ಬೆಂಗಳೂರು: ತ್ರಿಪುರದಿಂದ ರೈಲಿನ ಮೂಲಕ 32 ಕೆಜಿ ಗಾಂಜಾ ಸಾಗಿಸುತ್ತಿದ್ದ ಗುತ್ತಿಗೆ ನೌಕರ ಸೆರೆ

ಅಗರ್ತಲಾ-ಎಸ್‌ಎಂವಿಟಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಗಾಂಜಾ ಸಾಗಿಸುತ್ತಿದ್ದ ಗುತ್ತಿಗೆ ನೌಕರನನ್ನು ರೈಲ್ವೇ ಪೊಲೀಸರು ಮಂಗಳವಾರ ಬಂಧನಕ್ಕೊಳಪಡಿಸಿದ್ದು, 33 ಲಕ್ಷ ರೂ. ಮೌಲ್ಯದ 32.88 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಅಗರ್ತಲಾ-ಎಸ್‌ಎಂವಿಟಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಗಾಂಜಾ ಸಾಗಿಸುತ್ತಿದ್ದ ಗುತ್ತಿಗೆ ನೌಕರನನ್ನು ರೈಲ್ವೇ ಪೊಲೀಸರು ಮಂಗಳವಾರ ಬಂಧನಕ್ಕೊಳಪಡಿಸಿದ್ದು, 33 ಲಕ್ಷ ರೂ. ಮೌಲ್ಯದ 32.88 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತನನ್ನು ರೈಲ್ವೇ ಹೊರಗುತ್ತಿಗೆ ನೌಕರ ದೀಪಕ್ ದಾಸ್ ಎಂದು ಗುರ್ತಿಸಲಾಗಿದ್ದು, ಪ್ರಕರಣ ಸಂಬಂಧ ಮತ್ತಿಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ನಿಷೇಧಿತ ವಸ್ತುವನ್ನು ರೈಲು ನಂ. 12504 ತ್ರಿಪುರಾದಿಂದ ಬೆಂಗಳೂರು ಬೈಯಪ್ಪನಹಳ್ಳಿ ರೈಲ್ವೇ ಟರ್ಮಿನಲ್ ಗೆ ಸಾಗಿಸಲಾಗಿತ್ತು. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದಾಗ ರೈಲಿನೊಳಗೆ ಪ್ರಯಾಣಿಕರ ಹಾಸಿಗೆ ನೋಡಿಕೊಳ್ಳುತ್ತಿದ್ದ ಗುತ್ತಿಗೆ ನೌಕರ ದೀಪನ್ ದಾಸ್ ಕಿಟ್ ಬ್ಯಾಗ್‌ನಲ್ಲಿ ಬಚ್ಚಿಟ್ಟಿದ್ದ 32.88 ಕೆಜಿ ಗಾಂಜಾವನ್ನು ಸಿಕ್ಕಿದೆ.

ಸಂಗ್ರಹ ಚಿತ್ರ
ಬೆಂಗಳೂರು: 65 ಕೆಜಿಗೂ ಅಧಿಕ ಗಾಂಜಾ ವಶ, ಇಬ್ಬರು ಪೆಡ್ಲರ್ ಗಳ ಬಂಧನ

ಈ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದ್ದು, ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬಂಧಿತ ದೀಪತ್ ದಾಸ್ (20) ಶೆಪೈಜಾಲ್ ಜಿಲ್ಲೆಯವರು, ಪ್ರಕರಣ ಸಂಬಂಧ ನಾಪತ್ತೆಯಾಗಿರುವ ತ್ರಿಪುರಾದ ಸುಮನ್ ಮತ್ತು ಬೆಂಗಳೂರಿನ ಬಿಸ್ವಜಿತ್ ಗಾಗಿ ಹುಡುಕಾಟ ಮುಂದುವರೆದಿದೆ.

ಈ ಸಂಬಂಧ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಮಾದಕ ದ್ರವ್ಯ ಮತ್ತು ಸೈಕೋಟ್ರೋಪಿಕ್ ವಸ್ತುಗಳ ಕಾಯ್ದೆಯ ಸೆಕ್ಷನ್ 20 ಬಿ (2) ಸಿ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com