ರಾಜ್ಯದಲ್ಲಿ ಮತ್ತೆರಡು 'ಎಲೆಕ್ಟ್ರಾನಿಕ್ಸ್ ಮ್ಯಾನುಫ್ಯಾಕ್ಚರಿಂಗ್ ಕ್ಲಸ್ಟರ್' ಸ್ಥಾಪಿಸಲು ಸರ್ಕಾರ ಮುಂದು!

ಎಲೆಕ್ಟ್ರಾನಿಕ್ಸ್ ಮ್ಯಾನುಫ್ಯಾಕ್ಚರಿಂಗ್ ಕ್ಲಸ್ಟರ್ ಯೋಜನೆಯಡಿಯಲ್ಲಿ ಮೈಸೂರು ಜಿಲ್ಲೆಯ ಕೋಚನಹಳ್ಳಿ ಕೈಗಾರಿಕಾ ಪ್ರದೇಶ ಮತ್ತು ಧಾರವಾಡ ಜಿಲ್ಲೆಯ ಕೋಟೂರು-ಬೇಲೂರು ಕೈಗಾರಿಕಾ ಪ್ರದೇಶವನ್ನು ಆಯ್ಕೆ ಮಾಡಿದೆ.
ರಾಜ್ಯದಲ್ಲಿ ಮತ್ತೆರಡು 'ಎಲೆಕ್ಟ್ರಾನಿಕ್ಸ್ ಮ್ಯಾನುಫ್ಯಾಕ್ಚರಿಂಗ್ ಕ್ಲಸ್ಟರ್' ಸ್ಥಾಪಿಸಲು ಸರ್ಕಾರ ಮುಂದು!
Updated on

ಬೆಂಗಳೂರು: ಎಲೆಕ್ಟ್ರಾನಿಕ್ಸ್ ಸಿಸ್ಟಮ್ ಡಿಸೈನ್ ಮತ್ತು ಮ್ಯಾನುಫ್ಯಾಕ್ಚರಿಂಗ್ ವಲಯದಲ್ಲಿ ಹೂಡಿಕೆಗಳನ್ನು ಆಕರ್ಷಿಸಲು ಅಸ್ತಿತ್ವದಲ್ಲಿರುವ ಪರಿಸರ ವ್ಯವಸ್ಥೆಯನ್ನು ನವೀಕರಿಸಲು ರಾಜ್ಯ ಸರ್ಕಾಪ ಎರಡು ಭೂ ಭಾಗಗಳನ್ನು ಅಭಿವೃದ್ಧಿಪಡಿಸುತ್ತಿದ್ದು, ಕ್ಲಸ್ಟರ್ ಸ್ಥಾಪಿಸಲು ಕೇಂದ್ರ ಸರ್ಕಾರದ ಮಾರ್ಪಡಿಸಿದ ಎಲೆಕ್ಟ್ರಾನಿಕ್ಸ್ ಮ್ಯಾನುಫ್ಯಾಕ್ಚರಿಂಗ್ ಕ್ಲಸ್ಟರ್ ಯೋಜನೆಯಡಿಯಲ್ಲಿ ಮೈಸೂರು ಜಿಲ್ಲೆಯ ಕೋಚನಹಳ್ಳಿ ಕೈಗಾರಿಕಾ ಪ್ರದೇಶ ಮತ್ತು ಧಾರವಾಡ ಜಿಲ್ಲೆಯ ಕೋಟೂರು-ಬೇಲೂರು ಕೈಗಾರಿಕಾ ಪ್ರದೇಶವನ್ನು ಆಯ್ಕೆ ಮಾಡಿದೆ. ಬೆಂಗಳೂರು ಮತ್ತು ಸುತ್ತಮುತ್ತಲು ಇನ್ನೂ ಎರಡು ಇಎಂಸಿಗಳನ್ನು ಸ್ಥಾಪಿಸಲು ಸ್ಥಳ ವೀಕ್ಷಣೆ ಮಾಡಲಾಗುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಶನಿವಾರ ಹೇಳಿದರು.

ನೂತನವಾಗಿ ರಚನೆಗೊಂಡ ಕೇಂದ್ರ ಸರ್ಕಾರದ ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ಕರ್ನಾಟಕದ ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಕೇಂದ್ರ ಐಟಿ, ಎಲೆಕ್ಟ್ರಾನಿಕ್ಸ್ ಮತ್ತು ಐ&ಬಿ ಸಚಿವರಾದ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ, ಇಲಾಖೆಗೆ ಸಂಬಂಧಿಸಿದ ಪ್ರಸ್ತಾವನೆಯನ್ನು ಮುಂದಿಟ್ಟರು.

ಕರ್ನಾಟಕ ರಾಜ್ಯ ಐಟಿ, ಬಿಟಿ, ಏರೋಸ್ಪೇಸ್, ಆಟೋಮೋಟಿವ್, ಜವಳಿ ಮತ್ತು ಭಾರಿ ಕೈಗಾರಿಕಾ ಕ್ಷೇತ್ರದಲ್ಲಿ ಆರ್ಥಿಕವಾಗಿ ಅಭೂತಪೂರ್ವ ಬೆಳವಣಿಗೆ ಕಾಣುತ್ತಿದೆ. ಕರ್ನಾಟಕವು ಈ ಕ್ಷೇತ್ರಗಳ ಅಭಿವೃದ್ಧಿಗೆ ಸೂಕ್ತ ಸ್ಥಳವಾಗಿದ್ದು, ಹೂಡಿಕೆಗೆ ಅಗಾಧ ಅವಕಾಶವಿರುವ ಬಗ್ಗೆ ಉಲ್ಲೇಖಿಸಿದರು.

ಟೆಕ್ ಹಬ್ ಮತ್ತು ಸಿಲಿಕಾನ್ ವ್ಯಾಲಿ ಆಫ್ ಇಂಡಿಯಾ ಎಂದು ಬೆಂಗಳೂರು ಗುರುತಿಸಿಕೊಂಡಿದೆ. ಬೆಂಗಳೂರು ಸೆಮಿಕಂಡಕ್ಟರ್ ಮತ್ತು ಎಲೆಕ್ಟ್ರಾನಿಕ್ಸ್ ಡೊಮೇನ್, ಫಿನ್ಟೆಕ್ ಸ್ಪೇಸ್, ಎಂಟರ್ಪ್ರೈಸ್ ಟೆಕ್, ಇ-ಕಾಮರ್ಸ್ ಮತ್ತು ಎಡ್-ಟೆಕ್ ಕ್ಷೇತ್ರಗಳಲ್ಲಿ ತೆರೆದ ವೇದಿಕೆಯಾಗಿದೆ. ಕರ್ನಾಟಕದಲ್ಲಿ ಗಿಫ್ಟ್ ಸಿಟಿ ಮಾದರಿಯಲ್ಲಿ ಅವಕಾಶ ತೆರೆದಿಡುವ ಮೂಲಕ ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುವುದರ ಜೊತೆಗೆ, ಹಲವಾರು ಉದ್ಯೋಗಾವಕಾಶಗಳ ಸೃಷ್ಟಿಗೆ ಅವಕಾಶ ಲಭ್ಯವಾಗಲಿದೆ. ಜೊತೆಗೆ ಯತೇಚ್ಚವಾಗಿ ವಿದೇಶಿ ಹೂಡಿಕೆಗಳನ್ನೂ ಆಕರ್ಷಿಸಬಹುದು ಎಂದು ವಿವರಿಸಿದರು.

ರಾಜ್ಯದಲ್ಲಿ ಮತ್ತೆರಡು 'ಎಲೆಕ್ಟ್ರಾನಿಕ್ಸ್ ಮ್ಯಾನುಫ್ಯಾಕ್ಚರಿಂಗ್ ಕ್ಲಸ್ಟರ್' ಸ್ಥಾಪಿಸಲು ಸರ್ಕಾರ ಮುಂದು!
'ಪ್ರಗತಿಪಥ' ಯೋಜನೆ ಅನುಷ್ಠಾನಕ್ಕೆ ಸಚಿವ ಸಂಪುಟ ಸಮ್ಮತಿ; 7,110 ಕಿ.ಮೀ ಗ್ರಾಮೀಣ ರಸ್ತೆ ಅಭಿವೃದ್ಧಿ: ಪ್ರಿಯಾಂಕ್ ಖರ್ಗೆ

4.5 ಶತಕೋಟಿ ಡಾಲರ್ ಮೌಲ್ಯದ ಎಲೆಕ್ಟ್ರಾನಿಕ್ ರಫ್ತುಗಳೊಂದಿಗೆ ರಾಜ್ಯವು ದೇಶದಲ್ಲಿ ಮೂರನೇ ಸ್ಥಾನದಲ್ಲಿದೆ. ಶೇ.46ರಷ್ಟು ರಾಷ್ಟ್ರೀಯ ಪಾಲನ್ನು ಹೊಂದಿದ್ದು, ಭಾರತದ ಕೈಗಾರಿಕಾ ಉತ್ಪಾದನೆಗೆ ಶೇ.10ರಷ್ಟು ಕೊಡುಗೆ ನೀಡುತ್ತಿದೆ ಎಂದು ಸಚಿವರು ಹೇಳಿದರು. ರಾಜ್ಯವು 300ಕ್ಕೂ ಹೆಚ್ಚು ರಫ್ತು-ಆಧಾರಿತ ಉತ್ಪಾದನಾ ಘಟಕಗಳಿಗೆ ನೆಲೆಯಾಗಿದೆ. ಭಾರತದಲ್ಲಿ ಕರ್ನಾಟಕವು ಅತಿದೊಡ್ಡ ಚಿಪ್ ವಿನ್ಯಾಸ ಕೇಂದ್ರವನ್ನು ಹೊಂದಿದೆ. 100ಕ್ಕೂ ಹೆಚ್ಚು ಫ್ಯಾಬುಲೆಸ್ ಚಿಪ್ ವಿನ್ಯಾಸ ಕೇಂದ್ರಗಳನ್ನು ಹೊಂದಿದ್ದು, ಭಾರತದಲ್ಲಿ ಏರೋಸ್ಪೇಸ್ ಮತ್ತು ರಕ್ಷಣಾ ಸಾಧನಗಳ ಪ್ರಮುಖ ತಯಾರಕ ಸ್ಥಾನವಾಗಿದೆ. ಇದು ಅನೇಕ ಆಟೋಮೊಬೈಲ್ ತಯಾರಿಕೆ, ಆರ್ನೆಡಿಕಲ್ ಸಾಧನಗಳ ತಯಾರಿಕೆ, ಭಾರಿ ವಿದ್ಯುತ್ ಯಂತ್ರೋಪಕರಣಗಳ ಕಂಪನಿಗಳನ್ನೂ ಹೊಂದಿದೆ ಎಂದು ವಿವರಿಸಿದರು.

ಎಲೆಕ್ಟ್ರಾನಿಕ್ಸ್ ಸಿಸ್ಟಮ್ ಡಿಸೈನ್ ಮತ್ತು ಮ್ಯಾನುಫ್ಯಾಕ್ಚರಿಂಗ್ ವಲಯದಲ್ಲಿ ಹೂಡಿಕೆಗಳನ್ನು ಆಕರ್ಷಿಸಲು ಅಸ್ತಿತ್ವದಲ್ಲಿರುವ ಪರಿಸರ ವ್ಯವಸ್ಥೆಯನ್ನು ನವೀಕರಿಸಲು, ಕರ್ನಾಟಕವು ಎರಡು ಭೂ ಭಾಗಗಳನ್ನು ಅಭಿವೃದ್ಧಿಪಡಿಸುತ್ತಿದೆ. ಕ್ಲಸ್ಟರ್ ಸ್ಥಾಪಿಸಲು ಕೇಂದ್ರ ಸರ್ಕಾರದ ಮಾರ್ಪಡಿಸಿದ ಎಲೆಕ್ಟ್ರಾನಿಕ್ಸ್ ಮ್ಯಾನುಫ್ಯಾಕ್ಚರಿಂಗ್ ಕ್ಲಸ್ಟರ್ ಯೋಜನೆಯಡಿ ಮೈಸೂರು ಜಿಲ್ಲೆಯ ಕೋಚನಹಳ್ಳಿ ಕೈಗಾರಿಕಾ ಪ್ರದೇಶ ಮತ್ತು ಧಾರವಾಡ ಜಿಲ್ಲೆಯ ಕೋಟೂರು-ಬೇಲೂರು ಕೈಗಾರಿಕಾ ಪ್ರದೇಶವನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರು ಮತ್ತು ಸುತ್ತಮುತ್ತಲು ಇನ್ನೂ ಎರಡು ಇಎಂಸಿಗಳನ್ನು ಸ್ಥಾಪಿಸಲು ಸ್ಥಳ ವೀಕ್ಷಣೆ ಮಾಡಲಾಗುತ್ತಿದೆ, ಹೂಡಿಕೆದಾರರು ಅಂತಿಮ ಭೂ ಮಂಜೂರಾತಿಗಾಗಿ ಕಾಯುತ್ತಿರುವುದರಿಂದ ಅನುಮೋದನೆಗಳನ್ನು ತ್ವರಿತವಾಗಿ ಮಾಡುವಂತೆ ಮನವಿ ಮಾಡಿದರು.

ಐಟಿ ಬಿಟಿ ಕ್ಷೇತ್ರದಲ್ಲಿ ಮೂಲಸೌಕರ್ಯಗಳನ್ನು ಸುಧಾರಿಸಲು, ಉದ್ಯಮ-ನಿರ್ದಿಷ್ಟ ಕೌಶಲ್ಯ ಕಾರ್ಯಕ್ರಮಗಳನ್ನು ಅಭಿವೃದ್ಧಿಪಡಿಸಲು ಮತ್ತು ಕೌಶಲ್ಯದ ಅವಶ್ಯಕತೆ ಮತ್ತು ರಾಜ್ಯದಲ್ಲಿ ಸಂಶೋಧನೆ ಸೇರಿದಂತೆ ಇಲಾಖೆಯ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ಅಗತ್ಯ ಅನುದಾನದ ಬೆಂಬಲ ನೀಡುವಂತೆ ಕೋರಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com