ರಾತ್ರಿಯಿಡೀ ನಿದ್ದೆಯಿಲ್ಲ, ನಸುಕಿನ ಜಾವ ವಾಕಿಂಗ್... ಜೈಲಿನಲ್ಲಿ ಪರಿತಪಿಸುತ್ತಿರುವ ಪವಿತ್ರಾ ಗೌಡ

ಜೈಲು ಸೇರಿದ ದಿನ ರಾತ್ರಿಯಿಡೀ ನಿದ್ದೆ ಮಾಡಲು ಸಾಧ್ಯವಾಗದೆ ಪರಿತಪ್ಪಿಸಿದ್ದಾರೆ, ಬೆಳಗ್ಗೆ 5 ಗಂಟೆಗೆ ಎಚ್ಚರವಾಗಿ 5 ಗಂಟೆಗೆ ಎಚ್ಚರಗೊಂಡು ಬ್ಯಾರಕ್‌ನಲ್ಲಿ ವಾಕಿಂಗ್ ಮಾಡಿದರು ಎಂದು ಇಲ್ಲಿನ ಸಿಬ್ಬಂದಿ ತಿಳಿಸಿದ್ದಾರೆ.
ಪವಿತ್ರಾ ಗೌಡ (ಸಂಗ್ರಹ ಚಿತ್ರ)
ಪವಿತ್ರಾ ಗೌಡ (ಸಂಗ್ರಹ ಚಿತ್ರ)
Updated on

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಸ್ಟಡಿಯಿಂದ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಪವಿತ್ರಾ ಗೌಡ ಮತ್ತು ಇತರ 12 ಆರೋಪಿಗಳಿಗೆ ಬೆಂಗಳೂರು ಕೇಂದ್ರ ಕಾರಾಗೃಹದ ಅಧಿಕಾರಿಗಳು ಪರಪ್ಪನ ಅಗ್ರಹಾರದಲ್ಲಿರುವ ವಿಚಾರಣಾ ಕೈದಿ (UTP) ಸಂಖ್ಯೆಗಳನ್ನು ನೀಡಿದ್ದಾರೆ.

ನಿನ್ನೆ ಯುಟಿಪಿ ಸಂಖ್ಯೆಗಳನ್ನು ನೀಡಲಾಗಿದ್ದು, ಪವಿತ್ರಾ ಗೌಡ ಯುಟಿಪಿ 6024 ಪಡೆದುಕೊಂಡಿದ್ದಾರೆ. ಪ್ರಕರಣದಲ್ಲಿ ಬಂಧಿತರಾದ 47 ವರ್ಷದ ದರ್ಶನ್ ತೂಗುದೀಪ ಸೇರಿದಂತೆ 17 ಜನರ ಪೈಕಿ ಪವಿತ್ರಾ ಏಕೈಕ ಮಹಿಳಾ ಆರೋಪಿಯಾಗಿದ್ದಾರೆ. ಆಕೆಯನ್ನು ಮಹಿಳಾ ಕ್ವಾರಂಟೈನ್ ಸೆಲ್‌ನಲ್ಲಿ ಇರಿಸಲಾಗಿದ್ದು, ಇತರ 11 ಆರೋಪಿಗಳನ್ನು ಪುರುಷ ಕೈದಿಗಳ ಕ್ವಾರಂಟೈನ್ ಸೆಲ್‌ನಲ್ಲಿ ಇರಿಸಲಾಗಿದೆ. ಎಲ್ಲರೂ ಸಾಮಾನ್ಯ ವೈದ್ಯಕೀಯ ತಪಾಸಣೆಗೆ ಒಳಗಾದರು.

ಆರ್.ಆರ್.ನಗರದ ಕೆಂಚನಹಳ್ಳಿ ರಸ್ತೆಯಲ್ಲಿರುವ ಐಷಾರಾಮಿ ಮನೆಯಲ್ಲಿ ರೆಡ್ ಕಾರ್ಪೆಟ್ ಬೊಟಿಕ್ ನಡೆಸಿಕೊಂಡು ಐಷಾರಾಮಿ ಜೀವನ ನಡೆಸುತ್ತಿದ್ದ ಆರೋಪಿ ನಂಬರ್ 1 ಪವಿತ್ರಾ, ಜೈಲು ಸೇರಿದ ದಿನ ರಾತ್ರಿಯಿಡೀ ನಿದ್ದೆ ಮಾಡಲು ಸಾಧ್ಯವಾಗದೆ ಪರಿತಪ್ಪಿಸಿದ್ದಾರೆ, ಬೆಳಗ್ಗೆ 5 ಗಂಟೆಗೆ ಎಚ್ಚರವಾಗಿ 5 ಗಂಟೆಗೆ ಎಚ್ಚರಗೊಂಡು ಬ್ಯಾರಕ್‌ನಲ್ಲಿ ವಾಕಿಂಗ್ ಮಾಡಿದರು ಎಂದು ಇಲ್ಲಿನ ಸಿಬ್ಬಂದಿ ತಿಳಿಸಿದ್ದಾರೆ.

ಈ ನಡುವೆ ನಟ ದರ್ಶನ್, ಡಿ ಧನರಾಜ್‌ ಅಲಿಯಾಸ್‌ ರಾಜು, ವಿ ವಿನಯ್‌, ಗಿರಿನಗರದ ಜೆಪಿ ರಸ್ತೆಯ ಎಸ್‌ ಪ್ರದೋಶ್‌ ವಿರುದ್ಧ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಇಂದು ಅವರ ಕಸ್ಟಡಿ ಕೊನೆಯಾಗಲಿದ್ದು, ಮತ್ತೆ ಪೊಲೀಸ್ ಕಸ್ಟಡಿಗೆ ಬರುವ ಸಾಧ್ಯತೆ ಕಡಿಮೆಯಿದೆ. ನಾಲ್ವರು ಆರೋಪಿಗಳನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಲಾಯಿತು. ದರ್ಶನ್ ಅವರ ನಿವಾಸದಿಂದ 37 ಲಕ್ಷ ರೂಪಾಯಿ ಮತ್ತು ಬನಶಂಕರಿಯ ಹೊರ ವರ್ತುಲ ರಸ್ತೆಯಲ್ಲಿರುವ ಅವರ ಪತ್ನಿ ವಿಜಯಲಕ್ಷ್ಮಿ ಫ್ಲಾಟ್‌ನಿಂದ 3 ಲಕ್ಷ ರೂಪಾಯಿ ವಶಪಡಿಸಿಕೊಂಡಿದ್ದು, ಹಣದ ಮೂಲವನ್ನು ಹುಡುಕಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

ಶವ ವಿಲೇವಾರಿ ಮಾಡಿದ ನಂತರ ಪೊಲೀಸರಿಗೆ ಶರಣಾಗುವವರಿಗೆ ಪಾವತಿಸಲು ದರ್ಶನ್ ತಮ್ಮ ಸ್ನೇಹಿತನಿಂದ ಹಣದ ಸಹಾಯವನ್ನು ಪಡೆದಿದ್ದಾರೆ ಎಂದು ಹೇಳಲಾಗಿದೆ. ಪ್ರಕರಣದಲ್ಲಿ ತನ್ನ ಹೆಸರು ಬರದಂತೆ ನೋಡಿಕೊಳ್ಳಲು ಅವರು ಹಣವನ್ನು ನೀಡಿದ್ದಾರೆ. ಅವರಿಗೆ ಸಹಾಯ ಮಾಡಲು ರಾಜಕಾರಣಿಗಳು ಮತ್ತು ಇತರರ ಸಹಾಯವನ್ನು ಕೋರಿದ್ದಾರೆ. ಕೊಲೆಯ ನಂತರ ದರ್ಶನ್ ಸಂಪರ್ಕದಲ್ಲಿದ್ದವರ ವಿವರಗಳನ್ನು ಅಧಿಕಾರಿಗಳು ಪತ್ತೆ ಮಾಡುತ್ತಿದ್ದಾರೆ.

ಪವಿತ್ರಾ ಗೌಡ (ಸಂಗ್ರಹ ಚಿತ್ರ)
ರೇಣುಕಾಸ್ವಾಮಿ ಕೊಲೆ ಪ್ರಕರಣ: ಪರಪ್ಪನ ಅಗ್ರಹಾರದಲ್ಲಿ ಪವಿತ್ರಾ ಗೌಡ; ಕೈದಿ ನಂಬರ್ 6024

ರೇಣುಕಾಸ್ವಾಮಿ ಶವ ಎಸೆದ ಮೋರಿಯಲ್ಲಿ ಮೊಬೈಲ್ ಫೋನ್‌ಗಳ ಹುಡುಕಾಟವನ್ನು ಪೊಲೀಸರು ನಡೆಸುತ್ತಿದ್ದಾರೆ. ಚರಂಡಿಗೆ ಎಸೆದಿರುವ ರೇಣುಕಾಸ್ವಾಮಿ ಮೊಬೈಲ್‌ನಲ್ಲಿ ಮಹತ್ವದ ಸಾಕ್ಷ್ಯವಿದೆ. ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿದ್ದ ಆರೋಪಿ ರಾಘವೇಂದ್ರ ಫೋನ್ ಕೂಡ ಚರಂಡಿಗೆ ಎಸೆದಿದ್ದ ಎನ್ನಲಾಗಿದೆ.

ಪಟ್ಟಣಗೆರೆ ಜಯಣ್ಣಗೆ ಬಿಬಿಎಂಪಿ ನೋಟಿಸ್: ರೇಣುಕಾಸ್ವಾಮಿಯನ್ನು ಅಪಹರಿಸಿ ತಂದು ಚಿತ್ರಹಿಂಸೆ ನೀಡಿ ಕೊಂದ ಶೆಡ್ ಪಟ್ಟಣಗೆರೆ ಜಯಣ್ಣ ಅವರಿಗೆ ಸೇರಿದ್ದು, ಬಿಬಿಎಂಪಿಯ ಕಂದಾಯ ಇಲಾಖೆ ನೋಟಿಸ್ ಕಳುಹಿಸಿದೆ. ಕೊಲೆ ಪ್ರಕರಣದ ನಂತರ ಜಮೀನು ಇಲಾಖೆಯ ಗಮನಕ್ಕೆ ಬಂದಿದೆ. ಕಂದಾಯ ನಿರೀಕ್ಷಕರು ಜಯಣ್ಣ ಅವರಿಗೆ ಖುದ್ದು ನೋಟಿಸ್ ನೀಡಿದ್ದು, ಅವರಿಂದ ಜಮೀನಿಗೆ ಸಂಬಂಧಿಸಿದ ದಾಖಲೆಗಳನ್ನು ಕೇಳಿದ್ದಾರೆ ಎಂದು ಕಂದಾಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಜಮೀನು ಈಗ ಬಿಬಿಎಂಪಿ ವ್ಯಾಪ್ತಿಯಲ್ಲಿದ್ದು, 2009 ರಿಂದ ಅನ್ವಯವಾಗುವ ಯಾವುದೇ ತೆರಿಗೆಯನ್ನು ಪಾಲಿಕೆ ನಿಯಮಗಳ ಪ್ರಕಾರ ಸಂಗ್ರಹಿಸಲಾಗುವುದು ಎಂದು ಬಿಬಿಎಂಪಿಯ ಕೆಂಗೇರಿ ಉಪವಿಭಾಗದ ಸಹಾಯಕ ಕಂದಾಯ ಅಧಿಕಾರಿ ಅರುಣ್ ಕುಮಾರ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com