆಯ ಸ್ವಾಮಿಜೀಯನ್ನು ಆಚಾರ್ಯ ಚಿನ್ಮಯಾನಂದ ಎಂದು ತಿಳಿದುಬಂದಿದೆ. ಆಚಾರ್ಯ ಧರ್ಮ ಪ್ರಾಣಾನಂದ ಅವರ ಗುಂಪಿನಿಂದ ಹತ್ಯೆ ನಡೆದಿದೆ. ಈ ಕುರಿತು ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸಂತಳ್ಳಿ ಗ್ರಾಮದ ನಾಲ್ಕು ಎಕರೆ ಜಾಗದಲ್ಲಿ ಆಶ್ರಮ ಇದ್ದು ಹಲವು ವರ್ಷಗಳಿಂದ ಜಾಗದ ಕುರಿತಂತೆ ವಿವಾದ ನಡೆಯುತ್ತಿದೆ. ಇಂದು ಬೆಳಿಗ್ಗೆ ಕೋರ್ಟ್​ಗೆ ದಾಖಲೆ ಸಹಿತ ಹೋಗುವ ವೇಳೆ ಮಾರಣಾಂತಿಕ ಹಲ್ಲೆ ನಡೆದಿದೆ ಎನ್ನಲಾಗಿದೆ.

ಆಚಾರ್ಯ ಚಿನ್ಮಯಾನಂದ ಸ್ವಾಮಿಜೀ
ಆಸ್ತಿ ವಿವಾದ?: ಮೈಸೂರಿನ ಅನ್ನದಾನೇಶ್ವರ ಮಠದ ಹಿರಿಯ ಸ್ವಾಮೀಜಿ ಬರ್ಬರ ಕೊಲೆ

ಮಾರಣಾಂತಿಕ ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿದ್ದ ಚಿನ್ಮಯಾನಂದ ಅವರನ್ನು ಆರ್.ಎಲ್ ಜಾಲಪ್ಪ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸ್ವಾಮೀಜಿ ಮೃತಪಟ್ಟಿದ್ದಾರೆ.

ಈ ಕೊಲೆ ಸಂಬಂಧ ಆಚಾರ್ಯ ಧರ್ಮ ಪ್ರಾಣಾನಂದ ಹಾಗೂ ಅರುಣ್ ಎಂಬುವವರನ್ನು ಮಾಲೂರು ಪೊಲೀಸ್​ ಅಧಿಕಾರಿಗಳು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com